ಎಸ್.ಪಿ. ಬಾಲಸುಬ್ರಹ್ಮಣ್ಯಂ ಪಾರ್ಥಿವ ಶರೀರ 
ದೇಶ

ಎಸ್ ಪಿ ಬಾಲಸುಬ್ರಹ್ಮಣ್ಯಂ ಪಾರ್ಥಿವ ಶರೀರ ನಿವಾಸಕ್ಕೆ, ನಾಳೆ ಅಂತ್ಯಕ್ರಿಯೆ

ಇಂದು ಮಧ್ಯಾಹ್ನ ನಿಧನರಾದ ಗಾನ ಗಾರುಡಿಗ, ಪದ್ಮವಿಭೂಷಣ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಪಾರ್ಥಿವ ಶರೀರವನ್ನು ಇಲ್ಲಿನ ಅವರ ನಿವಾಸಕ್ಕೆ ತರಲಾಗಿದ್ದು, ಅಪಾರ ಸಂಖ್ಯೆಯ ಅಭಿಮಾನಿಗಳು ಮನೆಯತ್ತ ಧಾವಿಸುತ್ತಿದ್ದಾರೆ.

ಚೆನ್ನೈ: ಇಂದು ಮಧ್ಯಾಹ್ನ ನಿಧನರಾದ ಗಾನ ಗಾರುಡಿಗ, ಪದ್ಮವಿಭೂಷಣ ಎಸ್. ಪಿ. ಬಾಲಸುಬ್ರಹ್ಮಣ್ಯಂ ಅವರ ಪಾರ್ಥಿವ ಶರೀರವನ್ನು ಇಲ್ಲಿನ ಅವರ ನಣಗಂಬುಕಂ ನಿವಾಸಕ್ಕೆ ತರಲಾಗಿದ್ದು,ಶನಿವಾರ ಬೆಳಗ್ಗೆ ಅವರ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬ ಸದಸ್ಯರು ನಿರ್ಧರಿಸಿದ್ದಾರೆ.

ಕುಟುಂಬಸ್ಥರು,ಸ್ನೇಹಿತರು ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಮನೆಯತ್ತ ಧಾವಿಸುತ್ತಿದ್ದು,ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಸೇರಿದಂತೆ ಸುಮಾರು 50 ಸಾವಿರ ಗೀತೆಗಳಿಗೆ ಧ್ವನಿಯಾಗುವ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ ಎಸ್. ಬಿ. ಬಾಲಸುಬ್ರಹ್ಮಣ್ಯಂ ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ಕೊನೆಯುಸಿರೆಳೆದರು.

ಕೊರೋನಾವೈರಸ್ ವಿರುದ್ಧ ಎರಡು ತಿಂಗಳು ಹೋರಾಟ ನಡೆಸಿದ 74 ವರ್ಷದ ಹಿರಿಯ ಗಾಯಕ, ಚಿಕಿತ್ಸೆ ಫಲಕಾರಿಯಾಗಿದೆ ಮೃತಪಟ್ಟಿದ್ದು, ದೇಶಾದ್ಯಂತ ಅವರ ಅಭಿಮಾನಿಗಳಲ್ಲಿ ದು:ಖದ ಕಾರ್ಮೋಡ ಆವರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT