ಕಾಶಿ ವಿಶ್ವನಾಥ ದೇವಾಲಯ, ಜ್ಞಾನವಾಪಿ ಮಸೀದಿ 
ದೇಶ

ಕಾಶಿ ವಿಶ್ವನಾಥ ದೇವಾಲಯ, ಜ್ಞಾನವಾಪಿ ಮಸೀದಿ ಎಎಸ್‌ಐ ಸಮೀಕ್ಷೆಗೆ ವಾರಣಾಸಿ ಕೋರ್ಟ್ ಒಪ್ಪಿಗೆ

ಪ್ರಸಿದ್ಧ ಯಾತ್ರಾಸ್ಥಳ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ವಾರಣಾಸಿ ನ್ಯಾಯಾಲಯವು ಗುರುವಾರ (ಏಪ್ರಿಲ್ 8) ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿಗೆ (ಎಎಸ್‌ಐ) ಅನುಮತಿ ನೀಡಿತು.

ವಾರಣಾಸಿ: ಪ್ರಸಿದ್ಧ ಯಾತ್ರಾಸ್ಥಳ ಕಾಶಿ ವಿಶ್ವನಾಥ ದೇವಸ್ಥಾನ ಮತ್ತು ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆ ನಡೆಸಲು ವಾರಣಾಸಿ ನ್ಯಾಯಾಲಯವು ಗುರುವಾರ (ಏಪ್ರಿಲ್ 8) ಭಾರತೀಯ ಪುರಾತತ್ವ ಸರ್ವೇಕ್ಷಣಾ ಮಂಡಳಿಗೆ (ಎಎಸ್‌ಐ) ಅನುಮತಿ ನೀಡಿತು.

ವಾರಣಾಸಿಯ ಜಿಲ್ಲಾ ನ್ಯಾಯಾಲಯ (ಫಾಸ್ಟ್ ಟ್ರ್ಯಾಕ್ ಕೋರ್ಟ್) ಎಎಸ್‌ಐ ಸಮೀಕ್ಷೆಗೆ ಅನುಮತಿ ನೀಡಿದೆ.

ಸಮೀಕ್ಷೆಯ ವೆಚ್ಚವನ್ನು ಉತ್ತರ ಪ್ರದೇಶ ಸರ್ಕಾರ ಭರಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಫಾಸ್ಟ್ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶ ಅಶುತೋಷ್ ತಿವಾರಿ ಈ ಆದೇಶ ನೀಡಿದ್ದಾರೆ. 

ಜ್ಞಾನವಾಪಿ ಮಸೀದಿ ಇರುವ ಭೂಮಿಯನ್ನು ಹಿಂದೂಗಳಿಗೆ ಹಸ್ತಾಂತರಿಸುವಂತೆ ಕೋರಿ ವಕೀಲ ವಿಜಯ್ ಶಂಕರ್ ರಸ್ತೋಗಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ವಿಚಾರಣೆ ನಡೆಸಿತು.

ಕಾಶಿ ವಿಶ್ವನಾಥ ದೇವಾಲಯದ ಒಂದು ಭಾಗವನ್ನು ನೆಲಸಮ ಮಾಡಿದ ನಂತರ 1664 ರಲ್ಲಿ ಮೊಘಲ್ ಚಕ್ರವರ್ತಿ ಔರಂಗಜೇಬ್ ಈ ಮಸೀದಿಯನ್ನು ನಿರ್ಮಿಸಿದನೆಂದು ಅರ್ಜಿದಾರರು ಹೇಳಿಕೊಂಡಿದ್ದಾರೆ. 

ಜ್ಞಾನವಾಪಿ ಕಾಂಪೌಂಡ್‌ನ ಸಮೀಕ್ಷೆ ಕೋರಿ ಅರ್ಜಿಯ ವಿರುದ್ಧ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿ 2020 ರ ಜನವರಿಯಲ್ಲಿ ಆಕ್ಷೇಪಣೆ ಸಲ್ಲಿಸಿತ್ತು. ನ್ಯಾಯಾಲಯದ ಆದೇಶದ ನಂತರ, ಎಎಸ್ಐ ಸಮೀಕ್ಷೆ ನಡೆಸಲು ಸಮಿತಿ ರಚಿಸುವ ನಿರೀಕ್ಷೆಯಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!

ಬೆಂಗಳೂರು: ಸಿಗ್ನಲ್‌ನಲ್ಲಿ ನಿಂತಿದ್ದ ಬೈಕ್‌ಗೆ ವೇಗವಾಗಿ ಬಂದ ಕಾರು ಡಿಕ್ಕಿ, ಹೇರ್ ಸ್ಟೈಲಿಸ್ಟ್ ಸಾವು; Video

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!