ರೆಮ್‌ಡಿಸಿವಿರ್‌ ಚುಚ್ಚುಮದ್ದು 
ದೇಶ

ಅಕ್ರಮವಾಗಿ ರೆಮ್‌ಡಿಸಿವಿರ್‌ ಚುಚ್ಚುಮದ್ದು ಮಾರಾಟ; ಮೂವರ ಬಂಧನ

ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್‌ಡಿಸಿವಿರ್‌ ಚುಚ್ಚು ಮದ್ದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವೈದ್ಯಕೀಯ ಸಿಬ್ಬಂದಿಗಳನ್ನು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‌

ಕಾನ್ಪುರ: ಕೋವಿಡ್‌ ರೋಗಿಗಳ ಚಿಕಿತ್ಸೆಗೆ ಬಳಸುವ ರೆಮ್‌ಡಿಸಿವಿರ್‌ ಚುಚ್ಚು ಮದ್ದನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ವೈದ್ಯಕೀಯ ಸಿಬ್ಬಂದಿಗಳನ್ನು ಉತ್ತರ ಪ್ರದೇಶ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ‌

ಕಾನ್ಪುರದಲ್ಲಿ ರೆಮ್‌ಡಿಸಿವಿರ್‌ ಚುಚ್ಚು ಮದ್ದನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪದ ಮೇರೆಗೆ ದಾಳಿಗಿಳಿದಿದ್ದ ಉತ್ತರ ಪ್ರದೇಶ ಪೊಲೀಸ್ ವಿಶೇಷ ಕಾರ್ಯಪಡೆ ಅಧಿಕಾರಿಗಳು ಇಂದು ಪ್ರಶಾಂತ್ ಶುಕ್ಲಾ ಮತ್ತು ನೌಬಸ್ತಾ ನಿವಾಸಿ ಮೋಹನ್ ಸೋನಿ ಮತ್ತು ಹರಿಯಾಣದ  ಸಚಿನ್ ಕುಮಾರ್ ಎಂಬುವವರನ್ನು ಬಂಧಿಸಿದ್ದಾರೆ. ಕಾನ್ಪುರ ಪೊಲೀಸರು ಮತ್ತು ಎಸ್‌ಟಿಎಫ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಈ ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ರೆಮ್‌ಡಿಸಿವಿರ್ ಚುಚ್ಚುಮದ್ದಿನ 265 ಶೀಷೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಟಿಎಫ್‌ ಹಿರಿಯ ಅಧಿಕಾರಿಯೊಬ್ಬರು  ತಿಳಿಸಿದ್ದಾರೆ.

ಈ ಬಗ್ಗೆ ಎಸ್‌ಟಿಎಫ್ ಹೇಳಿಕೆ ಬಿಡುಗಡೆ ಮಾಡಿದ್ದು, ಬಂಧಿತರು ಕಿಮ್ವಾಯ್ ನಗರದಲ್ಲಿ ರೆಮ್‌ಡಿಸಿವಿರ್‌ ಚುಚ್ಚುಮದ್ದನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ತಿಳಿಸಿದೆ. ಬಂಧಿತರ ಬಳಿ ರೆಮ್‌ಡಿಸಿವಿರ್‌ ಚುಚ್ಚು ಮದ್ದುಗಳನ್ನು ಖರೀದಿಸಿದ್ದಕ್ಕೆ ಬಿಲ್ ಇರಲಿಲ್ಲ. ಹಾಗೆಯೇ, ವಶಪಡಿಸಿಕೊಂಡ  ಶೀಷೆಗಳ ಮೇಲಿದ್ದ ಬ್ಯಾಚ್ ಸಂಖ್ಯೆ ಕಾಣೆಯಾಗಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದು, ಈ ಕಾಳಸಂತೆಯ ಜಾಲವನ್ನು ಪತ್ತೆ ಮಾಡಲು ಮೂವರ ಮೊಬೈಲ್‌ ಫೋನ್‌ ಕರೆಗಳ ವಿವರವನ್ನು ಸಂಗ್ರಹಿಸುತ್ತಿರುವುದಾಗಿ ಕಾನ್ಪುರದ ದಕ್ಷಿಣ ಉಪ ಪೊಲೀಸ್ ಆಯುಕ್ತ ರವೀನಾ ತ್ಯಾಗಿ ತಿಳಿಸಿದ್ದಾರೆ.

ಈ ಪ್ರಕರಣ ಸಂಬಂಧ ಬಾಬುಪುರ್ವಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT