ಪರೀಕ್ಷೆ (ಸಂಗ್ರಹ ಚಿತ್ರ) 
ದೇಶ

ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಲು ಕೇಂದ್ರಕ್ಕೆ ಕೇಜ್ರಿವಾಲ್ ಮನವಿ

ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ನವದೆಹಲಿ: ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ದೆಹಲಿ ಸಿಎಂ ಕೇಜ್ರಿವಾಲ್ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. 

2021 ರ ಶೈಕ್ಷಣಿಕ ವರ್ಷದ ಪರೀಕ್ಷೆಗಳನ್ನು ಕೋವಿಡ್-19 ಕಾರಣದಿಂದಾಗಿ ರದ್ದುಗೊಳಿಸಬೇಕು, ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವುದಕ್ಕಾಗಿ ಪರ್ಯಾಯ ಮಾರ್ಗಗಳನ್ನು ಕಂಡುಕೊಳ್ಳಬೇಕು ಎಂದಿರುವ ಕೇಜ್ರಿವಾಲ್, ಆನ್ ಲೈನ್ ಪರೀಕ್ಷೆಗಳನ್ನು ನಡೆಸುವುದು ಹಾಗೂ ಇಂಟರ್ನಲ್ ಅಸೆಸ್ಮೆಂಟ್ ನ ಆಧಾರದಲ್ಲಿ ವಿದ್ಯಾರ್ಥಿಗಳನ್ನು ತೇರ್ಗಡೆಗೊಳಿಸುವ ಸಲಹೆಯನ್ನು ಮುಂದಿಟ್ಟಿದ್ದಾರೆ. 

"ಈ ವರ್ಷ 6 ಲಕ್ಷ ವಿದ್ಯಾರ್ಥಿಗಳು ದೆಹಲಿಯಲ್ಲಿ ಪರೀಕ್ಷೆಗಳನ್ನು ಬರೆಯುತ್ತಿದ್ದು, ಒಂದು ಲಕ್ಷ ಬೋಧಕ ಸಿಬ್ಬಂದಿಗಳು ಪರೀಕ್ಷೆಯ ಭಾಗವಾಗಿರಲಿದ್ದಾರೆ. ದೇಶಾದ್ಯಂತ ಕೋವಿಡ್-19 ಸೋಂಕು ಪ್ರಸರಣ ಎರಡನೇ ಅಲೆಯಲ್ಲಿ ತೀವ್ರಗೊಳ್ಳುತ್ತಿದ್ದು, ಈ ದೃಷ್ಟಿಯಿಂದ ಪರೀಕ್ಷಾ ಕೇಂದ್ರಗಳು ಕೊರೋನಾ ಹರಡುವಿಕೆಯ ಹಾಟ್ ಸ್ಪಾಟ್ ಗಳಾಗುವ ಸಾಧ್ಯತೆ ಇದೆ. ನಮಗೆ ವಿದ್ಯಾರ್ಥಿಗಳ ಆರೋಗ್ಯ, ಜೀವ ಅತ್ಯಂತ ಮುಖ್ಯವಾದದ್ದು, ಕೇಂದ್ರಕ್ಕೆ ಸಿಬಿಎಸ್ಇ ಪರೀಕ್ಷೆಗಳನ್ನು ಮುಂದೂಡುವಂತೆ ಮನವಿ ಮಾಡುತ್ತೇನೆ" ಎಂದು ಕೇಜ್ರಿವಾಲ್ ತಿಳಿಸಿದ್ದಾರೆ. 

ಶಿಕ್ಷಣ ಸಚಿವಾಲಯ ಸಿಬಿಎಸ್ಇಯ 10-12 ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲು ಚಿಂತನೆ ನಡೆಸಿದೆ. ಈ ಸಂಬಂಧ ಏ.12 ರಂದು ಮಹತ್ವದ ಸಭೆ ನಡೆದಿತ್ತು. ಆದರೆ ರದ್ದುಗೊಳಿಸುವ ಪ್ರಸ್ತಾವನೆ ಇರಲಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT