ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19 ಎರಡನೇ ಅಲೆ: ಹಿಂದೆಗಿಂತಲೂ ಹೆಚ್ಚಿನ ಸಂಖ್ಯೆಯ ಪ್ರಕರಣಗಳು- ಕೇಂದ್ರ ಸರ್ಕಾರ

 ದೇಶದಲ್ಲಿನ ಕೋವಿಡ್ ಎರಡನೇ ಅಲೆಯೂ ಹಿಂದಿನ ವರ್ಷದ ಹೆಚ್ಚಳಕ್ಕಿಂತಲೂ ಜಾಸ್ತಿಯಾಗಿದೆ. ಮೇಲ್ಮುಖವಾಗಿ ಟ್ರೆಂಡ್ ಸಾಗುತ್ತಿದೆ. ಇದು ದೇಶದ ಆತಂಕಕ್ಕೆ ಕಾರಣವಾಗಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಂಗಳವಾರ ತಿಳಿಸಿದ್ದಾರೆ.

ನವದೆಹಲಿ: ದೇಶದಲ್ಲಿನ ಕೋವಿಡ್ ಎರಡನೇ ಅಲೆಯೂ ಹಿಂದಿನ ವರ್ಷದ ಹೆಚ್ಚಳಕ್ಕಿಂತಲೂ ಜಾಸ್ತಿಯಾಗಿದೆ. ಮೇಲ್ಮುಖವಾಗಿ ಟ್ರೆಂಡ್ ಸಾಗುತ್ತಿದೆ. ಇದು ದೇಶದ ಆತಂಕಕ್ಕೆ ಕಾರಣವಾಗಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಮಂಗಳವಾರ ತಿಳಿಸಿದ್ದಾರೆ.

ದೇಶದಲ್ಲಿ ಶೇ. 89.51 ರಷ್ಟು ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಶೇ.1.25 ರಷ್ಟು ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಪ್ರಸ್ತುತ ಶೇ. 9.24 ರಷ್ಟು ಸಕ್ರಿಯ ಪ್ರಕರಣಗಳಿವೆ. ಹೊಸ ಪ್ರಕರಣಗಳನ್ನು ನೋಡಿದಾಗ, ಹಿಂದೆಗಿಂತಲೂ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಕಂಡುಬರುತ್ತಿವೆ ಇದು ಆತಂಕಕ್ಕೆ ಕಾರಣವಾಗಿದೆ ಎಂದು ಭೂಷಣ್ ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದರು.

ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು 57 ಸಾವಿರಕ್ಕೂ ಹೆಚ್ಚಿನ ಪ್ರಕರಣಗಳು ಕಂಡುಬರುತ್ತಿವೆ. ಪ್ರತಿ ಮಿಲಿಯನ್ ಗೆ ಟೆಸ್ಟ್  ಕೂಡಾ ಮುಂದುವರೆದಿದೆ ಆದರೆ, ಸರಾಸರಿ ದೈನಂದಿನ ಪ್ರಕರಣಗಳ ಬೆಳವಣಿಗೆಯೊಂದಿಗೆ ಅದರ ವೇಗ ಸರಿಯಾಗಿಲ್ಲ. ಆರ್ ಟಿ-ಪಿಸಿಆರ್ ಪರೀಕ್ಷೆ ಪಾಲನ್ನು ನೋಡಿದರೆ ಅದು ಕ್ರಮೇಣ ಕಡಿಮೆಯಾಗುತ್ತಿದೆ ಎಂದರು.

ಛತ್ತೀಸ್ ಗಢದಲ್ಲೂ ಕೂಡಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಫೆಬ್ರವರಿ ಮಧ್ಯದಿಂದಲೂ ಪ್ರತಿದಿನ 200 ಕೇಸ್ ಗಳು ಬರುತ್ತಿದ್ದವು. ಆದರೆ, ಈಗ ಅದು 11,504ಕ್ಕೆ ಏರಿಕೆಯಾಗಿದೆ. ಪ್ರತಿ ಮಿಲಿಯನ್‌ ನಂತೆ ಸರಾಸರಿ ಪರೀಕ್ಷೆಯು ಹೆಚ್ಚಾಗಿದೆ ಆದರೆ ಪ್ರಕರಣದ ಬದಲಾವಣೆಯೊಂದಿಗೆ ಅದರ ವೇಗವನ್ನು ಉಳಿಸಿಕೊಂಡಿಲ್ಲ. ಸರಾಸರಿ ದೈನಂದಿನ ಆರ್‌ಟಿ-ಪಿಸಿಆರ್ ಪಾಲು ಶೇ. 28-30ರಷ್ಟಿದೆ ಮತ್ತು ಪರೀಕ್ಷಾ ಸಾಮರ್ಥ್ಯವನ್ನು ಹೆಚ್ಚಿಸುವ ಅಗತ್ಯವಿದೆ "ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT