ಮಹಿಂದಾ ರಾಜಪಕ್ಸೆ-ಮೋದಿ 
ದೇಶ

ವರ್ಚುವಲ್ ಶೃಂಗಸಭೆ: ಬೌದ್ಧ ಸಂಬಂಧ ಉತ್ತೇಜಿಸಲು ಭಾರತದಿಂದ ಲಂಕಾಗೆ 15 ಮಿಲಿಯನ್ ಅಮೆರಿಕನ್ ಡಾಲರ್ ನೆರವು

ಉಭಯ ದೇಶಗಳ ನಡುವಿನ ಬೌದ್ಧ ಸಂಬಂಧಗಳ ಉತ್ತೇಜನಕ್ಕಾಗಿ ಭಾರತವು ಶ್ರೀಲಂಕಾಕ್ಕೆ 15 ಮಿಲಿಯನ್ ಅಮೆರಿಕನ್ ಡಾಲರ್ ಅನುದಾನ ನೆರವು ಘೋಷಿಸಿದೆ ಎಂದು ವಿದೇಶಾಂಗ ಸಚಿವಾಲಯ(ಎಂಇಎ) ಶನಿವಾರ ತಿಳಿಸಿದೆ.

ನವದೆಹಲಿ: ಉಭಯ ದೇಶಗಳ ನಡುವಿನ ಬೌದ್ಧ ಸಂಬಂಧಗಳ ಉತ್ತೇಜನಕ್ಕಾಗಿ ಭಾರತವು ಶ್ರೀಲಂಕಾಕ್ಕೆ 15 ಮಿಲಿಯನ್ ಅಮೆರಿಕನ್ ಡಾಲರ್ ಅನುದಾನ ನೆರವು ಘೋಷಿಸಿದೆ ಎಂದು ವಿದೇಶಾಂಗ ಸಚಿವಾಲಯ(ಎಂಇಎ) ಶನಿವಾರ ತಿಳಿಸಿದೆ.

ಭಾರತ-ಶ್ರೀಲಂಕಾ ವರ್ಚುವಲ್ ದ್ವಿಪಕ್ಷೀಯ ಶೃಂಗಸಭೆಯಲ್ಲಿ "ಉಭಯ ದೇಶಗಳ ನಡುವಿನ ದೀರ್ಘ ಮತ್ತು ನಾಗರಿಕ ಸಂಬಂಧಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಾಕ್ಷೀಕರಿಸಿದ ಪ್ರಧಾನಿ ಮೋದಿ, ಉಭಯ ದೇಶಗಳ ನಡುವಿನ ಬೌದ್ಧ ಸಂಬಂಧಗಳ ಉತ್ತೇಜನಕ್ಕಾಗಿ 15 ಮಿಲಿಯನ್ ಅಮೆರಿಕನ್ ಡಾಲರ್ ಅನುದಾನವನ್ನು ಘೋಷಿಸಿದರು ಎಂದು ಹಿಂದೂ ಮಹಾಸಾಗರ ಪ್ರದೇಶ ವಿಭಾಗದ(ಐಒಆರ್) ಜಂಟಿ ಕಾರ್ಯದರ್ಶಿ ಅಮ್ತ್ ನಾರಂಗ್ ಹೇಳಿದ್ದಾರೆ.

"ಈ ಅನುದಾನವು ಬೌದ್ಧಧರ್ಮದ ಕ್ಷೇತ್ರದಲ್ಲಿ ಉಭಯ ದೇಶಗಳ ನಡುವಿನ ಜನರ ಸಂಪರ್ಕವನ್ನು ಗಾಢವಾಗಿಸಲು ಸಹಾಯ ಮಾಡುತ್ತದೆ ಎಂದು ಅವರು ಹೇಳಿದರು.

ಪ್ರಸ್ತುತ ಕೋವಿಡ್ ನಿರ್ಬಂಧ ಹಿನ್ನೆಲೆಯಲ್ಲಿ ವರ್ಚುವಲ್ ಶೃಂಗಸಭೆ ಯಶಸ್ವಿಯಾಗಿ ನಡೆದಿದ್ದು ದ್ವಿಪಕ್ಷೀಯ ಸಂಬಂಧಗಳನ್ನು ಮುಂದಕ್ಕೆ ತೆಗೆದುಕೊಂಡು ಹೋಗುವುದರಲ್ಲಿ ಉಭಯ ನಾಯಕರ ಬದ್ಧತೆ ಪ್ರದರ್ಶನವಾಗಿದೆ ಎಂದು ಎಂಇಎ ಅಧಿಕಾರಿ ಹೇಳಿದ್ದಾರೆ.

ಶೃಂಗಸಭೆಯಲ್ಲಿ, ಉಭಯ ನಾಯಕರು ದ್ವಿಪಕ್ಷೀಯ ವಿಷಯದ ಉನ್ನತ ಶ್ರೇಣಿಯನ್ನು ಪರಿಶೀಲಿಸಿದರು. ಜೊತೆಗೆ ಸಾಮಾನ್ಯ ಒಮ್ಮತದ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದರು.

"ಉತ್ತರ ಪ್ರದೇಶದ ಕುಶಿನಗರಕ್ಕೆ ಮೊದಲ ಉದ್ಘಾಟನಾ ಹಾರಾಟದಲ್ಲಿ ಶ್ರೀಲಂಕಾದಿಂದ ಬೌದ್ಧ ಯಾತ್ರಿಕರ ನಿಯೋಗದ ಭಾರತ ಭೇಟಿಗೆ ಅನುಕೂಲವಾಗಲಿದೆ ಎಂದು ಎಂಇಎ ಅಧಿಕಾರಿ ತಿಳಿಸಿದ್ದಾರೆ.

"ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ಲಂಕಾದಲ್ಲಿನ ಜಾಫ್ನಾ ಸಾಂಸ್ಕೃತಿಕ ಕೇಂದ್ರದ ಬಗ್ಗೆ ವಿಶೇಷವಾಗಿ ಪ್ರಸ್ತಾಪಿಸಿದ್ದಾರೆ. ಇದು ಭಾರತದ ನೆರವಿನೊಂದಿಗೆ ನಿರ್ಮಿಸಲಾದ ಅಪ್ರತಿಮ ಯೋಜನೆಯಾಗಿದೆ. ಕೇಂದ್ರವು ಬಹುತೇಕ ಸಿದ್ಧವಾಗಿದ್ದು ಉದ್ಘಾಟಿಣೆಗಾಗಿ ಪ್ರಧಾನಿ ಮೋದಿಯವರಿಗೆ ಆಹ್ವಾನವನ್ನು ನೀಡಿದರು ಎಂದು ಎಂಇಎ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT