ಸ್ವಪ್ನಾ 
ದೇಶ

'ಕೆಲಸದ ಒತ್ತಡ': ಕಚೇರಿಯಲ್ಲೇ ಕೆನರಾ ಬ್ಯಾಂಕ್ ಮ್ಯಾನೇಜರ್ ನೇಣಿಗೆ ಶರಣು

'ಕೆಲಸದ ಒತ್ತಡ'ದಿಂದ ನೊಂದ ಮಹಿಳಾ ಬ್ಯಾಂಕ್ ಮ್ಯಾನೇಜರ್ ರೊಬ್ಬರು ಶುಕ್ರವಾರ ಬ್ಯಾಂಕ್ ಒಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಕುತ್ತುಪರಂಬದಲ್ಲಿ ನಡೆದಿದೆ.

ಕಣ್ಣೂರು: 'ಕೆಲಸದ ಒತ್ತಡ'ದಿಂದ ನೊಂದ ಮಹಿಳಾ ಬ್ಯಾಂಕ್ ಮ್ಯಾನೇಜರ್ ರೊಬ್ಬರು ಶುಕ್ರವಾರ ಬ್ಯಾಂಕ್ ಒಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಕೇರಳದ ಕಣ್ಣೂರು ಜಿಲ್ಲೆಯ ಕುತ್ತುಪರಂಬದಲ್ಲಿ ನಡೆದಿದೆ.

ಕೆನರಾ ಬ್ಯಾಂಕಿನ ತೊಕ್ಕಿಲಂಗಡಿ ಶಾಖೆಯ ವ್ಯವಸ್ಥಾಪಕ ಕೆ ಸ್ವಪ್ನಾ(38) ಅವರು ಇಂದು ಬೆಳಗ್ಗೆ 9 ಗಂಟೆಗೆ ಬ್ಯಾಂಕ್ ಕಚೇರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಬೆಳಗ್ಗೆ 9 ಗಂಟೆಗೆ ಕೆಲಸಕ್ಕೆ ಬಂದ ಮಹಿಳಾ ಉದ್ಯೋಗಿಯೊಬ್ಬರು ತಮ್ಮ ಮ್ಯಾನೇಜರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿ ಅಲಾರಾಂ ಒತ್ತಿದ್ದಾರೆ. ತಕ್ಷಣ ಸ್ಥಳೀಯ ಜನರ ಸಹಾಯದಿಂದ ಬ್ಯಾಂಕ್ ಸಿಬ್ಬಂದಿ ಸ್ವಪ್ನಾ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮ್ಯಾನೇಜರ್ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. 

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕುತ್ತುಪರಂಬ ತಾಲ್ಲೂಕು ಆಸ್ಪತ್ರೆಗೆ ಸಾಗಿಸಲಾಗಿದೆ. ಕುತ್ತುಪರಂಬಾ ಎಸಿಪಿ ಕೆ.ಜಿ.ಸುರೇಶ್ ಮತ್ತು ಎಸ್‌ಐ ಕೆ.ಟಿ.ಸಂದೀಪ್ ಅವರು ಸ್ಥಳಕ್ಕೆ ಭೇಟಿ, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ.

ಪೊಲೀಸರು ಸ್ವಪ್ನಾ ಅವರ ಡೈರಿಯನ್ನು ವಶಪಡಿಸಿಕೊಂಡಿದ್ದು, ಅದರಲ್ಲಿ ಅವರು ಕೆಲಸದ ಒತ್ತಡ ತಡೆದುಕೊಳ್ಳಲು ಸಾಧ್ಯವಾಗದೆ ಇಂತಹ ಕಠಿಣ ನಿರ್ಧಾರ ತೆಗೆದುಕೊಂಡಿರುವುದಾಗಿ ಬರೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ವಪ್ನಾ ಅವರನ್ನು ಸೆಪ್ಟೆಂಬರ್ 2020ರಲ್ಲಿ ತೊಕ್ಕಿಲಂಗಡಿ ಶಾಖೆಗೆ ವರ್ಗಾವಣೆ ಮಾಡಲಾಗಿತ್ತು. ಅವರು ಕಣ್ಣೂರಿನ ನಿರ್ಮಲಗಿರಿಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಕುಟುಂಬದೊಂದಿಗೆ ವಾಸಿಸುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT