ಮಮತಾ ಬ್ಯಾನರ್ಜಿ 
ದೇಶ

ಕೂಚ್ ಬೆಹಾರ್ ಘರ್ಷಣೆ ಪ್ರಕರಣವನ್ನು ಸರ್ಕಾರ ತನಿಖೆ ನಡೆಸಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ: ಮಮತಾ ಬ್ಯಾನರ್ಜಿ

ಕೂಚ್ ಬೆಹಾರ್‌ನ ಸೀತಾಲಕುಚಿಯಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ತನಿಖೆ ನಡೆಸಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಹೇಳಿದ್ದಾರೆ.

ಮಾತಾಭಂಗ: ಕೂಚ್ ಬೆಹಾರ್‌ನ ಸೀತಾಲಕುಚಿಯಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಸರ್ಕಾರ ತನಿಖೆ ನಡೆಸಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಬುಧವಾರ ಹೇಳಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಗೆ ಶನಿವಾರ ನಡೆದ ನಾಲ್ಕನೇ ಹಂತದ ಮತದಾನವು ಭಾರಿ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಕೂಚ್‌ ಬಿಹಾರ್ ಜಿಲ್ಲೆಯ ಸೀತಾಲಕುಚಿ ಕ್ಷೇತ್ರದ 126ನೇ ಸಂಖ್ಯೆಯ ಮತಗಟ್ಟೆಯಲ್ಲಿ ಘರ್ಷಣೆ ಸಂಭವಿಸಿದ್ದ ವೇಳೆ ಸಿಐಎಸ್‌ಎಫ್‌ (ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ) ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟಿದ್ದರು. ಘಟನೆಯು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.

ಘಟನೆಯಲ್ಲಿ ಮೃತಪಟ್ಟವರ ನಿವಾಸಕ್ಕೆ ಇಂದು ಮಮತಾ ಬ್ಯಾನರ್ಜಿಯವರು ಭೇಟಿ ನೀಡಿದ್ದು, ಸಾಂತ್ವನ ಹೇಳಿದ್ದಾರೆ. ಅಲ್ಲದೆ, ಪ್ರಕರಣ ಸಂಬಂಧ ನಮ್ಮ ಸರ್ಕಾರ ತನಿಖೆ ನಡೆಸಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ನೀಡುವ ಭರವಸೆ ನೀಡಿದ್ದಾರೆ.

ಘಟನೆಯಲ್ಲಿ ಇದೇ ಮೊದಲ ಬಾರಿ ಮತ ಹಾಕರು ಬಂದಿದ್ದ 18 ವರ್ಷದ ಆನಂದ ಬುರ್ಮಾನ್ ಎಂಬ ಯುವಕ ಕೂಡ ಮೃತಪಟ್ಟಿದ್ದು, ಯುವಕನ ಕುಟುಂಬಕ್ಕೆ ನ್ಯಾಯ ದೊರಕಿಸುವ ಭರವಸೆ ನೀಡಿದ್ದಾರೆ.

ಘರ್ಷಣೆ ಪ್ರಕರಣ ಸಂಬಂಧ ಈ ಹಿಂದೆ ಆದೇಶ ಹೊರಡಿಸಿದ್ದ ಚುನಾವಣಾ ಆಯೋಗ, ಸಿತಾಲ್​ಗುಚಿಗೆ ಮುಂದಿನ 72 ಗಂಟೆಗಳ ಅವಧಿಯಲ್ಲಿ ಹೊರಗಿನ ಯಾವುದೇ ರಾಜಕಾರಿಣಿಗಳು ಪ್ರವೇಶಿಸಬಾರದು ಎಂದು ಸೂಚಿಸಿತ್ತು.

ಆದರೆ, ಈ ಆದೇಶವನ್ನು ಮಮತಾ ಬ್ಯಾನರ್ಜಿಯವರು ತೀವ್ರವಾಗಿ ಖಂಡಿಸಿದ್ದರು. ನೊಂದ ಕುಟುಂಬಗಳನ್ನು ನಾನು ಭೇಟಿಯಾಗಬಾರದು ಎಂಬ ಒಂದೇ ಉದ್ದೇಶದಿಂದ ಆಯೋಗವು ಇಂಥ ಆದೇಶ ಹೊರಡಿಸಿದೆ ಎಂದು ದೂರಿದರು.

ನೊಂದ ಕುಟುಂಬಗಳನ್ನು ನಾನು ಭೇಟಿಯಾಗಬಾರದು ಎಂಬ ಕಾರಣಕ್ಕೆ ಚುನಾವಣಾ ಆಯೋಗವು ಇಂಥ ಆದೇಶ ಹೊರಡಿಸಿರುವುದು ದುರದೃಷ್ಟಕರ. ಆಯೋಗ ವಿಧಿಸಿರುವ 72 ಗಂಟೆಗಳ ನಿರ್ಬಂಧ ಮುಗಿದ ತಕ್ಷಣ ನಾನು ಆ ಕುಟುಂಬಗಳನ್ನು ಭೇಟಿಯಾಗುತ್ತೇನೆ. ನನ್ನ ಚುನಾವಣಾ ವೆಚ್ಚದ ನಿಧಿಯಿಂದಲೇ ಆ ಕುಟುಂಬಗಳಿಗೆ ಸಾಧ್ಯವಾದಮಟ್ಟಿಗೂ ಹಣಸಹಾಯ ಮಾಡುತ್ತೇನೆ ಎಂದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT