ಅಧೀರ್ ರಂಜನ್ ಚೌದರಿ 
ದೇಶ

ನಾಲ್ಕನೇ ಹಂತದ ಮತದಾನ ಪ್ರಗತಿಯಲ್ಲಿರುವಾಗಲೇ ಟಿಎಂಸಿಗೆ ಕೈ ಕೊಟ್ಟ ಕಾಂಗ್ರೆಸ್!

ಬಂಗಾಳದಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲಾ ಸಮಾನ ಮನಸ್ಕ ಪಕ್ಷಗಳೂ ಒಗ್ಗೂಡಬೇಕು ಎಂದು ಚುನಾವಣೆ ಸಂದರ್ಭದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕರೆ ನೀಡಿದ್ದು ಗೊತ್ತೇ ಇದೆ. ಈಗ ಕಾಂಗ್ರೆಸ್ ಟಿಎಂಸಿಗೆ ಆಘಾತವಾಗುವಂತಹ ಹೇಳಿಕೆ ನೀಡಿದೆ. 

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯನ್ನು ಎದುರಿಸಲು ಎಲ್ಲಾ ಸಮಾನ ಮನಸ್ಕ ಪಕ್ಷಗಳೂ ಒಗ್ಗೂಡಬೇಕು ಎಂದು ಚುನಾವಣೆ ಸಂದರ್ಭದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಕರೆ ನೀಡಿದ್ದು ಗೊತ್ತೇ ಇದೆ. ಆದರೆ ಈಗ ನಾಲ್ಕನೇ ಹಂತದ ಮತದಾನ ಪ್ರಗತಿಯಲ್ಲಿರುವಾಗಲೇ ಟಿಎಂಸಿಗೆ ಕಾಂಗ್ರೆಸ್ ಕೈ ಕೊಟ್ಟಿದೆ!!. 

ಬಂಗಾಳದಲ್ಲಿ ಟಿಎಂಸಿಗೆ ಬೆಂಬಲ ನೀಡುವುದರ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಒಂದು ವೇಳೆ ಬಂಗಾಳದ ಚುನಾವಣೆ ಫಲಿತಾಂಶ ಅತಂತ್ರವಾದಲ್ಲಿ, ಟಿಎಂಸಿಗೆ ಬೆಂಬಲ ಕೊಡುವುದಿಲ್ಲ ಎಂದು ಸ್ಪಷ್ಟಪಾಡಿಸಿದ್ದಾರೆ. 

"ಫಲಿತಾಂಶ ಅತಂತ್ರವಾದಲ್ಲಿ ಸರ್ಕಾರ ರಚಿಸಲು ಬಿಜೆಪಿ ಹಾಗೂ ಟಿಎಂಸಿ ಕೈಜೋಡಿಸಬಹುದು ಮಮತಾ ಬ್ಯಾನರ್ಜಿ ಅವರ ಕಾರಣದಿಂದಲೇ ಬಂಗಾಳದಲ್ಲಿ ಬಿಜೆಪಿ ಹಾಗೂ ಕೋಮುವಾದಿ ರಾಜಕಾರಣ ನೆಲೆಕಂಡುಕೊಂಡಿದೆ. ಚುನಾವಣೋತ್ತರ ಪರಿಸ್ಥಿತಿಯಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಟಿಎಂಸಿಗೆ ಬೆಂಬಲ ನೀಡುವುದಿಲ್ಲ" ಎಂದು ಚೌಧರಿ ಸ್ಪಷ್ಟಪಡಿಸಿದ್ದಾರೆ. 

ಇದೇ ವೇಳೆ ಕಾಂಗ್ರೆಸ್-ಎಡಪಕ್ಷ-ಐಎಸ್ಎಫ್ ಸಂಜುಕ್ತ ಮೋರ್ಚ ಅಥವಾ ಯುನೈಟೆಡ್ ಫ್ರಂಟ್ ಸರ್ಕಾರ ರಚಿಸುವುದಕ್ಕೆ ಆಕೆಯ ಬೆಂಬಲ ಕೇಳುವ ಸಾಧ್ಯತೆಗಳೂ ಕ್ಷೀಣ ಎಂದು ಚೌಧರಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!