ಮಮತಾ ಬ್ಯಾನರ್ಜಿ 
ದೇಶ

'ನನಗೆ ಕೊರೋನಾ ಬಂದರೆ ಮಮತಾ ಬ್ಯಾನರ್ಜಿ ತಬ್ಬಿಕೊಳ್ಳುತ್ತೇನೆ': ಬಿಜೆಪಿ ಮುಖಂಡ

ಒಂದು ವೇಳೆ ನನಗೆ ಕೋವಿಡ್-19 ಸೋಂಕು ತಗುಲಿದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುವುದಾಗಿ ಹೊಸದಾಗಿ ನೇಮಕಗೊಂಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಜ್ರಾ ಹೇಳಿದ್ದಾರೆ.

ಕೊಲ್ಕತ್ತಾ: ಒಂದು ವೇಳೆ ನನಗೆ ಕೋವಿಡ್-19 ಸೋಂಕು ತಗುಲಿದರೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ತಬ್ಬಿಕೊಳ್ಳುವುದಾಗಿ ಹೊಸದಾಗಿ ನೇಮಕಗೊಂಡಿರುವ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನುಪಮ್ ಹಜ್ರಾ ಹೇಳಿದ್ದಾರೆ.

ಕೋವಿಡ್-19 ರೋಗಿಗಳ ಕುಟುಂಬಗಳ ನೋವನ್ನು ಅನುಭವಿಸುವಂತೆ ಮಾಡಲು ಈ ರೀತಿ ಮಾಡುವುದಾಗಿ ದಕ್ಷಿಣ 24 ಪರಗಣದ ಬರುಯಿಪುರದಲ್ಲಿ ಭಾನುವಾರ ಸಂಜೆ ನಡೆದ ಪಕ್ಷದ ಕಾರ್ಯಕ್ರಮದಲ್ಲಿ ಹಜ್ರಾ ನೀಡಿರುವ ಹೇಳಿಕೆ ವಿರುದ್ಧ ಸಿಲಿಗುರಿಯಲ್ಲಿ ಟಿಎಂಸಿ ಪೊಲೀಸ್ ದೂರು ದಾಖಲಿಸಿದೆ.

ನಮ್ಮ ಪಕ್ಷದ ಕಾರ್ಯಕರ್ತರು ಕೊರೋನಾಗಿಂತಲೂ ದೊಡ್ಡ ಶತ್ರುವಾಗಿರುವ ಮಮತಾ ಬ್ಯಾನರ್ಜಿ ವಿರುದ್ಧ ಹೋರಾಡುತ್ತಿದ್ದಾರೆ. ಒಂದು ವೇಳೆ ನನಗೆ ಕೊರೋನಾವೈರಸ್ ತಗುಲಿದರೆ ಮಮತಾ ಬ್ಯಾನರ್ಜಿಯನ್ನು ತಬ್ಬಿಕೊಳ್ಳಲು ನಿರ್ಧರಿಸಿರುವುದಾಗಿ ಹೇಳಿದರು.

ಕೋವಿಡ್ -19 ರೋಗಿಗಳ ಶವಗಳನ್ನು ರಾಜ್ಯದಲ್ಲಿ ಅಂತ್ಯಕ್ರಿಯೆ ನಡೆಸುವ ರೀತಿ ಕರುಣಾಜನಕವಾಗಿದೆ. ಮೃತದೇಹಗಳನ್ನು ಸೀಮೆಎಣ್ಣೆಯಿಂದ ಸುಡಲಾಗುತ್ತಿದೆ. ಕೋವಿಡ್-19 ನಿಂದ ಮೃತಪಟ್ಟ ಪೋಷಕರ ಮುಖಗಳನ್ನು ಮಕ್ಕಳಿಗೆ ತೋರಿಸುತ್ತಿಲ್ಲ.ನಾವು ಸತ್ತ ಬೆಕ್ಕುಗಳು ಅಥವಾ ನಾಯಿಗಳನ್ನು ಸಹ ಆ ರೀತಿಯಲ್ಲಿ ಪರಿಗಣಿಸುವುದಿಲ್ಲ ಎಂದು ಅವರು ತಿಳಿಸಿದರು.

ಅನುಪಮ್ ಹಜ್ರಾ ಅವರ ಹೇಳಿಕೆಯನ್ನು ಖಂಡಿಸಿರುವ ಹಿರಿಯ ಟಿಎಂಸಿ ಮುಖಂಡ ಸೌಗಾತೊ ರಾಯ್, ಇದು ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT