ಅಕಾಲಿದಳದ ನಾಯಕ ಸುಖ್ಬೀರ್ ಸಿಂಗ್ ಬಾದಲ್-ಮೋದಿ 
ದೇಶ

ಅಕಾಲಿದಳ ತೊರೆದ ಮೇಲೆ ಎನ್ ಡಿಎ ದಲ್ಲಿ ಏನುಳಿದಿದೆ?: ಬಿಜೆಪಿ ಬಗ್ಗೆ ಶಿವಸೇನೆ ಸಾಮ್ನಾ ವ್ಯಂಗ್ಯ

ಕೃಷಿ ಮಸೂದೆಗಳನ್ನು ವಿರೋಧಿಸಿ ಶಿರೋಮಣಿ ಅಕಾಲಿ ದಳ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಬೆನ್ನಲ್ಲೇ ಬಿಜೆಪಿ ಬಗ್ಗೆ ಶಿವಸೇನೆ ವ್ಯಂಗ್ಯವಾಡಿದೆ. 

ನವದೆಹಲಿ: ಕೃಷಿ ಮಸೂದೆಗಳನ್ನು ವಿರೋಧಿಸಿ ಶಿರೋಮಣಿ ಅಕಾಲಿ ದಳ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ಬೆನ್ನಲ್ಲೇ ಬಿಜೆಪಿ ಬಗ್ಗೆ ಶಿವಸೇನೆ ವ್ಯಂಗ್ಯವಾಡಿದೆ. 

ಶಿರೋಮಣಿ ಅಕಾಲಿದಳ ಬಿಜೆಪಿ ಮೈತ್ರಿಕೂಟ ತೊರೆದ ಬಳಿಕ ಬಿಜೆಪಿ ನೇತೃತ್ವದ ಮೈತ್ರಿಕೂಟ ಇನ್ನೂ ಅಸ್ತಿತ್ವದಲ್ಲಿದೆಯೇ? ಇದ್ದರೆ ಯಾರೆಲ್ಲಾ ಮೈತ್ರಿಕೂಟದಲ್ಲಿದ್ದಾರೆ ಎಂದು ವ್ಯಂಗ್ಯವಾಗಿ ಸಾಮ್ನಾ ಪತ್ರಿಕೆಯಲ್ಲಿ ಪ್ರಶ್ನಿಸಿದೆ. 

ಎನ್ ಡಿಎ ಯ ಕೊನೆಯ ಪಿಲ್ಲರ್ ಶಿರೋಮಣಿ ಅಕಾಲಿ ದಳ ಮೈತ್ರಿ ತೊರೆಯುವುದನ್ನು ತಡೆಯುವುದಕ್ಕೆ ಯಾವುದೇ ಪ್ರಯತ್ನಗಳೂ ಆಗದೇ ಇರುವುದು ಅಚ್ಚರಿ ಮೂಡಿಸಿದೆ ಎಂದು ಸಾಮ್ನಾ ಪತ್ರಿಕೆ ಹೇಳಿದೆ. 

ಶಿವಸೇನೆ ಹಾಗೂ ಶಿರೋಮಣಿ ಅಕಾಲಿದಳ ಎನ್ ಡಿಎಯಿಂದ ಹೊರನಡೆದ ಬಳಿಕ ಎನ್ ಡಿಎಯಲ್ಲಿ ಏನು ಉಳಿದಿದೆ? ಎನ್ ಡಿಎ ಜೊತೆಗೆ ಇನ್ನೂ ಇರುವವರಿಗೂ ಹಿಂದುತ್ವಕ್ಕೂ ಏನಾದರೂ ಸಂಬಂಧವಿದೆಯೇ ಎಂದು ಶಿವಸೇನೆ ಪ್ರಶ್ನಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT