ಎಸ್ ಜೈಶಂಕರ್ 
ದೇಶ

ಕೋವಿಡ್ ಸಾಂಕ್ರಾಮಿಕ ವಿಚಾರದಲ್ಲಿ ಭಾರತದ ಬಾಗಿಲು ಇತರ ದೇಶಗಳಿಗೆ ತೆರೆದೇ ಇದೆ: ಎಸ್‍ ಜೈಶಂಕರ್ ಸ್ಪಷ್ಟನೆ

ಕೋವಿಡ್ ಸಾಂಕ್ರಾಮಿಕ ವಿಚಾರದಲ್ಲಿ ಭಾರತದ ಬಾಗಿಲು ಇತರ ದೇಶಗಳಿಗೆ ತೆರೆದೇ ಇದೆ. ಸಾಂಕ್ರಾಮಿಕ ರೋಗವನ್ನು ಎದುರಿಸಲು ಎಲ್ಲ ದೇಶಗಳು ಸಮನಾಗಿ ಲಸಿಕೆಗಳನ್ನು ಪಡೆಯಲು ಜಾಗತಿಕ ನ್ಯಾಯಸಮ್ಮತ ಒಕ್ಕೂಟವನ್ನು ನಿರ್ಮಿಸಬೇಕು ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈ  ಶಂಕರ್ ಹೇಳಿದ್ದಾರೆ.

ನವದೆಹಲಿ: ಕೋವಿಡ್ ಸಾಂಕ್ರಾಮಿಕ ವಿಚಾರದಲ್ಲಿ ಭಾರತದ ಬಾಗಿಲು ಇತರ ದೇಶಗಳಿಗೆ ತೆರೆದೇ ಇದೆ. ಸಾಂಕ್ರಾಮಿಕ ರೋಗವನ್ನು ಎದುರಿಸಲು ಎಲ್ಲ ದೇಶಗಳು ಸಮನಾಗಿ ಲಸಿಕೆಗಳನ್ನು ಪಡೆಯಲು ಜಾಗತಿಕ ನ್ಯಾಯಸಮ್ಮತ ಒಕ್ಕೂಟವನ್ನು ನಿರ್ಮಿಸಬೇಕು ಎಂದು ಕೇಂದ್ರ ವಿದೇಶಾಂಗ ಸಚಿವ ಎಸ್ ಜೈ  ಶಂಕರ್ ಹೇಳಿದ್ದಾರೆ.

ರಾಜಧಾನಿಯಲ್ಲಿ ಮಂಗಳವಾರ ವರ್ಚುವಲ್ ವೇದಿಕೆ ಮೂಲಕ ಆರಂಭವಾದ ಭೌಗೋಳಿಕ ರಾಜಕೀಯ ಮತ್ತು ಭೂ-ಭೌತಶಾಸ್ತ್ರದ ಕುರಿತ ಸರ್ಕಾರದ ಪ್ರಮುಖ ಸಮ್ಮೇಳನವಾದ ರೈಸಿನಾ ಸಂವಾದದಲ್ಲಿ ಮಾತನಾಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ್, ಇತರ ದೇಶಗಳಿಗೆ ಬಾಗಿಲು ಮುಚ್ಚುವುದಿಲ್ಲ ಎಂದಿರುವ  ಭಾರತ, ಕೊರೋನಾವೈರಸ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಎಲ್ಲ ದೇಶಗಳು ಸಮನಾಗಿ ಲಸಿಕೆಗಳನ್ನು ಪಡೆಯಲು ಜಾಗತಿಕ ನ್ಯಾಯಸಮ್ಮತ ಒಕ್ಕೂಟವನ್ನು ನಿರ್ಮಿಸಲು ಕರೆ ನೀಡಿದರು.

'ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡುವುದು ಪ್ರಮುಖವಾಗಿದೆ. ಇಂದು ರಾಜತಾಂತ್ರಿಕತೆಯಲ್ಲಿ, ಒಳ್ಳೆಯದನ್ನು ಮಾಡುವುದು ಪ್ರಮುಖವೆನಿಸಿದೆ. ಭಾರತದ ಲಸಿಕೆ ಮೈತ್ರಿ ನೀತಿಯು ವಸುಧೈವ ಕುಟುಂಬಕಂನ ದೊಡ್ಡ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ. ಭಾರತ, ಜನವರಿಯಿಂದ 80ಕ್ಕೂ ಹೆಚ್ಚು ದೇಶಗಳಿಗೆ  ಕೋವಿಡ್‍-19 ಲಸಿಕೆಗಳನ್ನು ಪೂರೈಸಿದೆ. ಕೋವಿಡ್ -19 ಲಸಿಕೆಗಳನ್ನು ತಯಾರಿಸುವ ಭಾರತದ ಸಾಮರ್ಥ್ಯ ಜಾಗತಿಕ ಸಹಕಾರದ ಉದಾಹರಣೆಯಾಗಿದೆ. ಇದನ್ನು "ಏಕಮುಖ ರಸ್ತೆ" ಎಂದು ನೋಡಲಾಗುವುದಿಲ್ಲ ಎಂದು ಹೇಳಿದ್ದಾರೆ.

‘ಅಂತಾರಾಷ್ಟ್ರೀಯ ಸಹಕಾರದಿಂದ ಲಸಿಕೆಗಳನ್ನು ತಯಾರಿಸುವ ನಮ್ಮ ಸಾಮರ್ಥ್ಯ ವೃದ್ಧಿಯಾಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ‘ಪ್ರಬುದ್ಧ ಶಕ್ತಿ’ಯಾಗಿ ಹೊರಹೊಮ್ಮಬೇಕು. ಇತರ ದೇಶಗಳಿಗೆ ಭಾರತ ಬಾಗಿಲು ಮುಚ್ಚುವುದಿಲ್ಲ ಎಂದು ಜೈಶಂಕರ್ ಪ್ರತಿಪಾದಿಸಿದ್ದಾರೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ, ವಿಶ್ವ ವಾಣಿಜ್ಯ ಸಂಸ್ಥೆಯಲ್ಲಿ ಕೋವಿಡ್‍-19 ಲಸಿಕೆಗಳಿಗೆ ಸಂಬಂಧಿಸಿದ ಬೌದ್ಧಿಕ ಆಸ್ತಿ (ಹಕ್ಕುಸ್ವಾಮ್ಯ) ನಿಯಮಗಳನ್ನು ತಾತ್ಕಾಲಿಕವಾಗಿ ಮನ್ನಾ ಮಾಡಲು ಪ್ರಸ್ತಾಪಿಸಿವೆ. ಇದರಿಂದಾಗಿ ಬಡ ದೇಶಗಳಲ್ಲಿನ ಔಷಧಿ ತಯಾರಕರು ಪರಿಣಾಮಕಾರಿ ಲಸಿಕೆಗಳ ಉತ್ಪಾದನೆಯನ್ನು  ಶೀಘ್ರದಲ್ಲಿಯೇ ಪ್ರಾರಂಭಿಸಬಹುದಾಗಿದೆ ಎಂದು ಅವರು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT