ಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸ ಜೊತೆ ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ದೇಶ

ಮೋದಿ- ರಾಜಪಕ್ಸೆ ವರ್ಚುವಲ್ ಸಭೆ: ಲಂಕಾದಲ್ಲಿ ಅಲ್ಪಸಂಖ್ಯಾತ ತಮಿಳರಿಗೆ ಅಧಿಕಾರ ಹಂಚಿಕೆಗೆ ಭಾರತ ಒತ್ತು

ಸಮಾನತೆ, ನ್ಯಾಯ, ಶಾಂತಿ ಮತ್ತು ಘನತೆಯ ನಿರೀಕ್ಷೆಗಳನ್ನು ಸಾಕಾರಗೊಳಿಸಲು ಮತ್ತು ಶಾಂತಿ, ಸಾಮರಸ್ಯದ ಪ್ರಕ್ರಿಯೆಯನ್ನು ಮುಂದೆ ತೆಗೆದುಕೊಂಡು ಹೋಗಲು ಶ್ರೀಲಂಕಾ ಸರ್ಕಾರ, ದ್ವೀಪದ ಅಲ್ಪಸಂಖ್ಯಾತ ತಮಿಳರಿಗೆ ಅಧಿಕಾರ ಹಂಚಿಕೆಯಾಗಬೇಕು ಎಂಬ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಮುಂದೆ ಪ್ರಸ್ತಾಪಿಸಿದ್ದಾರೆ.

ನವದೆಹಲಿ: ಸಮಾನತೆ, ನ್ಯಾಯ, ಶಾಂತಿ ಮತ್ತು ಘನತೆಯ ನಿರೀಕ್ಷೆಗಳನ್ನು ಸಾಕಾರಗೊಳಿಸಲು ಮತ್ತು ಶಾಂತಿ, ಸಾಮರಸ್ಯದ ಪ್ರಕ್ರಿಯೆಯನ್ನು ಮುಂದೆ ತೆಗೆದುಕೊಂಡು ಹೋಗಲು ಶ್ರೀಲಂಕಾ ಸರ್ಕಾರ, ದ್ವೀಪದ ಅಲ್ಪಸಂಖ್ಯಾತ ತಮಿಳರಿಗೆ ಅಧಿಕಾರ ಹಂಚಿಕೆಯಾಗಬೇಕು ಎಂಬ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಶ್ರೀಲಂಕಾ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರ ಮುಂದೆ ಪ್ರಸ್ತಾಪಿಸಿದ್ದಾರೆ.

ಇಂದು ಪ್ರಧಾನಿ ಮೋದಿ ಅವರು ರಾಜಪಕ್ಸೆ ಅವರೊಂದಿಗೆ ವರ್ಚುವಲ್ ದ್ವಿಪಕ್ಷೀಯ ಸಭೆ ನಡೆಸಿದರು. ಈ ವೇಳೆ ಶ್ರೀಲಂಕಾ ಸಂವಿಧಾನದ 13ನೇ ತಿದ್ದುಪಡಿಯನ್ನು ಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಿ ಹೇಳಿದರು. ಶಾಂತಿ ಮತ್ತು ಸಾಮರಸ್ಯ ಪ್ರಕ್ರಿಯೆಗೆ ಇದು ಅವಶ್ಯಕವಾಗಿದೆ ಎಂದು ವಿದೇಶಾಂಗ ಸಚಿವಾಲಯ(ಎಂಇಎ) ತಿಳಿಸಿದೆ.

13ನೇ ತಿದ್ದುಪಡಿಯು ನೆರೆಯ ದೇಶದಲ್ಲಿ ತಮಿಳು ಸಮುದಾಯಕ್ಕೆ ಅಧಿಕಾರ ಹಂಚಿಕೆಗೆ ಅವಕಾಶ ನೀಡುತ್ತದೆ.

1987ರ ಇಂಡೋ-ಶ್ರೀಲಂಕಾ ಒಪ್ಪಂದದ ನಂತರ ತರಲಾದ 13ನೇ ತಿದ್ದುಪಡಿಯನ್ನು ಜಾರಿಗೆ ತರಲು ಭಾರತ, ಶ್ರೀಲಂಕಾವನ್ನು ಒತ್ತಾಯಿಸುತ್ತಿದೆ.

'ಭಾರತ ಮತ್ತು ಶ್ರೀಲಂಕಾ ನಡುವೆ ಹೊಸ ಅಧ್ಯಾಯವನ್ನು ಶುರುಮಾಡುವ ಅವಕಾಶ ನಮಗೆ ಬಂದೊಗಿದೆ. ಉಭಯ ದೇಶಗಳ ನಡುವಣ ಜನರೂ ಇಂಥ ಬೆಳವಣಿಗೆಯನ್ನು ಹೊಸ ನಿರೀಕ್ಷೆಗಳೊಂದಿಗೆ ಗಮನಿಸುತ್ತಿದ್ದಾರೆ' ಎಂದೂ ಮೋದಿ ಹೇಳಿದರು.

ರಾಜಪಕ್ಸ ಅವರು ಶ್ರೀಲಂಕಾದ ಪ್ರಧಾನಿಯಾಗಿ ಆ. 9ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಶ್ರೀಲಂಕಾ ಜೊತೆಗಿನ ಸಂಬಂಧ ವೃದ್ಧಿಗೆ ಭಾರತ ಆದ್ಯತೆ ನೀಡಲಿದೆ ಎಂದ ಮೋದಿ ಅವರು 'ಸಾಗರ್' (ಸರ್ವ ವಲಯಗಳಲ್ಲೂ ಸುರಕ್ಷತೆ ಮತ್ತು ಅಭಿವೃದ್ಧಿ) ಯೋಜನೆ ಕುರಿತ ನೀತಿ ಉಲ್ಲೇಖಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

B-52 Bomber Bursts: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಭೀಕರ ವಿಮಾನ ಅಪಘಾತ, ಬಿ-52 ಬಾಂಬರ್ ಪತನ, 8 ಮಂದಿ ಸಾವು! Video

'ಆಸ್ತಿ ಘೋಷಿಸಲು ಕುಮಾರಸ್ವಾಮಿ ಸಿದ್ಧವೇ?: ಡಿಕೆ ಶಿವಕುಮಾರ್ ನಿಮ್ಮ ಇಡೀ ಕುಟುಂಬದ ಜಾತಕ ಬಿಚ್ಚಿಡಲಿದ್ದಾರೆ'

15 ಕೋಟಿ ರೂ. ಕೊಟ್ರೆ ದುಬೈ ಶೇಖ್ ಜೊತೆ ಮಲಗಬಹುದು! Influencer ಅಪೂರ್ವ ಮುಖಿಜಾ Video ಮತ್ತೆ ವೈರಲ್! ಏನಿದು ಹೊಸ ವಿವಾದ?

ಸ್ಯಾಂಡಲ್ ವುಡ್ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ತಾಯಿ ಜಯಮ್ಮ ನಿಧನ!

ಶಕ್ತಿ ಯೋಜನೆಯಡಿ 'ಸ್ಮಾರ್ಟ್ ಕಾರ್ಡ್' ವಿತರಣೆಗೆ ಅಂತಿಮ ಸಿದ್ಧತೆ- ಸಚಿವ ಬೈರತಿ ಸುರೇಶ್

SCROLL FOR NEXT