ನೊಯ್ಡಾದಲ್ಲಿ ಆಸ್ಪತ್ರೆಯೊಂದರ ಬಳಿ ಪರೀಕ್ಷೆಗಾಗಿ ಕಾಯುತ್ತಿರುವ ಜನರು 
ದೇಶ

ಕೋವಿಡ್ -19 ಹೆಚ್ಚಳ: ದೆಹಲಿಯ ಮೆಟ್ರೋ, ಬಸ್ ಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ 

ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ಗಮನಿಸುತ್ತಿರುವ ದೆಹಲಿ ಸರ್ಕಾರ, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ನಿರ್ಬಂಧಗಳನ್ನು ಹೆಚ್ಚಿಸಿ ಶನಿವಾರ ಹೊಸ ಆದೇಶವನ್ನು ಪ್ರಕಟಿಸಿದೆ.

ನವದೆಹಲಿ: ಕೋವಿಡ್-19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ಗಮನಿಸುತ್ತಿರುವ ದೆಹಲಿ ಸರ್ಕಾರ, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ನಿರ್ಬಂಧಗಳನ್ನು ಹೆಚ್ಚಿಸಿ ಶನಿವಾರ ಹೊಸ ಆದೇಶವನ್ನು ಪ್ರಕಟಿಸಿದೆ.

ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಿಸಿರುವ ಹೊಸ ನಿರ್ಬಂಧ ಆದೇಶದ ಪ್ರಕಾರ, ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಶೇಕಡಾ 50 ರಷ್ಟು ಆಸನ ಸಾಮರ್ಥ್ಯ ಬಳಕೆಗೆ ಅವಕಾಶ ನೀಡಲಾಗಿದ್ದು,ಮೆಟ್ರೋ ಬೋಗಿಗಳು ಹಾಗೂ ಬಸ್ ಗಳ ಆಸನಗಳ ಬಳಕೆ ಸಾಮರ್ಥ್ಯವನ್ನು ಶೇಕಡಾ 50ಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. 

ಇದಕ್ಕೂ ಮುನ್ನಾ ಮಾತನಾಡಿದ್ದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸಂಪೂರ್ಣ ಲಾಕ್ ಡೌನ್ ಮಾಡುವುದನ್ನು ಸರ್ಕಾರ ಪರಿಗಣಿಸುತ್ತಿಲ್ಲ. ಕೊರೋನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಅನೇಕ ನಿರ್ಬಂಧಗಳನ್ನು ಜಾರಿಗೊಳಿಸುತ್ತಿರುವುದಾಗಿ ಹೇಳಿದ್ದರು.

ಚಿತ್ರಮಂದಿರಗಳು, ಸಾರ್ವಜನಿಕ ಸಾರಿಗೆ, ರೆಸ್ಟೋರೆಂಟ್ ಗಳು ಶೇ. 50ರಷ್ಟು ಆಸನಗಳ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗುವುದು ಎಂದು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆದೇಶದಲ್ಲಿ ತಿಳಿಸಲಾಗಿದೆ. ಖಾಸಗಿ ಕಚೇರಿಗಳು ಮನೆಯಿಂದಲೇ ಕೆಲಸ ಮಾಡಲು ಉತ್ತೇಜಿಸಬೇಕು, ಕಚೇರಿಗಳಲ್ಲಿ ನೌಕರರ ಸಂಖ್ಯೆಯನ್ನು ಕಡಿಮೆಗೊಳಿಸಬೇಕು, ಉನ್ನತ ಮಟ್ಟದ ಗ್ರೇಡ್ 1 ಆಫೀಸರ್, ಗಳು, ಸರ್ಕಾರಿ ಕಚೇರಿಗಳು ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ದೆಹಲಿ ಸರ್ಕಾರ ಸೂಚಿಸಿದೆ. 

ಆರೋಗ್ಯ ಇಲಾಖೆ. ಪೊಲೀಸ್, ಹೋಮ್ ಗಾರ್ಡ್, ನಾಗರಿಕ ರಕ್ಷಣೆ, ಅಗ್ನಿ ಶಾಮಕ ಸೇವೆ ಮತ್ತು ಜಿಲ್ಲಾಡಳಿತಗಳು ಯಾವುದೇ ನಿರ್ಬಂಧವಿಲ್ಲದೆ ಕೆಲಸವನ್ನು ಮುಂದುವರೆಸಬೇಕು ಎಂದು ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

SCROLL FOR NEXT