ಮನ್ ಮೋಹನ್ ಸಿಂಗ್, ಹರ್ಷವರ್ಧನ್ 
ದೇಶ

ಕೊರೋನಾ ಪರಿಸ್ಥಿತಿ ನಿರ್ವಹಣೆ: ಪ್ರಧಾನಿಗೆ ಪತ್ರ ಬರೆದ ಮನ್ ಮೋಹನ್ ಸಿಂಗ್ ವಿರುದ್ಧ ಹರ್ಷವರ್ಧನ್ ವಾಗ್ದಾಳಿ

ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ವಿರುದ್ಧ ಕೇಂದ್ರ ಸಚಿವ ಹರ್ಷವರ್ಧನ್ ಸೋಮವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು, ಜನರಿಗೆ ಲಸಿಕೆ ಹಾಕಿಸುವ ಬದಲು ಲಸಿಕೆ ಬಗ್ಗೆ ಅನುಮಾನಪಡುವಲ್ಲಿ  ಬ್ಯುಸಿಯಾಗಿವೆ ಎಂದು ಆರೋಪಿಸಿದ್ದಾರೆ.

ನವದೆಹಲಿ: ಸರ್ಕಾರದ ಕೋವಿಡ್ ನಿರ್ವಹಣೆಯನ್ನು ಟೀಕಿಸಿರುವ ಮಾಜಿ ಪ್ರಧಾನಿ ಡಾ.ಮನ್ ಮೋಹನ್ ಸಿಂಗ್ ಅವರ ವಿರುದ್ಧ ಕೇಂದ್ರ ಸಚಿವ ಹರ್ಷವರ್ಧನ್ ಸೋಮವಾರ ವಾಗ್ದಾಳಿ ನಡೆಸಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು, ಜನರಿಗೆ ಲಸಿಕೆ ಹಾಕಿಸುವ ಬದಲು ಲಸಿಕೆ ಬಗ್ಗೆ ಅನುಮಾನಪಡುವಲ್ಲಿ  ಬ್ಯುಸಿಯಾಗಿವೆ ಎಂದು ಆರೋಪಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಮನ್ ಮೋಹನ್ ಸಿಂಗ್ ಪತ್ರ ಕುರಿತಂತೆ ಪ್ರತಿಕ್ರಿಯಿಸಿದ ಹರ್ಷವರ್ಧನ್, ಹಿರಿಯ ಕಾಂಗ್ರೆಸ್ ಮುಖಂಡರು ಅವರ ನಿಲುವಿಗೆ ದೊಡ್ಡ ಅಪಚಾರ ಮಾಡಿದ್ದಾರೆ ಎಂದಿದ್ದಾರೆ. 

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಲಸಿಕೆ ಮಹತ್ವವನ್ನು ಸಿಂಗ್ ಅರ್ಥ ಮಾಡಿಕೊಂಡಿರುವುದನ್ನು ಒಪ್ಪುತ್ತೇನೆ. ಕೆಲ ಕಾಂಗ್ರೆಸ್ ಆಡಳಿತ ವಿರುವ ರಾಜ್ಯಗಳಲ್ಲಿ ಹಿರಿಯ ನಾಗರಿಕರು, ಮುಂಚೂಣಿ ಕಾರ್ಯಕರ್ತರಿಗೂ ಕೂಡಾ ಲಸಿಕೆ ಹಾಕಿಲ್ಲ ಎಂದು ಹೇಳಿದ್ದಾರೆ.

ಸಿಂಗ್ ಅವರಿಗೆ ಟ್ವೀಟ್ ಮಾಡಿರುವ ಹರ್ಷವರ್ಧನ್,ನಿಮ್ಮ ರಚನಾತ್ಮಕ, ಅಮೂಲ್ಯವಾದ ಸಲಹೆಗಳನ್ನು ಕಾಂಗ್ರೆಸ್ ಮುಖಂಡರು ಪಾಲಿಸಿದರೆ ಇತಿಹಾಸವು ನಿಮಗೆ ದಯೆವುಳ್ಳದಾಗಿರುತ್ತದೆ ಎಂದು ಹೇಳಿದ್ದಾರೆ.

ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ಡಾ. ಮನ್ ಮೋಹನ್ ಸಿಂಗ್, ವಾಕ್ಸಿನೇಷನ್ ಹೆಚ್ಚಳ ಸೇರಿದಂತೆ ಕೋವಿಡ್-19 ಬಿಕ್ಕಟ್ಟು ಹೋರಾಟದದ ನಾಲ್ಕು ಕ್ರಮಗಳನ್ನು ಸಲಹೆ ನೀಡಿದ್ದರು. ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳು ನಿಮ್ಮ ದೃಷ್ಟಿಕೋನವನ್ನು ಹಂಚಿಕೊಳ್ಳಲುತ್ತಿಲ್ಲ ಎಂದು ಹರ್ಷವರ್ಧನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT