ಸಂಗ್ರಹ ಚಿತ್ರ 
ದೇಶ

ಕೊರೋನಾ ಉಲ್ಬಣ: 18 ವರ್ಷ ಮೇಲ್ಪಟ್ಟ ಎಲ್ಲರಿಗೆ ಲಸಿಕೆ ಒದಗಿಸಿ; ಸುಪ್ರೀಂ ಕೋರ್ಟ್ ನಲ್ಲಿ ಪಿಐಎಲ್

ದೇಶಾದ್ಯಂತ ಕೊರೋನಾವೈರಸ್ ಪ್ರಕರಣಗಳಲ್ಲಿ ಹಠಾತ್ ಏರಿಕೆ ಕಂಡುಬಂದ ಕಾರಣ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್)ಯೊಂದು ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿದೆ.

ನಚದೆಹಲಿ: ದೇಶಾದ್ಯಂತ ಕೊರೋನಾವೈರಸ್ ಪ್ರಕರಣಗಳಲ್ಲಿ ಹಠಾತ್ ಏರಿಕೆ ಕಂಡುಬಂದ ಕಾರಣ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೋವಿಡ್ -19 ಲಸಿಕೆ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್)ಯೊಂದು ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿದೆ.

ಎರಡನೇ ಅಲೆಯಲ್ಲಿ ಕೊರೋನಾ ಉಲ್ಬಣವನ್ನು ನಿಯಂತ್ರಿಸಲು ಎಲ್ಲಾ ಯುವಜನತೆ ಹಾಗೂ ದುಡಿಯುವ ವರ್ಗಕ್ಕೆ ವ್ಯಾಪಕವಾದ ಲಸಿಕೆ ಅಗತ್ಯ ಎಂದು ವಕೀಲರಾದ ರಶ್ಮಿ ಸಿಂಗ್ ಸಲ್ಲಿಸಿದ ಮನವಿಯಲ್ಲಿ ತಿಳಿಸಲಾಗಿದೆ.

ಆಡಳಿತವು ಲಸಿಕೆಯ ಎರಡು ಡೋಸ್ ಗಳನ್ನು ನೀಡುವುದಕ್ಕಾಗಿ ಆರರಿಂದ ಎಂಟು ವಾರಗಳ ಅವಧಿ ತೆಗೆದುಕೊಳ್ಳುತ್ತಿದೆ. ಇದರಿಂದಾಗಿ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು ಲಸಿಕೆ ಪಡೆಯುವುದಕ್ಕೆ ವಿಳಂಬವಾಗುವುದಲ್ಲದೆ  ಆ ವೇಳೆಗೆ ಕೋವಿಡ್ 19 ವೈರಸ್ ವೇಗವಾಗಿ ಹರಡಬಹುದು ಎಂದು ಮನವಿಯಲ್ಲಿ ಕಳವಳ ವ್ಯಕ್ತಪಡಿಸಿಅಲಾಗಿದೆ.

18-45 ವರ್ಷ ವಯಸ್ಸಿನವರಿಗೆ ಲಸಿಕೆಗಳನ್ನು ನಿರಾಕರಿಸುವುದು ಅನಿಯಂತ್ರಿತ, "ತಾರತಮ್ಯ ಮತ್ತು ಅವಿವೇಕ"ದ ನಿರ್ಧಾರ ಎಂದು ಮನವಿಯಲ್ಲಿ ತಿಳಿಸಲಾಗಿದೆ, ಇಂತಹ ನಿರಾಕರಣೆಯು ಆರೋಗ್ಯದ ಹಕ್ಕನ್ನು ಮತ್ತು ಜೀವನ ಹಕ್ಕನ್ನು ಉಲ್ಲಂಘಿಸುತ್ತದೆ. ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸೇರಿದಂತೆ ಹಲವಾರು ತಜ್ಞರು ಕೋವಿಡ್ -19 ವ್ಯಾಕ್ಸಿನೇಷನ್ ಅನ್ನು ಹೆಚ್ಚಿಸಲು ಒತ್ತಾಯಿಸಿದ್ದಾರೆ ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಭಾರತವು ಪ್ರತಿದಿನ ಕನಿಷ್ಠ 10 ಮಿಲಿಯನ್ ಡೋಸ್‌ಗಳನ್ನು ನೀಡುವ ಅಗತ್ಯವಿದೆ ಎಂದು ಕೆಲವು ತಜ್ಞರು ಸಲಹೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. 

ಪ್ರಸ್ತುತ ಕೇಂದ್ರ ಸರ್ಕಾರವು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ಲಭ್ಯವಾಗುವಂತೆ ನಿಯಮ ರೂಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT