ಜಪ್ತಿ ಮಾಡಿದ ಹಣ 
ದೇಶ

ಬಸ್ಸಿನಲ್ಲಿ ಬೆಂಗಳೂರಿಗೆ ಬರುತ್ತಿದ್ದ ಪ್ರಯಾಣಿಕನ ಬಳಿ 3.25 ಕೋಟಿ ರೂ. ನಗದು ಹಣ ಪತ್ತೆ!

ಆಂಧ್ರಪ್ರದೇಶ-ತೆಲಂಗಾಣ ಗಡಿಯಲ್ಲಿರುವ ಪಂಚಲಿಂಗಲ ಚೆಕ್‌ಪೋಸ್ಟ್‌ನಲ್ಲಿ ಶೋಧ ನಡೆಸುತ್ತಿದ್ದ ವೇಳೆ ಖಾಸಗಿ ಬಸ್‌ನಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಬಳಿ 3.25 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.

ಕರ್ನೂಲ್: ಆಂಧ್ರಪ್ರದೇಶ-ತೆಲಂಗಾಣ ಗಡಿಯಲ್ಲಿರುವ ಪಂಚಲಿಂಗಲ ಚೆಕ್‌ಪೋಸ್ಟ್‌ನಲ್ಲಿ ಶೋಧ ನಡೆಸುತ್ತಿದ್ದ ವೇಳೆ ಖಾಸಗಿ ಬಸ್‌ನಲ್ಲಿ ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಬಳಿ 3.25 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ಹಣವನ್ನು ಕರ್ನೂಲ್ ವಿಶೇಷ ಜಾರಿ ಬ್ಯೂರೋ(ಎಸ್‌ಇಬಿ) ವಶಪಡಿಸಿಕೊಂಡಿದೆ.

ಬೆಂಗಳೂರಿನ ಖಾಸಗಿ ಟ್ರಾವೆಲ್ ಕಂಪನಿಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿರುವ ಬಿ.ಎ.ಚೇತನ್ ಕುಮಾರ್ ಮತ್ತು ಚೆನ್ನೈ ಮೂಲದ ಅರುಣ್ ಎಂಬ ವ್ಯಕ್ತಿಯಿಂದ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಹಣ ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಕರ್ನೂಲ್ ಎಸ್ಪಿ ಡಾ.ಕೆ.ಫಕೀರಪ್ಪ ತಿಳಿಸಿದ್ದಾರೆ.

ಅರುಣ್ ಅವರು ಚೇತನ್ ಅವರನ್ನು ಮಾರ್ಚ್ 28 ರಂದು ವಿಮಾನದಲ್ಲಿ ರಾಯ್ಪುರಕ್ಕೆ ಕಳುಹಿಸಿದ್ದರು ಮತ್ತು ಅಲ್ಲಿಂದ ಅವರು ರಾಯಗಢ್ ಗೆ ಹೋದರು. ಅವರು ರಾಯ್‌ಗಢದ ತ್ರೀ ಸ್ಟಾರ್ ಹೋಟೆಲ್‌ನಲ್ಲಿ ತಂಗಿದ್ದರು. ಅವರು ಹೋಟೆಲ್ ನಲ್ಲಿದ್ದಾಗ, ಕೆಲವು ವ್ಯಕ್ತಿಗಳು ಅವರನ್ನು ಭೇಟಿ ಮಾಡಿ ಹಣವನ್ನು ನೀಡಿದರು. ನಂತರ ಏಪ್ರಿಲ್ 8ರಂದು ಚೇತನ್ ಅವರು ಬಿಲಾಸ್ಪುರಕ್ಕೆ ಹೋದರು, ಅಲ್ಲಿ ಅವರು ಇತರ ಕೆಲವು ವ್ಯಕ್ತಿಗಳನ್ನು ಭೇಟಿಯಾಗಬೇಕಿತ್ತು. ಆದರೆ ಅದು ಭೇಟಿ ಸಾಧ್ಯವಾಗದ ಕಾರಣ ಅವರು ಖಾಸಗಿ ಬಸ್‌ನಲ್ಲಿ ಹೈದರಾಬಾದ್‌ಗೆ ಬಂದಿದ್ದರು. ಹೈದರಾಬಾದ್‌ನಿಂದ ಶುಕ್ರವಾರ ತಡರಾತ್ರಿ ಖಾಸಗಿ ಬಸ್ ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಎಸ್‌ಇಬಿ ತಂಡ ಹಣ ಪತ್ತೆ ಹಚ್ಚಿ, ಚೇತನ್ ನನ್ನು ಬಂಧಿಸಿದೆ.

ನಗದು ಹಣಕ್ಕೆ ಸಂಬಂಧಿಸಿದ ಸರಿಯಾದ ದಾಖಲೆಗಳ ನೀಡಲು ಸಾಧ್ಯವಾಗದ ಕಾರಣ ಚೇತನ್ ವಿರುದ್ಧ ಪೊಲೀಸರು ಸಿಆರ್ಪಿಸಿಯ ಸೆಕ್ಷನ್ 102 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮುಂದಿನ ಕ್ರಮಕ್ಕಾಗಿ ಈ ಹಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗುವುದು ಎಂದು ಫಕೀರಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT