ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭ ಮೇಳ (ಸಂಗ್ರಹ ಚಿತ್ರ) 
ದೇಶ

ಕುಂಭಮೇಳ 2021: ಎರಡನೇ ಶಾಹಿ ಸ್ನಾನದ ವೇಳೆ ವ್ಯಕ್ತಿಗಳ ನಡುವೆ ಅಂತರ ಅಸಾಧ್ಯ; ಅಧಿಕಾರಿ ಹೇಳಿಕೆ

ಉತ್ತರಾಖಂಡ್ ನ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಲಕ್ಷಾಂತರ ಮಂದಿ ಸೇರಿದ್ದಾರೆ. 

ಹರಿದ್ವಾರ: ಉತ್ತರಾಖಂಡ್ ನ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಲಕ್ಷಾಂತರ ಮಂದಿ ಸೇರಿದ್ದಾರೆ. ಗಂಗಾನದಿಯ ಹರ್ ಕಿ ಪೌರಿ ಘಾಟ್ ನಲ್ಲಿ ಪವಿತ್ರ ಸ್ನಾನ ಮಾಡುವುದಕ್ಕೆ ಜನಸ್ತೋಮ ಸೇರಿದ್ದು ಎರಡನೇ ಶಾಹಿ ಸ್ನಾನದ ವೇಳೆ ವ್ಯಕ್ತಿಗಳ ನಡುವೆ ಅಂತರ ಅಸಾಧ್ಯ ಎಂದು ಕುಂಭ ಮೇಳ ಐಜಿ ಸಂಜಯ್ ಗುಂಜ್ಯಾಲ್ ತಿಳಿಸಿದ್ದಾರೆ. 

ಕೋವಿಡ್-19 ಗೆ ಮುನ್ನೆಚ್ಚರಿಕೆ ಕೈಗೊಳ್ಳುವಂತೆ ಜನತೆಯಲ್ಲಿ ನಿರಂತರ ಮನವಿ ಮಾಡುತ್ತಿದ್ದೇವೆ. ಆದರೆ ಭಾರಿ ಜನಸಂದಣಿಯಿಂದಾಗಿ ಚಲನ್ ನೀಡುವುದಕ್ಕೆ ಸಾಧ್ಯವಾಗುತ್ತಿಲ್ಲ. ಘಾಟ್ ಗಳಲ್ಲಿ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಕಷ್ಟವಾಗಿದೆ ಎಂದು ಹೇಳಿದ್ದಾರೆ.

"ಘಾಟ್ ಗಳಲ್ಲಿ ಒತ್ತಾಯಪೂರ್ವಕವಾಗಿ ಅಂತರ ಕಾಯ್ದುಕೊಳ್ಳುವುದಕ್ಕೆ ಯತ್ನಿಸಿದರೆ ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಗಬಹುದು ಆದ್ದರಿಂದ ಪರಸ್ಪರ ಅಂತರ ಕಾಯ್ದುಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ"ಎಂದು ಐ ಜಿ ಹೇಳಿದ್ದಾರೆ. ಎರಡನೇ ಶಾಹಿ ಸ್ನಾನದ ಅಂಗವಾಗಿ ಸೋಮವಾರ (ಏ.12) ರಂದು ಭಕ್ತಾದಿಗಳು ಹರ್ ಕಿ ಪೌರಿ ಘಾಟ್ ನಲ್ಲಿ ಗಂಗಾನದಿಯಲ್ಲಿ ಮಿಂದಿದ್ದಾರೆ. 

ಬೆಳಿಗ್ಗೆ 7 ವರೆಗೂ ಸಾರ್ವಜನಿಕರಿಗೆ ಪ್ರವೇಶವಿರಲಿದೆ. ಆ ಬಳಿಕ ಅಖಾಡಗಳಿಗೆ ಪ್ರದೇಶವನ್ನು ಮೀಸಲಿರಿಸಲಾಗುತ್ತದೆ ಎಂದು ಕುಂಭ ಮೇಳದ ಅಧಿಕಾರಿಗಳು ತಿಳಿಸಿದ್ದಾರೆ.  ಮಾ.11 ರಂದು ಶಿವರಾತ್ರಿ ಅಂಗವಾಗಿ ಮೊದಲ ಶಾಹಿ ಸ್ನಾನ ನಡೆದಿತ್ತು. ಇಂದು ಎರಡನೇ ಶಾಹಿ ಸ್ನಾನ ಏ.14 ರಂದು ಮೂರನೇ ಶಾಹಿ ಸ್ನಾನದಲ್ಲಿ 13 ಅಖಾಡಗಳ ಸಂತರು ಪವಿತ್ರ ಸ್ನಾನ ಮಾಡಲಿದ್ದಾರೆ. ಉತ್ತರಾಖಂಡ್ ನಲ್ಲಿ ಭಾನುವಾರದಂದು 1,333 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT