ಜಪ್ತಿ ಮಾಡಿದ ಹಣ 
ದೇಶ

ಬಸ್ಸಿನಲ್ಲಿ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕನ ಬಳಿ 3.25 ಕೋಟಿ ರೂ. ನಗದು ಹಣ ಪತ್ತೆ!

ಆಂಧ್ರಪ್ರದೇಶ-ತೆಲಂಗಾಣ ಗಡಿಯಲ್ಲಿರುವ ಪಂಚಲಿಂಗಲ ಚೆಕ್‌ಪೋಸ್ಟ್‌ನಲ್ಲಿ ಶೋಧ ನಡೆಸುತ್ತಿದ್ದ ವೇಳೆ ಖಾಸಗಿ ಬಸ್‌ನಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಬಳಿ 3.25 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.

ಕರ್ನೂಲ್: ಆಂಧ್ರಪ್ರದೇಶ-ತೆಲಂಗಾಣ ಗಡಿಯಲ್ಲಿರುವ ಪಂಚಲಿಂಗಲ ಚೆಕ್‌ಪೋಸ್ಟ್‌ನಲ್ಲಿ ಶೋಧ ನಡೆಸುತ್ತಿದ್ದ ವೇಳೆ ಖಾಸಗಿ ಬಸ್‌ನಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಬಳಿ 3.25 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ಹಣವನ್ನು ಕರ್ನೂಲ್ ವಿಶೇಷ ಜಾರಿ ಬ್ಯೂರೋ(ಎಸ್‌ಇಬಿ) ವಶಪಡಿಸಿಕೊಂಡಿದೆ.

ಬೆಂಗಳೂರಿನ ಖಾಸಗಿ ಟ್ರಾವೆಲ್ ಕಂಪನಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿರುವ ಬಿ.ಎ.ಚೇತನ್ ಕುಮಾರ್ ಮತ್ತು ಚೆನ್ನೈ ಮೂಲದ ಅರುಣ್ ಎಂಬ ವ್ಯಕ್ತಿಯಿಂದ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಹಣ ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಕರ್ನೂಲ್ ಎಸ್ಪಿ ಡಾ.ಕೆ.ಫಕೀರಪ್ಪ ತಿಳಿಸಿದ್ದಾರೆ.

ಅರುಣ್ ಅವರು ಚೇತನ್ ಅವರನ್ನು ಮಾರ್ಚ್ 28 ರಂದು ವಿಮಾನದಲ್ಲಿ ರಾಯ್ಪುರಕ್ಕೆ ಕಳುಹಿಸಿದ್ದರು ಮತ್ತು ಅಲ್ಲಿಂದ ಅವರು ರಾಯಗಢ್ ಗೆ ಹೋದರು. ಅವರು ರಾಯ್‌ಗಢದ ತ್ರೀ ಸ್ಟಾರ್ ಹೋಟೆಲ್‌ನಲ್ಲಿ ತಂಗಿದ್ದರು. ಅವರು ಹೋಟೆಲ್ ನಲ್ಲಿದ್ದಾಗ, ಕೆಲವು ವ್ಯಕ್ತಿಗಳು ಅವರನ್ನು ಭೇಟಿ ಮಾಡಿ ಹಣವನ್ನು ನೀಡಿದರು. ನಂತರ ಏಪ್ರಿಲ್ 8ರಂದು ಚೇತನ್ ಅವರು ಬಿಲಾಸ್ಪುರಕ್ಕೆ ಹೋದರು, ಅಲ್ಲಿ ಅವರು ಇತರ ಕೆಲವು ವ್ಯಕ್ತಿಗಳನ್ನು ಭೇಟಿಯಾಗಬೇಕಿತ್ತು. ಆದರೆ ಅದು ಭೇಟಿ ಸಾಧ್ಯವಾಗದ ಕಾರಣ ಅವರು ಖಾಸಗಿ ಬಸ್‌ನಲ್ಲಿ ಹೈದರಾಬಾದ್‌ಗೆ ಬಂದಿದ್ದರು. ಹೈದರಾಬಾದ್‌ನಿಂದ ಶುಕ್ರವಾರ ತಡರಾತ್ರಿ ಖಾಸಗಿ ಬಸ್ ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಎಸ್‌ಇಬಿ ತಂಡ ಹಣ ಪತ್ತೆ ಹಚ್ಚಿ, ಚೇತನ್ ನನ್ನು ಬಂಧಿಸಿದೆ.

ನಗದು ಹಣಕ್ಕೆ ಸಂಬಂಧಿಸಿದ ಸರಿಯಾದ ದಾಖಲೆಗಳ ನೀಡಲು ಸಾಧ್ಯವಾಗದ ಕಾರಣ ಚೇತನ್ ವಿರುದ್ಧ ಪೊಲೀಸರು ಸಿಆರ್ಪಿಸಿಯ ಸೆಕ್ಷನ್ 102 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮುಂದಿನ ಕ್ರಮಕ್ಕಾಗಿ ಈ ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ಫಕೀರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ; ತಿದ್ದುಪಡಿ ಮಸೂದೆಗೆ ಅಂಗೀಕಾರ ಸಾಧ್ಯತೆ!

ವೈಭವ್ ಸೂರ್ಯವಂಶಿ ಎಡವಟ್ಟು: ಪಾದಾರ್ಪಣೆ ಪಂದ್ಯದಲ್ಲಿ 2 ಅದ್ಭುತ ಸಿಕ್ಸರ್ ಬಾರಿಸಿ, ಸ್ಟಂಪ್ ಔಟ್‌ಗೆ ಬಲಿ; video

ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು

ಪೈರಸಿ ವಿರುದ್ಧ ಕಠಿಣ ಕ್ರಮಕ್ಕೆ Telegramಗೆ ಕೇಂದ್ರ ಸರ್ಕಾರ ಖಡಕ್ ಸೂಚನೆ; 15 ದಿನಗಳಲ್ಲಿ ವರದಿ ಸಲ್ಲಿಕೆಗೆ ಆದೇಶ

70 ಲಕ್ಷ ಪಡೆದು ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ: ಮುಸ್ಲಿಂ ಮಹಿಳೆಯ ಬಂಧನ