ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ 
ದೇಶ

'ವ್ಯಾಕ್ಸಿನೇಷನ್ ಡ್ರೈವ್' ಹೆಚ್ಚಿಸಿ: ಪ್ರಧಾನಿ ಮೋದಿಗೆ ಮನ್ ಮೋಹನ್ ಸಿಂಗ್ ಪತ್ರ!

ದೇಶದಲ್ಲಿ ಕೋವಿಡ್-19 ಬಿಕ್ಕಟ್ಟು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಪತ್ರ ಬರೆದಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್, ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ. 

ನವದೆಹಲಿ: ದೇಶದಲ್ಲಿ ಕೋವಿಡ್-19 ಬಿಕ್ಕಟ್ಟು ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಪತ್ರ ಬರೆದಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್, ಸಾಂಕ್ರಾಮಿಕ ವಿರುದ್ಧ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಡ್ರೈವ್ ಹೆಚ್ಚಿಸುವಂತೆ ಒತ್ತಾಯಿಸಿದ್ದಾರೆ. 

ಸಂಪೂರ್ಣ ಸಂಖ್ಯೆಯತ್ತ ನೋಡಬಾರದು, ಆದರೆ, ಲಸಿಕೆ ಪಡೆದುಕೊಂಡ ಶೇಕಡವಾರು ಜನಸಂಖ್ಯೆ ಕಡೆಗೆ ಗಮನ ಹರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡರು ಸಲಹೆ ನೀಡಿದ್ದಾರೆ.

ಕೋವಿಡ್-19 ವಿರುದ್ದದ ಹೋರಾಟದಲ್ಲಿ ಪ್ರಮುಖ ಅಸ್ತ್ರವಾಗಿರುವ ವ್ಯಾಕ್ಸಿನೇಷನ್ ಹೆಚ್ಚಳಕ್ಕೆ ಪ್ರಯತ್ನಿಸಬೇಕು, ಎಷ್ಟು ಸಂಖ್ಯೆಯ ಲಸಿಕೆ ಹಾಕಲಾಗಿದೆ ಎಂಬುದನ್ನು ನೋಡಬಾರದು. ಲಸಿಕೆ ಪಡೆದ ಶೇಕಡಾವಾರು ಜನಸಂಖ್ಯೆ ಮೇಲೆ ಗಮನ ಕೇಂದ್ರೀಕರಿಸಬೇಕು ಎಂದು ಅವರು ಹೇಳಿದ್ದಾರೆ. 

ಭಾರತ ಪ್ರಸ್ತುತ ತನ್ನ ಜನಸಂಖ್ಯೆಯ ಒಂದು ಸಣ್ಣ ಭಾಗಕ್ಕೆ ಮಾತ್ರ ಲಸಿಕೆ ನೀಡಿದೆ ಎಂಬುದನ್ನು ಗಮನಿಸಿರುವ ಸಿಂಗ್, ಸರಿಯಾದ ನೀತಿ ವಿನ್ಯಾಸದೊಂದಿಗೆ, ನಾವು ಹೆಚ್ಚು ಉತ್ತಮವಾಗಿ ಮತ್ತು ತ್ವರಿತವಾಗಿ ಲಸಿಕೆ ನೀಡಬೇಕಾಗಿದೆ.  ಸಾಂಕ್ರಾಮಿಕದ ವಿರುದ್ಧ ಹೋರಾಡಲು ನಾವು ಅನೇಕ ಕೆಲಸಗಳನ್ನು ಮಾಡಬೇಕು ಆದರೆ,  ಈ ಪ್ರಯತ್ನದ ಒಂದು ದೊಡ್ಡ ಭಾಗವಾಗಿ ವ್ಯಾಕ್ಸಿನೇಷನ್ ಹೆಚ್ಚಳ ಸೇರಿದಂತೆ ಇನ್ನೂ ಅನೇಕ ಸಲಹೆಗಳನ್ನು ಮನ ಮೋಹನ್ ಸಿಂಗ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ  ಸಾಂಕ್ರಾಮಿಕದ ವಿರುದ್ಧ ಹೋರಾಡಲು ಕೈಗೊಳ್ಳಬೇಕಾದ ಪ್ರಯತ್ನಗಳ ಬಗ್ಗೆ ಚರ್ಚಿಸಿದ ಚರ್ಚಿಸಿದ ಬೆನ್ನಲ್ಲೇ, ಮನ್ ಮೋಹನ್ ಸಿಂಗ್ ಈ ಸಲಹೆ ನೀಡಿದ್ದಾರೆ. ಅಲ್ಲದೇ,  ಮುಂದಿನ ಆರು ತಿಂಗಳುಗಳಿಗೆ ಆರ್ಡರ್ ಮತ್ತು ಪೂರೈಸಬೇಕಾದ ಲಸಿಕೆ ಡೋಸ್ ಗಳನ್ನು ಕೇಂದ್ರ ಸರ್ಕಾರ  ಪ್ರಕಟಿಸಬೇಕು ಎಂದು ಡಾ. ಮನ್ ಮೋಹನ್ ಸಿಂಗ್ ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT