ಕೋವಿಡ್-19 ರೋಗಿಗಳಿಗಾಗಿ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆಗೆ ಕೇಂದ್ರದ ನಿರ್ಬಂಧ 
ದೇಶ

ಕೋವಿಡ್-19 ರೋಗಿಗಳಿಗೆ ಆದ್ಯತೆ: ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಕೆಗೆ ಕೇಂದ್ರದ ನಿರ್ಬಂಧ

ಕೋವಿಡ್-19 ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ಕೇಂದ್ರ ಸರ್ಕಾರ ಕೈಗಾರಿಕೆಗಳಿಗೆ ಆಮ್ಲ ಜನಕ ಪೂರೈಕೆ ಮಾಡುವುದನ್ನು ನಿರ್ಬಂಧಿಸಿದೆ. 

ನವದೆಹಲಿ: ಕೋವಿಡ್-19 ರೋಗಿಗಳಿಗೆ ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ಕೇಂದ್ರ ಸರ್ಕಾರ ಕೈಗಾರಿಕೆಗಳಿಗೆ ಆಮ್ಲ ಜನಕ ಪೂರೈಕೆ ಮಾಡುವುದನ್ನು ನಿರ್ಬಂಧಿಸಿದೆ. 

ಕೊರೋನಾ 2ನೇ ಅಲೆ ದೇಶವನ್ನು ತೀವ್ರವಾಗಿ ಬಾಧಿಸುತ್ತಿದ್ದು, ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರೋಗಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಆಮ್ಲ ಜನಕದ ಅಗತ್ಯವಿದೆ.  ಈ ಹಿನ್ನೆಲೆಯಲ್ಲಿ ನಿರ್ದಿಷ್ಟ 9 ಕೈಗಾರಿಕೆಗಳನ್ನು ಹೊರತುಪಡಿಸಿ ಬೇರೆಲ್ಲಾ ಕೈಗಾರಿಕೆಗಳಿಗೂ ಕೇಂದ್ರ ಸರ್ಕಾರ ಆಮ್ಲಜನಕ ಪೂರೈಕೆಯನ್ನು ಸ್ಥಗಿತಗೊಳಿಸಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ನೇತೃತ್ವದ ಎಂಪರ್ವರ್ಡ್ ಗ್ರೂಪ್-II, ಈ ಆದೇಶ ಹೊರಡಿಸಿದ್ದು, ಗುರುವಾರದಿಂದ ಈ ನಿಯಮ ಜಾರಿಗೊಳ್ಳಲಿದೆ. ಇದೇ ವೇಳೆ ರೈಲ್ವೆ ಪರ್ಯಾಯವಾಗಿ ಆಕ್ಸಿಜನ್ ಎಕ್ಸ್ ಪ್ರೆಸ್ ನ್ನು ಪ್ರಾರಂಭಿಸಲಿದೆ. ಈ ನಡುವೆ ದೆಹಲಿಯಲ್ಲಿ ಆರೋಗ್ಯ ಬಿಕ್ಕಟ್ಟು ಉಂಟಾಗಿದ್ದು 100 ಐಸಿಯು ಬೆಡ್ ಗಳಷ್ಟೇ ಲಭ್ಯವಿದೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT