ಬುಡಕಟ್ಟು ಕ್ರಿಶ್ಚಿಯನ್ನರು 
ದೇಶ

ಜಾರ್ಖಂಡ್: ಬುಡಕಟ್ಟು ಕ್ರಿಶ್ಚಿಯನ್ನರಿಗೆ ‘ಜೈ ಶ್ರೀ ರಾಮ್’ ಹೇಳುವಂತೆ ಬಲವಂತ, ಹಲ್ಲೆಗೈದು ತಲೆ ಬೋಳಿಸಿದ ದುಷ್ಕರ್ಮಿಗಳು

ಗೋಹತ್ಯೆ ಮಾಡಿದ್ದಾರೆ ಎಂಬ ಅನುಮಾನದ ಮೇಲೆ ಏಳು ಬುಡಕಟ್ಟು ಕ್ರೈಸ್ತರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿ, ತಲೆ ಬೋಳಿಸಿದ್ದಲ್ಲದೆ ಅವರಿಗೆ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಬಲವಂತ ಮಾಡಿದ ಕ್ರೂರ ಘಟನೆ ಜಾರ್ಖಂಡ್ ನ ಸಿಮ್ಡೆಗಾದ ಭೇರಿಕುದಾರ್ ಗ್ರಾಮದಲ್ಲಿ ನಡೆದಿದೆ.

ರಾಂಚಿ: ಗೋಹತ್ಯೆ ಮಾಡಿದ್ದಾರೆ ಎಂಬ ಅನುಮಾನದ ಮೇಲೆ ಏಳು ಬುಡಕಟ್ಟು ಕ್ರೈಸ್ತರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿ, ತಲೆ ಬೋಳಿಸಿದ್ದಲ್ಲದೆ ಅವರಿಗೆ ‘ಜೈ ಶ್ರೀ ರಾಮ್’ ಎಂದು ಹೇಳುವಂತೆ ಬಲವಂತ ಮಾಡಿದ ಕ್ರೂರ ಘಟನೆ ಜಾರ್ಖಂಡ್ ನ ಸಿಮ್ಡೆಗಾದ ಭೇರಿಕುದಾರ್ ಗ್ರಾಮದಲ್ಲಿ ನಡೆದಿದೆ.

ಗ್ರಾಮಸ್ಥರ ಪ್ರಕಾರ, ಸೆಪ್ಟೆಂಬರ್ 16ರಂದು ಈ ಘಟನೆ ನಡೆದಿದ್ದು, ಬಿದಿರಿನ ಕೋಲು ಮತ್ತು ಕಬ್ಬಿಣದ ಸರಳುಗಳನ್ನು ಹಿಡಿದ ಗ್ರಾಮ ಪ್ರವೇಶಿಸಿದ 60ಕ್ಕೂ ಹೆಚ್ಚು ಜನರ ಗುಂಪು ಬುಡಕಟ್ಟು ಕ್ರೈಸ್ತರ ಮೇಲೆ ಹಲ್ಲೆ ನಡೆಸಿದೆ.

ಸೆಪ್ಟೆಂಬರ್ 16 ರಂದು ಈ ಘಟನೆ ನಡೆದಿದ್ದು, ಮರುದಿನ ದೂರು ದಾಖಲಿಸಲಾಗಿದೆ. ಸೆಪ್ಟೆಂಬರ್ 25 ರಂದು ಸ್ಥಳೀಯ ಕಾರ್ಯಕರ್ತರೊಬ್ಬರು ಈ ವಿಷಯವನ್ನು ಪ್ರಸ್ತಾಪಿಸಿದ ನಂತರವೇ ಈ ವಿಷಯ ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ಸಂಬಂಧ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ನಾಲ್ಕು ಜನರನ್ನು ಬಂಧಿಸಿದ್ದಾರೆ.

“ನಾವು ಒಂಬತ್ತು ಆರೋಪಿಗಳಲ್ಲಿ ನಾಲ್ವರನ್ನು ಬಂಧಿಸಿದ್ದೇವೆ. ಉಳಿದವರಿಗಾಗಿ ಶೋಧ ಮುಂದುವರೆದಿದೆ. ಎಲ್ಲಾ ಆರೋಪಿಗಳ ವಿರುದ್ಧ ಎಸ್ ಸಿ/ಎಸ್ ಟಿ ಕಾಯ್ದೆ ಹಾಗೂ ಇತರೆ ಸೆಕ್ಷನ್ ಗಳಡಿ ಕೇಸ್ ದಾಖಲಿಸಲಾಗಿದೆ”ಎಂದು ಸಿಮ್ಡೆಗಾ ಪೊಲೀಸ್ ವರಿಷ್ಠಾಧಿಕಾರಿ ಶಾಮ್ಸ್ ಟ್ಯಾಬ್ರೆಜ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT