ಭಾರತದ ಪವನ್ ಬಾಧೆ 
ದೇಶ

ಕೋವಿಡ್-19: ಉಗ್ರರಿಂದ ಆರ್ಥಿಕ, ಭಾವನಾತ್ಮಕ ಯಾತನೆಗಳ ದುರುಪಯೋಗ- ವಿಶ್ವಸಂಸ್ಥೆಯಲ್ಲಿ ಭಾರತ

ವ್ಯಾಪಕವಾದ ಕೋವಿಡ್-19 ಕಾರಣ, ಸಮಾಜಗಳ ಒಗ್ಗೂಡಿಸುವಿಕೆಯನ್ನು ಭಂಗಗೊಳಿಸಲು ಲಾಕ್‌ಡೌನ್‌ಗಳಿಂದ ಉಂಟಾಗುವ ಆರ್ಥಿಕ ಮತ್ತು ಭಾವನಾತ್ಮಕ ಯಾತನೆಗಳನ್ನು ದುರುಪಯೋಗಪಡಿಸಿಕೊಳ್ಳುವ ದುಷ್ಕೃತ್ಯಗಳನ್ನು ಉಗ್ರರು ನಡೆಸುತ್ತಿದ್ದಾರೆ ಎಂದು ಭಾರತ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ  45 ನೇ ಅಧಿವೇಶನದಲ್ಲಿ ತಿಳಿಸಿದೆ.

ಜಿನಿವಾ: ವ್ಯಾಪಕವಾದ ಕೋವಿಡ್-19 ಕಾರಣ, ಸಮಾಜಗಳ ಒಗ್ಗೂಡಿಸುವಿಕೆಯನ್ನು ಭಂಗಗೊಳಿಸಲು ಲಾಕ್‌ಡೌನ್‌ಗಳಿಂದ ಉಂಟಾಗುವ ಆರ್ಥಿಕ ಮತ್ತು ಭಾವನಾತ್ಮಕ ಯಾತನೆಗಳನ್ನು ದುರುಪಯೋಗಪಡಿಸಿಕೊಳ್ಳುವ ದುಷ್ಕೃತ್ಯಗಳನ್ನು ಉಗ್ರರು ನಡೆಸುತ್ತಿದ್ದಾರೆ ಎಂದು ಭಾರತ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ  45 ನೇ ಅಧಿವೇಶನದಲ್ಲಿ ತಿಳಿಸಿದೆ.

ಜಿನಿವಾದಲ್ಲಿ ಮಾನವ ಹಕ್ಕುಗಳ ಮಂಡಳಿಯ 45ನೇ ಅಧಿವೇಶನದಲ್ಲಿ ಮಾತನಾಡಿದ ವಿಶ್ವಸಂಸ್ಥೆಗೆ ಭಾರತದ ಶಾಶ್ವತ ಮಿಷನ್ ಮೊದಲ ಕಾರ್ಯದರ್ಶಿ ಪವನ್ ಬಾದೆ, ಭದ್ರತಾ ಪಡೆ ಮತ್ತು ಆರೋಗ್ಯ ಕಾರ್ಯಕರ್ತರನ್ನು ಗುರಿಯಾಗಿಸಲು ಭಯೋತ್ಪಾದಕ ಗುಂಪುಗಳು ಬೆಂಬಲಿಗರಿಗೆ ಸೂಚಿಸಿದ್ದಾರೆ.ಚಾರಿಟಬಲ್ ಚಟುವಟಿಕೆ ಹೆಸರಿನಲ್ಲಿ  ನಿಷೇಧಿತ ಉಗ್ರ ಸಂಘಟನೆಗಳಿಂದ ನಿಧಿ ಸಂಗ್ರಹಣೆ ಮತ್ತೊಂದು ಟ್ರೆಂಡ್ ಆಗಿದೆ. ವಾಸ್ತವವಾಗಿ ಇದನ್ನು ಉಗ್ರರಿಗೆ ಹಣಕಾಸು ನೀಡಲು ಬಳಸಿಕೊಳ್ಳಲಾಗುತ್ತಿದೆ ಎಂದರು.

ಆನ್‌ಲೈನ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ  ದ್ವೇಷ ಭಾಷಣಗಳು, ನಕಲಿ ಸುದ್ದಿಗಳು, ವೀಡಿಯೊಗಳ ಮೂಲಕ ತಪ್ಪು ಮಾಹಿತಿಯನ್ನು ಪ್ರಸಾರ ಮಾಡಲು ಭಯೋತ್ಪಾದಕರು ಗುರಿಯಾಗಿಸಿಕೊಂಡಿದ್ದಾರೆ. ಬಡ ವ್ಯಕ್ತಿಗಳೊಂದಿಗೆ  ಸಂಪರ್ಕವನ್ನು ಸ್ಥಾಪಿಸುವುದು ಮತ್ತು ಅವರನ್ನು ತಮ್ಮ ತಂಡಕ್ಕೆ ನೇಮಕ ಮಾಡಿಕೊಳ್ಳುವುದು ಇವರ ಉದ್ದೇಶವಾಗಿದೆ ಎಂದು ಪವನ್ ಬಾಧೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT