ದೇಶ

ರೈಲು ನಿಲ್ದಾಣಗಳ ಪುನಾಭಿವೃದ್ಧಿಗಾಗಿ ಪ್ರಯಾಣಿಕರಿಗೆ 10-35 ರೂ. ಬಳಕೆದಾರ ಶುಲ್ಕ ವಿಧಿಸಲು ಮುಂದಾದ ರೈಲ್ವೆ ಇಲಾಖೆ?

ಅತ್ಯಾಧುನಿಕ ಸೌಕರ್ಯಗಳೊಂದಿಗೆ ರಲು ನಿಲ್ದಾಣಗಳನ್ನು ಪುನರಾಭಿವೃದ್ಧಿಪಡಿಸಲು  ರೈಲ್ವೆ ಪ್ರಯಾಣಿಕರು ಟಿಕೆಟ್ ದರಗಳಿಗೆ ಹೆಚ್ಚುವರಿ 10-35 ರೂ.  ನೀಡಬೇಕಾಗಬಹುದು ಎಂದು ಮೂಲಗಳು ಹೇಳಿದೆ.

ನವದೆಹಲಿ: ಅತ್ಯಾಧುನಿಕ ಸೌಕರ್ಯಗಳೊಂದಿಗೆ ರಲು ನಿಲ್ದಾಣಗಳನ್ನು ಪುನರಾಭಿವೃದ್ಧಿಪಡಿಸಲು  ರೈಲ್ವೆ ಪ್ರಯಾಣಿಕರು ಟಿಕೆಟ್ ದರಗಳಿಗೆ ಹೆಚ್ಚುವರಿ 10-35 ರೂ.  ನೀಡಬೇಕಾಗಬಹುದು ಎಂದು ಮೂಲಗಳು ಹೇಳಿದೆ.

ರೈಲ್ವೆ ಅಂತಿಮಗೊಳಿಸಬೇಕಿರುವ ಪ್ರಸ್ತಾವನೆಯ ಭಾಗ ಇದಾಗಿದ್ದು, ಶೀಘ್ರದಲ್ಲೇ ಕ್ಯಾಬಿನೆಟ್ ಅನುಮೋದನೆಗೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಬಳಕೆದಾರರ ಶುಲ್ಕವು ಕ್ಲಾಸ್ ಗೆ ಅನುಗುಣವಾಗಿ ಬದಲಾಗುತ್ತದೆ - ಇದು ಎಸಿ ಪ್ರಥಮ ದರ್ಜೆ ಪ್ರಯಾಣಿಕರಿಗೆ ಹೆಚ್ಚಿನ ಬೆಲೆಯೊಂದಿಗೆ 10 ರಿಂದ 35 ರೂ. ಆಗಿರಲಿದೆ. ಹೆಚ್ಚಿನ ಜನದಟ್ಟಣೆ ಹಿಂದಿರುವ ನಿಲ್ದಾಣಗಳಲ್ಲಿ ಮಾತ್ರ ಬಳಕೆದಾರರ ಶುಲ್ಕವನ್ನು ವಿಧಿಸಲಾಗುವುದು ಎಂದು ರೈಲ್ವೆ ಈ ಹಿಂದೆ ಸ್ಪಷ್ಟಪಡಿಸಿತ್ತು. ದೇಶದ ಒಟ್ಟು 7,000 ರೈಲ್ವೆ ನಿಲ್ದಾಣಗಳಲ್ಲಿ ಸುಮಾರು 700-1,000 ನಿಲ್ದಾನಗಳೂ ಈ ವಿಭಾಗದಲ್ಲಿ ಬರುತ್ತದೆ.

ವಿಮಾನ ಪ್ರಯಾಣಿಕರಿಗೆ ವಿಧಿಸಲಾಗುವ ಇಂತಹ ಶುಲ್ಕವನ್ನು ರೈಲು ಬಳಕೆದಾರರಿಂದ ವಸೂಲಿ ಮಾಡುತ್ತಿರುವುದು ಇದು ಮೊದಲ ಬಾರುಯಾಗಿದೆ. ವಿವಿಧ ವಿಮಾನ ನಿಲ್ದಾಣಗಳಲ್ಲಿ ಯುಡಿಎಫ್ ಶುಲ್ಕ ವಿಧಿಸಲಾಗುತ್ತದೆ ಮತ್ತುಈ ದರ ನಗರದಿಂದ ನಗರಕ್ಕೆ ಬದಲಾಗುತ್ತದೆ.

"ಬಳಕೆದಾರರ ಶುಲ್ಕಗಳು ಮೂಲಭೂತವಾಗಿ ಒಂದು ಸಣ್ಣ ಟೋಕನ್ ಮೊತ್ತವಾಗಿದ್ದು, ಅದನ್ನು ಸಂಗ್ರಹಿಸಿದಾಗ, ರೈಲ್ವೆ ನಿಲ್ದಾಣದಲ್ಲಿನ ಎಲ್ಲಾ ಪ್ರಯಾಣಿಕರಿಗೆ ಅನುಕೂಲಗಳು ಮತ್ತು ಸೌಲಭ್ಯಗಳ ಸುಧಾರಣೆಗೆ ಮತ್ತೆ ಬಳಕೆ ಮಾಡಲಾಗುತ್ತದೆ." ಎಂದು ರೈಲ್ವೆ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

"ಈ ಶುಲ್ಕದ ಮೊತ್ತವು ತುಂಬಾ ಸಮಂಜಸವಾದದ್ದು ಹಾಗೂ  ಕನಿಷ್ಠವಾದದ್ದು ಎಂದು ನಿರೀಕ್ಷಿಸಲಾಗಿದೆ ಇದರಿಂದ ಯಾರೊಬ್ಬರಲ್ಲೂ ವಿಶೇಷವಾಗಿ ಸಾಮಾನ್ಯ ಜನರ ಮೇಲೆ ಯಾವುದೇ ಹೊರೆ ಬೀಳುವುದಿಲ್ಲ. ಈ ಕಡಿಮೆ ಶುಲ್ಕವನ್ನು  ಪಾದಚಾರಿ ಮಾರ್ಗವಿರುವ ನಿಲ್ದಾಣಗಳಲ್ಲಿ ಮಾತ್ರ ವಿಧಿಸಲಾಗುತ್ತದೆ. ಇದನ್ನು ಆಯಾ ನಿಲ್ದಾಣಗಳ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ ಬಳಸಲಾಗುತ್ತದೆಎಂದು ಅವರು ಹೇಳಿದರು. ಈ ವಿಷಯವು ಪರಿಶೀಲನೆಯಲ್ಲಿದೆ ಮತ್ತು ಬಳಕೆದಾರರ ಶುಲ್ಕದ ಬಗ್ಗೆ ಯಾವುದೇ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗಿಲ್ಲ ಎಂದು ವಕ್ತಾರರು ಹೇಳಿದರು. "ಆದರೆ ಒಂದು ವಿಷಯ ನಿಶ್ಚಿತ, ಈ ಬಳಕೆದಾರರ ಶುಲ್ಕಗಳುತೆ ಕನಿಷ್ಠವಾಗಿರುತ್ತದೆ ಮತ್ತು ಯಾವುದೇ ವಿಭಾಗದ ಪ್ರಯಾಣಿಕರಿಗೆ ಹೊರೆಯಾಗಿರುವುದಿಲ್ಲ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT