ಡಾ ಹರ್ಷ್ ವರ್ಧನ್ 
ದೇಶ

ಲಕ್ಷದ್ವೀಪ ಮತ್ತು ಜಮ್ಮು ಕಾಶ್ಮೀರದ ಬುಡ್ಗಾಮ್ ಜಿಲ್ಲೆ ಕ್ಷಯರೋಗ ಮುಕ್ತ: ಕೇಂದ್ರ ಘೋಷಣೆ

ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪ ಮತ್ತು ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ನವದೆಹಲಿ: ಕೇಂದ್ರಾಡಳಿತ ಪ್ರದೇಶ ಲಕ್ಷದ್ವೀಪ ಮತ್ತು ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷ್ ವರ್ಧನ್ ಮಂಗಳವಾರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

"ನಾವು ಈಗ ಲಕ್ಷದ್ವೀಪ ಮತ್ತು ಜಮ್ಮು ಮತ್ತು ಕಾಶ್ಮೀರದ ಬುಡ್ಗಾಮ್ ಜಿಲ್ಲೆಯನ್ನು ಕ್ಷಯರೋಗ ಮುಕ್ತ ಎಂದು ಘೋಷಿಸಿದ್ದೇವೆ. ಇದು ಒಂದು ಹೆಗ್ಗುರುತಾಗಿದ್ದು 2025 ರ ವೇಳೆಗೆ ಭಾರತ ಟಿಬಿ ಮುಕ್ತವಾಗಲು ಇದು ನಾಂದಿಯಾಗಲಿದೆ." ಅವರು ಹೇಳಿದ್ದಾರೆ.

ವಿಶ್ವ ಟಿಬಿ ದಿನದಂದು ಅಂಬೇಡ್ಕರ್ ರಾಷ್ಟ್ರೀಯ ಕೇಂದ್ರದಲ್ಲಿ ಆಯೋಜಿಸಿದ ಕಾರ್ಯಕ್ರಮ ಉದ್ಘಾಟಿಸಿದ್ದ ಸಚಿವರು ಮಾತನಾಡಿದ್ದಾರೆ.

ಪೋಲಿಯೊ ವಿರುದ್ಧದ ಹೋರಾಟವನ್ನು ನೆನಪಿಸಿಕೊಂಡ ಸಚಿವರು 2009 ರ ಹೊತ್ತಿಗೆ ಭಾರತವು ಜಾಗತಿಕ ಪೋಲಿಯೊ ಪ್ರಕರಣಗಳಲ್ಲಿ 60 ಪ್ರತಿಶತಕ್ಕಿಂತ ಹೆಚ್ಚಿನದನ್ನು ಹೊಂದಿದ್ದೂ  ನಾವು ದೇಶದಿಂದ ಪೋಲಿಯೊವನ್ನು ಅಳಿಸಿಹಾಕುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಹೇಳಿದರು. ಭಾರತದ ಅಪಾರ ಜನಸಂಖ್ಯೆಯ ಕಾರಣದಿಂದಾಗಿ ಇದು ಒಂದು ದೊಡ್ಡ ಸವಾಲಾಗಿತ್ತು ಎಂದರು. "ಕೋವಿಡ್ ವಿರುದ್ಧದ ನಮ್ಮ ಹೋರಾಟದಲ್ಲಿ ನಾವು ಒಟ್ಟಾಗಿ ಏನನ್ನು ಸಾಧಿಸಬಹುದು ಎಂಬುದನ್ನು ನಾವು ಮತ್ತೆ ಜಗತ್ತಿಗೆ ತೋರಿಸಿದ್ದೇವೆ." ಸಚಿವರು ಹೇ್ಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT