ಶಶಿ ತರೂರ್ 
ದೇಶ

ಅನುಮತಿ ಇಲ್ಲದೆ ಅಮೆರಿಕ ನೌಕಾಪಡೆ 'ಕಾರ್ಯಾಚರಣೆ' ಭಾರತಕ್ಕೆ ತೋರಿದ ಅಗೌರವ: ಶಶಿ ತರೂರ್

ಅಮೆರಿಕ ನೌಕಾಪಡೆ ಭಾರತಕ್ಕೆ ಯಾವುದೇ ಮಾಹಿತಿ ನೀಡದೆಇಇಝೆಡ್ ಒಳಗೆ ‘ನ್ಯಾವಿಗೇಷನ್ ಆಪರೇಷನ್(ಸ್ವತಂತ್ರ ಕಾರ್ಯಾಚರಣೆ)’ ನಡೆಸಿದ್ದು ಕಾನೂನು ಉಲ್ಲಂಘನೆಯಾಗುವುದಿಲ್ಲ ಆದರೆ ಅಗೌರವವಾಗುತ್ತದೆ ಎಂದು ಶಶಿ ತರೂರ್ ಹೇಳಿದ್ದಾರೆ.

ನವದೆಹಲಿ: ಅಮೆರಿಕ ನೌಕಾಪಡೆ ಭಾರತಕ್ಕೆ ಯಾವುದೇ ಮಾಹಿತಿ ನೀಡದೆ ಭಾರತೀಯ ವಿಶೇಷ ಆರ್ಥಿಕ ವಲಯ (ಇಇಝೆಡ್)ದ ಒಳಗೆ ‘ನ್ಯಾವಿಗೇಷನ್ ಆಪರೇಷನ್(ಸ್ವತಂತ್ರ ಕಾರ್ಯಾಚರಣೆ)’  ನಡೆಸಿದ್ದು ಕಾನೂನು ಉಲ್ಲಂಘನೆಯಾಗುವುದಿಲ್ಲ ಆದರೆ ಅಗೌರವವಾಗುತ್ತದೆ ಎಂದು ಶಶಿ ತರೂರ್ ಹೇಳಿದ್ದಾರೆ. 

ವಿಶ್ವಸಂಸ್ಥೆಯ ಅಧೀನ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿರುವ ಅನುಭವ ಹೊಂದಿರುವ ಕಾಂಗ್ರೆಸ್ ನಾಯಕ ಶಶಿ ತರೂರ್, ಅಮೆರಿಕದ ನಡೆ ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗುವುದಿಲ್ಲ. ಅದು ಭಾರತಕ್ಕೆ ತೋರಿದ ಅಗೌರವವಾಗುತ್ತದೆ ಸಮುದ್ರಕ್ಕೆ ಸಂಬಂಧಿಸಿದ ಕಾನೂನಿನಲ್ಲಿ, ಇಇಝೆಡ್ ನಲ್ಲಿ ಅಮೆರಿಕ ನೌಕೆ ಕಾರ್ಯಾಚರಣೆ ನಡೆಸಿದ್ದನ್ನು ವಿರೋಧಿಸುವ ಭಾರತದ ವಾದಕ್ಕೆ ಬೆಂಬಲ ದೊರೆಯುವಂತಹ ಅಂಶಗಳಿಲ್ಲ, 

ಅಮೆರಿಕನ್ನರು ದಕ್ಷಿಣ ಚೀನಾ ಸಮುದ್ರದಲ್ಲಿ ಫ್ರೀಡಂ ಆಫ್ ನ್ಯಾವಿಗೇಶನ್ ಅಡಿಯಲ್ಲಿ ಏನನ್ನು ಮಾಡಲು ಯತ್ನಿಸುತ್ತಿದೆಯೋ ಅದನ್ನೇ ಭಾರತದ ಲಕ್ಷದ್ವೀಪದಲ್ಲೂ ಮಾಡಲು ಯತ್ನಿಸಿದ್ದಾರೋ ಅದನ್ನೇ ಮಾಡುತ್ತಿದ್ದಾರೆ. 

ಭಾರತ ಈ ಸಮಸ್ಯೆಗೆ ರಾಜತಾಂತ್ರಿಕವಾಗಿಯೇ ಪರಿಹಾರ ಕಂಡುಕೊಳ್ಳಬೇಕು ಎಂದು ಟ್ವೀಟ್ ಮಾಡಿರುವ ಶಶಿ ತರೂರ್ ಇದಕ್ಕಾಗಿ ಸಲಹೆಯನ್ನೂ ನೀಡಿದ್ದಾರೆ. 

ಈ ರೀತಿಯ ಕಾರ್ಯಾಚರಣೆಗಳನ್ನು ನಡೆಸಬೇಕಾದರೆ ಪೂರ್ವಾನುಮತಿ ಪಡೆಯುವುದಾಗಿ ಅಮೆರಿಕಾದಿಂದ ಸ್ಪಷ್ಟ ಪತ್ರವನ್ನು ಪಡೆಯಬೇಕು, ನಮ್ಮನ್ನು ಅವರು ಲೆಕ್ಕಿಸುವುದಿಲ್ಲ ಎಂಬ ಸಂದೇಶ ಹೋಗದಂತೆ ಎಚ್ಚರ ವಹಿಸಬೇಕು ಎಂದು ಶಶಿ ತರೂರ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಇರಾಕ್‌ನಲ್ಲಿ ಅಮೆರಿಕಾದ KC-135 ಸೇನಾ ವಿಮಾನ ಪತನ; ರಕ್ಷಣಾ ಕಾರ್ಯಾಚರಣೆ ಆರಂಭ

ಆಪರೇಷನ್‌ ಕಮಲದ ಆತಂಕ: ಅಸ್ಸಾಂ ಕಾಂಗ್ರೆಸ್‌ ಶಾಸಕರು ಬಿಡದಿ ರೆಸಾರ್ಟ್‌ಗೆ ಶಿಫ್ಟ್‌; ಅಖಾಡಕ್ಕಿಳಿದ ಡಿಕೆ ಶಿವಕುಮಾರ್

ಯುಗಾದಿ ಹಬ್ಬಕ್ಕೆ ಬಮೂಲ್ ನಿಂದ ಭರ್ಜರಿ ಗಿಫ್ಟ್: ಪ್ರತಿ ಲೀಟರ್ ಗೆ 1 ರೂ.ನಂತೆ ಹಾಲು ಉತ್ಪಾದಕರಿಗೆ ಬೋನಸ್; ಡಿ.ಕೆ. ಸುರೇಶ್

'ಕುಮಾರಸ್ವಾಮಿಯನ್ನು ಮೋದಿ- ಶಾ CM ಮಾಡ್ತಾರಂತೆ, ನಿಮ್ಮ ಹಣೆಬರಹ ಏನು? ಹಗಲುಗನಸು ಕಾಣಬೇಡಿ, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಗೆ ಅಧಿಕಾರ'

ಕೇಂದ್ರದ ಮೇಲೆ ಆರೋಪ ಮಾಡಿ ವೈಫಲ್ಯ ಮರೆಮಾಚುವ ಯತ್ನ, ಜನಸೇವೆ ಸುವರ್ಣಾವಕಾಶ ಕಳೆದುಕೊಂಡ ಸಿದ್ದರಾಮಯ್ಯ: ವಿಜಯೇಂದ್ರ ವಾಗ್ದಾಳಿ

SCROLL FOR NEXT