ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ಸುನಿಲ್ ಅರೋರಾ 
ದೇಶ

ಸೆ.29ರಂದು ಉಪ ಚುನಾವಣೆ ಕುರಿತು ನಿರ್ಧಾರ: ಕೇಂದ್ರ ಚುನಾವಣಾ ಆಯೋಗ

ಸೆಪ್ಟೆಂಬರ್ 29ರಂದು ಉಪ ಚುನಾವಣೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ಸುನಿಲ್ ಅರೋರಾ ಅವರು ಹೇಳಿದ್ದಾರೆ.

ನವದೆಹಲಿ: ಸೆಪ್ಟೆಂಬರ್ 29ರಂದು ಉಪ ಚುನಾವಣೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗದ ಅಧ್ಯಕ್ಷ ಸುನಿಲ್ ಅರೋರಾ ಅವರು ಹೇಳಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣಾ ದಿನಾಂಕದ ಕುರಿತು ಘೋಷಣೆ ಕುರಿತು ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಿಧ ಕಾರಣಗಳಿಂದ ತೆರವಾಗಿರುವ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳ ಸ್ಥಾನಕ್ಕೆ ಉಪಚುನಾವಣೆ ನಡೆಸುವ ಬಗ್ಗೆ ಸೆ.29ರಂದು ತೀರ್ಮಾನಿಸಲಾಗುವುದೆಂದು ಹೇಳಿದರು.

ಕರ್ನಾಟಕದ 2, ಮಧ್ಯಪ್ರದೇಶದ 27 ಸೇರಿ ವಿವಿಧ ರಾಜ್ಯಗಳ 64 ಅಸೆಂಬ್ಲಿ ಹಾಗೂ ಬಿಹಾರದ ವಾಲ್ಮೀಕಿ, ತಮಿಳುನಾಡಿನ ಕನ್ಯಾಕುಮಾರಿ, ಕರ್ನಾಟಕದ ಬೆಳಗಾವಿ ಸೇರಿ 4 ಲೋಕಸಭಾ ಕ್ಷೇತ್ರಗಳು ಖಾಲಿ ಇವೆ. ಚತ್ತೀಸ್‌ಗಢ, ಹರಿಯಾಣ, ಕರ್ನಾಟಕ ಮತ್ತು ಪಶ್ಚಿಮ ಬಂಗಾಳದಲ್ಲಿ ತಲಾ ಒಂದು ವಿಧಾನಸಭೆ ಮತ್ತು ಅಸ್ಸಾಂ, ಜಾರ್ಖಂಡ್, ಕೇರಳ, ನಾಗಾಲ್ಯಾಂಡ್, ತಮಿಳುನಾಡು ಮತ್ತು ಒಡಿಶಾದಲ್ಲಿ ತಲಾ ಎರಡು ಸ್ಥಾನಗಳು, ಮಣಿಪುರದಲ್ಲಿ ಐದು ವಿಧಾನಸಭೆ ಮತ್ತು ಗುಜರಾತ್ ಮತ್ತು ಉತ್ತರಪ್ರದೇಶದಲ್ಲಿ ತಲಾ ಎಂಟು ಸ್ಥಾನಗಳು ಖಾಲಿ ಇವೆ ಎಂದು ಆಯೋಗ ಮಾಹಿತಿ ನೀಡಿದೆ. 

ಈಗಾಗಲೇ ಈ ಸಂಬಂಧ ಚುನಾವಣಾ ಆಯೋಗದ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಈ ಹಿಂದೆ ಬಿಹಾರ ವಿಧಾನಸಭೆ ಚುನಾವಣೆಯೊಂದಿಗೇ ಉಪ ಚುನಾವಣೆ ನಡೆಸುವಸಾಧ್ಯತೆ ಇದೆ ಎಂದು ಹೇಳಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT