ವಾರಾಂತ್ಯದ ಲಾಕ್ ಡೌನ್ ನಲ್ಲಿ ಮುಂಬೈಯಲ್ಲಿ ಕಂಡುಬಂದ ದೃಶ್ಯ 
ದೇಶ

ಕೋವಿಡ್-19 ಭಾರತದಲ್ಲಿ ವ್ಯಾಪಿಸಿ ಒಂದು ವರ್ಷವಾಯ್ತು, ಕೊರೋನಾ ಎರಡನೇ ಅಲೆ ಮತ್ತಷ್ಟು ಕಠಿಣ, ಸೋಂಕಿತರ ಸಂಖ್ಯೆ ಹೆಚ್ಚಳ

ಭಾರತಕ್ಕೆ ಕೊರೋನಾ ಕಾಲಿಟ್ಟು ವ್ಯಾಪಿಸಿ ಲಾಕ್ ಡೌನ್ ಹೇರಿಕೆಯಾಗಿ, ಜನತಾ ಕರ್ಫ್ಯೂ ಆಗಿ ಒಂದು ವರ್ಷ ಕಳೆದಿದೆ. ಸರಿಯಾಗಿ ಒಂದು ವರ್ಷ ಹಿಂದೆ ಲಕ್ಷಾಂತರ ಮಂದಿ ಭಾರತೀಯರು ಮನೆಯಲ್ಲಿರುವ ದೀಪಗಳನ್ನು ಆರಿಸಿ ಮೊಂಬತ್ತು ಹಚ್ಚಿ, ನಂದಾದೀಪ ಹಚ್ಚಿ ಕೊರೋನಾ ಸೋಂಕಿನ ಆರಂಭದ ದಿನಗಳಲ್ಲಿ ಸೌಹಾರ್ದಯುತವಾಗಿ ಕೊರೋನಾ ವಾರಿಯರ್ಸ್ ಗೆ ದೇಶದ ಜನ ಕೃತಜ್ಞತೆ ಸಲ್ಲಿಸಿದ್ದರು.

ನವದೆಹಲಿ: ಭಾರತಕ್ಕೆ ಕೊರೋನಾ ಕಾಲಿಟ್ಟು ವ್ಯಾಪಿಸಿ ಲಾಕ್ ಡೌನ್ ಹೇರಿಕೆಯಾಗಿ, ಜನತಾ ಕರ್ಫ್ಯೂ ಆಗಿ ಒಂದು ವರ್ಷ ಕಳೆದಿದೆ. ಸರಿಯಾಗಿ ಒಂದು ವರ್ಷ ಹಿಂದೆ ಲಕ್ಷಾಂತರ ಮಂದಿ ಭಾರತೀಯರು ಮನೆಯಲ್ಲಿರುವ ದೀಪಗಳನ್ನು ಆರಿಸಿ ಮೊಂಬತ್ತು ಹಚ್ಚಿ, ನಂದಾದೀಪ ಹಚ್ಚಿ ಕೊರೋನಾ ಸೋಂಕಿನ ಆರಂಭದ ದಿನಗಳಲ್ಲಿ ಸೌಹಾರ್ದಯುತವಾಗಿ ಕೊರೋನಾ ವಾರಿಯರ್ಸ್ ಗೆ ದೇಶದ ಜನ ಕೃತಜ್ಞತೆ ಸಲ್ಲಿಸಿದ್ದರು.

ಕಟ್ಟುನಿಟ್ಟಿನ ಲಾಕ್ ಡೌನ್, ಲಾಕ್ ಡೌನ್ ಸಡಿಲಿಕೆ, ನಂತರ ಸ್ಥಿತಿಗತಿಗಳು ಸಹಜತೆಗೆ ಬಂದ ನಂತರ ಕೋವಿಡ್ ಲಸಿಕೆ ಬಂತು. ಇದೀಗ ಬೃಹತ್ ಪ್ರಮಾಣದಲ್ಲಿ ಕೊರೋನಾ ಲಸಿಕೆಯನ್ನು 45 ವರ್ಷಕ್ಕೆ ಮೇಲ್ಪಟ್ಟವರಿಗೆ ನೀಡಲಾಗುತ್ತಿದೆ. ಆದರೆ ಕೊರೋನಾ ಎರಡನೇ ಅಲೆ ಸೃಷ್ಟಿಯಾಗಿ ಪರಿಸ್ಥಿತಿ ಮತ್ತಷ್ಟು ಕಠಿಣವಾಗುತ್ತಿದೆ. ರಾಜ್ಯ ಸರ್ಕಾರ 10 ನಗರಗಳಲ್ಲಿ ನೈಟ್ ಕರ್ಫ್ಯೂ ಹೇರಿದೆ.

ಕಳೆದ ವರ್ಷ ಏಪ್ರಿಲ್ 10ರಂದು ಪ್ರಧಾನ ಮಂತ್ರಿಯವರು ಕೊರೋನಾ ವೈರಸ್ ವಿರುದ್ಧ ಎಲ್ಲರೂ ಸಂಘಟನಾತ್ಮಕವಾಗಿ ಸಾಮೂಹಿಕವಾಗಿ ಹೋರಾಡಲು ಕರೆ ನೀಡಿದ 5 ದಿನ ನಂತರ ದೇಶದಲ್ಲಿ ಕೊರೋನಾ ಕೇಸುಗಳು 6 ಸಾವಿರದ 761 ಇದ್ದರೆ ಸಾವಿನ ಸಂಖ್ಯೆ 206ಕ್ಕೆ ಏರಿಕೆಯಾಗಿತ್ತು.

ಇಂದು ದೇಶದಲ್ಲಿ, ನಿನ್ನೆ ಸೋಂಕಿತರ ಸಂಖ್ಯೆ 1 ಲಕ್ಷದ 45 ಸಾವಿರದ 384 ಏರಿಕೆಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1 ಕೋಟಿಯ 32 ಲಕ್ಷದ 05 ಸಾವಿರದ 926 ಇದೆ, ಮೃತರ ಸಂಖ್ಯೆ 1 ಲಕ್ಷದ 68 ಸಾವಿರದ 436 ಆಗಿದೆ. ದೆಹಲಿಯೊಂದರಲ್ಲಿಯೇ ಮೊನ್ನೆ ಶುಕ್ರವಾರ 8,500 ಹೊಸ ಕೇಸುಗಳು ಪತ್ತೆಯಾಗಿದ್ದು, ಮಹಾರಾಷ್ಟ್ರದಲ್ಲಿ 58 ಸಾವಿರ ಕೊರೋನಾ ಕೇಸುಗಳು ವರದಿಯಾಗಿದೆ.

ಆರೋಗ್ಯ ಸಚಿವಾಲಯ ಪ್ರಕಾರ, 10 ರಾಜ್ಯಗಳಾದ ಮಹಾರಾಷ್ಟ್ರ, ಛತ್ತೀಸ್ ಗಢ, ಉತ್ತರ ಪ್ರದೇಶ, ದೆಹಲಿ, ಕರ್ನಾಟಕ, ತಮಿಳು ನಾಡು, ಕೇರಳ, ಮಧ್ಯ ಪ್ರದೇಶ, ಗುಜರಾತ್ ಮತ್ತು ರಾಜಸ್ತಾನಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ.

ನಿನ್ನೆ ಒಂದೇ ದಿನ ಶೇಕಡಾ 82.82ರಷ್ಟು ಸೋಂಕು ವರದಿಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್