ಸಂಗ್ರಹ ಚಿತ್ರ 
ದೇಶ

ಆಕ್ಸಿಜನ್ ಬಳಕೆ ಇತಿಮಿತಿಯಲ್ಲಿರಲಿ, ಪೋಲಾಗದಂತೆ ನೋಡಿಕೊಳ್ಳಿ: ರಾಜ್ಯಗಳಿಗೆ ಕೇಂದ್ರ ಸೂಚನೆ

ದೇಶದಲ್ಲಿ ಸಾಕಷ್ಟು ಪ್ರಮಾಣದ ಆಮ್ಲಜನಕವಿದೆ ಎಂದು ಹೇಳುತ್ತಿರುವ ಕೇಂದ್ರ ಸರ್ಕಾರ ಇದರ ಮಧ್ಯೆ ವೈದ್ಯಕೀಯ ಆಮ್ಲಜನಕವನ್ನು ತರ್ಕಬದ್ಧವಾಗಿ ಬಳಸಿಕೊಳ್ಳಬೇಕು ಮತ್ತು ವ್ಯರ್ಥವಾಗದಂತೆ ನೋಡಿಕೊಳ್ಳಬೇಕೆಂದು ರಾಜ್ಯಗಳಿಗೆ ಸೂಚಿಸಿದೆ.

ನವದೆಹಲಿ: ದೇಶದಲ್ಲಿ ಸಾಕಷ್ಟು ಪ್ರಮಾಣದ ಆಮ್ಲಜನಕವಿದೆ ಎಂದು ಹೇಳುತ್ತಿರುವ ಕೇಂದ್ರ ಸರ್ಕಾರ ಇದರ ಮಧ್ಯೆ ವೈದ್ಯಕೀಯ ಆಮ್ಲಜನಕವನ್ನು ತರ್ಕಬದ್ಧವಾಗಿ ಬಳಸಿಕೊಳ್ಳಬೇಕು ಮತ್ತು ವ್ಯರ್ಥವಾಗದಂತೆ ನೋಡಿಕೊಳ್ಳಬೇಕೆಂದು ರಾಜ್ಯಗಳಿಗೆ ಸೂಚಿಸಿದೆ.

ಕೊರೋನಾ ಪೀಡಿತ ರೋಗಿಗಳ ಚಿಕಿತ್ಸೆಯಲ್ಲಿ ವೈದ್ಯಕೀಯ ಆಮ್ಲಜನಕವು ಒಂದು ನಿರ್ಣಾಯಕ ಅಂಶವಾಗಿದೆ. ಮಾರ್ಚ್ 2020ರಲ್ಲಿ ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಅಂತರ ಸಚಿವಾಲಯದ ಸಶಕ್ತ ಗುಂಪ(ಇಜಿ2)ನ್ನು ರಚಿಸಲಾಗಿದ್ದು ಇದು ಪೀಡಿತ ರಾಜ್ಯಗಳಲ್ಲಿನ ವೈದ್ಯಕೀಯ ಆಮ್ಲಜನಕ ಸೇರಿದಂತೆ ಅಗತ್ಯ ವೈದ್ಯಕೀಯ ಸಲಕರಣೆಗಳ ಲಭ್ಯತೆಯನ್ನು ಅಧ್ಯಯನ ಮಾಡಿತ್ತು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

'ಆಮ್ಲಜನಕ ಘಟಕಗಳ ಉತ್ಪಾದನೆ ಮತ್ತು ಲಭ್ಯವಿರುವ ಹೆಚ್ಚುವರಿ ದಾಸ್ತಾನುಗಳ ಜೊತೆಗೆ, ಪ್ರಸ್ತುತ ಆಮ್ಲಜನಕದ ಲಭ್ಯತೆಯು ಸಾಕಾಗುತ್ತದೆ' ಎಂದು ಸಚಿವಾಲಯ ಹೇಳಿದೆ. ಕಳೆದ ಎರಡು ದಿನಗಳಿಂದ ಪ್ರತಿದಿನ ತನ್ನ ಸಂಪೂರ್ಣ ಸಾಮರ್ಥ್ಯದಲ್ಲಿ ಆಮ್ಲಜನಕವನ್ನು ಉತ್ಪಾದಿಸುತ್ತಿದೆ ಎಂದು ತಿಳಿಸಿದೆ.

ಅಲ್ಲದೆ, ಜಿಲ್ಲೆಗಳಿಗೆ ಅಗತ್ಯಕ್ಕೆ ಅನುಗುಣವಾಗಿ ಆಮ್ಲಜನಕವನ್ನು ಸುಗಮವಾಗಿ ಪೂರೈಸಲು ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲು ರಾಜ್ಯಗಳಿಗೆ ಸೂಚಿಸಲಾಗಿದೆ. ಸಿಲಿಂಡರ್‌ಗಳು, ಟ್ಯಾಂಕರ್‌ಗಳು ಇತ್ಯಾದಿಗಳ ಪರಿಶೀಲನಾ ಅವಶ್ಯಕತೆ ಇದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

'ದೇಶದಲ್ಲಿ ಸುಮಾರು 7127 ಮೆ.ಟನ್ ಆಮ್ಲಜನಕ ಉತ್ಪಾದನಾ ಸಾಮರ್ಥ್ಯವಿದೆ. ಇನ್ನು ಅಗತ್ಯಕ್ಕೆ ಅನುಗುಣವಾಗಿ, ಉಕ್ಕಿನ ಸ್ಥಾವರಗಳೊಂದಿಗೆ ಲಭ್ಯವಿರುವ ಹೆಚ್ಚುವರಿ ಆಮ್ಲಜನಕವನ್ನು ಸಹ ಬಳಸಿಕೊಳ್ಳಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT