ಮೆಹಬೂಬ ಮುಫ್ತಿ 
ದೇಶ

ಮೆಹಬೂಬ ಮುಫ್ತಿಯವರನ್ನು ಇನ್ನು ಎಷ್ಟು ದಿನ ಗೃಹ ಬಂಧನದಲ್ಲಿ ಇಡುತ್ತೀರಿ: ಸುಪ್ರೀಂ ಕೋರ್ಟ್ ಪ್ರಶ್ನೆ

ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿಯವರನ್ನು ಇನ್ನು ಎಷ್ಟು ಸಮಯ ಮತ್ತು ಯಾವ ಆದೇಶದ ಮೇಲೆ ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಜಮ್ಮು-ಕಾಶ್ಮೀರ ಸರ್ಕಾರವನ್ನು ಪ್ರಶ್ನಿಸಿದೆ.

ನವದೆಹಲಿ: ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿಯವರನ್ನು ಇನ್ನು ಎಷ್ಟು ಸಮಯ ಮತ್ತು ಯಾವ ಆದೇಶದ ಮೇಲೆ ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಜಮ್ಮು-ಕಾಶ್ಮೀರ ಸರ್ಕಾರವನ್ನು ಪ್ರಶ್ನಿಸಿದೆ.

ಮೆಹಬೂಬ ಮುಫ್ತಿಯವರ ಮಗಳು ಇಲ್ತಿಜಾ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್ ನ ಇಬ್ಬರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಪ್ರಶ್ನೆ ಮಾಡಿದೆ. ಅವರು ಜಮ್ಮು-ಕಾಶ್ಮೀರ ಸರ್ಕಾರದ ಪರವಾಗಿ ನ್ಯಾಯಾಲಯ ಮುಂದೆ ವಿಚಾರಣೆಗೆ ಹಾಜರಾಗಿದ್ದು ಮೆಹಬೂಬ ಮುಫ್ತಿ ಅವರ ಪುತ್ರಿ ಇಲ್ತಿಜಾ ಅವರ ಅರ್ಜಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ತಮ್ಮ ತಾಯಿ ಮೆಹಬೂಬ ಮುಫ್ತಿ ಅವರನ್ನು ಕೂಡಲೇ ಗೃಹ ಬಂಧನದಿಂದ ಬಿಡುಗಡೆ ಮಾಡುವಂತೆ ಕೋರಿ ಇಲ್ತಿಜಾ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.ಅವರ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ ಹಿರಿಯ ವಕೀಲ ನಿತ್ಯ ರಾಮಕೃಷ್ಣನ್, ಮೆಹಬೂಬ ಮುಫ್ತಿ ಅವರಿಗೆ ತಮ್ಮ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದರು.
ವಾದ-ಪ್ರತಿವಾದ ಆಲಿಸಿದ ನ್ಯಾಯರ್ತಿ ಸಂಜಯ್ ಕಿಶನ್ ಕೌಲ್, ಕೇಂದ್ರ ಸರ್ಕಾರಕ್ಕೆ ವಿಸ್ತೃತವಾಗಿ ಪ್ರತಿಕ್ರಿಯೆ ನೀಡಲು ಒಂದು ವಾರ ಕಾಲಾವಕಾಶ ನೀಡಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 15ಕ್ಕೆ ಮುಂದೂಡಿದರು.

ಜಮ್ಮು-ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ಸಂವಿಧಾನ ವಿಧಿ 370ನ್ನು ಕಳೆದ ವರ್ಷ ಆಗಸ್ಟ್ 5ರಂದು ರದ್ದುಮಾಡಿದ ನಂತರ ಮೆಹಬೂಬ ಮುಫ್ತಿ, ಫಾರೂಕ್ ಅಬ್ದುಲ್ಲಾ ಸೇರಿದಂತೆ ಅನೇಕ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿರಿಸಲಾಗಿತ್ತು. ಕಳೆದ ಮಾರ್ಚ್ ನಲ್ಲಿ ಫಾರೂಕ್ ಅಬ್ದುಲ್ಲಾ ಮತ್ತು ಅವರ ಪುತ್ರ ಒಮರ್ ಅಬ್ದುಲ್ಲಾ ಅವರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT