ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ಲಾಕ್ ಡೌನ್ ಭೀತಿ: ವಲಸೆ ಕಾರ್ಮಿಕರು ದೆಹಲಿ ತೊರೆಯದಂತೆ ಮುಖ್ಯಮಂತ್ರಿ ಕೇಜ್ರಿವಾಲ್ ಮನವಿ

ವಲಸೆ ಕಾರ್ಮಿಕರು ಲಾಕ್ ಡೌನ್ ಭೀತಿಯಿಂದ ರಾಷ್ಟ್ರ ರಾಜಧಾನಿಯನ್ನು ತೊರೆದು, ತಮ್ಮ ಊರುಗಳಿಗೆ ಮರಳದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಎಲ್ಲಾ ರೀತಿಯ ನೆರವು ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. 

ನವದೆಹಲಿ: ವಲಸೆ ಕಾರ್ಮಿಕರು ಲಾಕ್ ಡೌನ್ ಭೀತಿಯಿಂದ ರಾಷ್ಟ್ರ ರಾಜಧಾನಿಯನ್ನು ತೊರೆದು, ತಮ್ಮ ಊರುಗಳಿಗೆ ಮರಳದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೋಮವಾರ ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಎಲ್ಲಾ ರೀತಿಯ ನೆರವು ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ. 

ಕೈ ಮುಗಿದು ಮನವಿ ಮಾಡಿಕೊಳ್ಳುತ್ತೀನಿ, ದೆಹಲಿಯನ್ನು ತೊರೆಯಬೇಡಿ. ಇದು ಆರು ದಿನಗಳ ಸಣ್ಣ ಲಾಕ್ ಡೌನ್, ಈ ದಿನಗಳಲ್ಲಿ ನೀವು ಪ್ರಯಾಣ ಮಾಡುವುದರಲ್ಲಿ ವ್ಯರ್ಥ ಮಾಡುತ್ತೀರಾ, ಇಲ್ಲಿಯೇ ಇರಿ, ಸರ್ಕಾರ ಎಲ್ಲಾ ರೀತಿಯ ಸಹಕಾರ ನೀಡಲಾಗಿದೆ. ನನ್ನ ಮೇಲೆ ನಂಬಿಕೆಯಿಡಿ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಬೇರೆ ಯಾವುದೇ ಆಯ್ಕೆಗಳಿಲ್ಲದೆ ಲಾಕ್ ಡೌನ್ ನಿರ್ಧಾರ ಕೈಗೊಳ್ಳಲಾಗಿದೆ. ಲಾಕ್ ಡೌನ್ ನಿಂದ ಜನರು ವಿಶೇಷವಾಗಿ ಬಡ ಜನರು ಅನುಭವಿಸುವ ಸಂಕಷ್ಟ ಅರಿವಿದೆ ಎಂದು ಹೇಳಿದ ಕೇಜ್ರಿವಾಲ್,  ಲಾಕ್ ಡೌನ್ ಅವಧಿಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಹೆಚ್ಚಿನ ಹಾಸಿಗೆ ವ್ಯವಸ್ಥೆ ಕಲ್ಪಿಸಲಾಗುವುದು, ಆರು ದಿನಗಳಲ್ಲಿ ಹೆಚ್ಚಿನ ಹಾಸಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕಳೆದ 24 ಗಂಟೆಗಳ ಅವಧಿಯಲ್ಲಿ 23,500 ಪ್ರಕರಣಗಳು ವರದಿಯಾಗಿವೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಸುಮಾರು 25 ಸಾವಿರ ಪ್ರಕರಣಗಳು ವರದಿಯಾಗಿವೆ. ಪಾಸಿಟಿವಿಟಿ ದರ ಹಾಗೂ ಸೋಂಕು ಪ್ರಮಾಣ ಕೂಡಾ ಹೆಚ್ಚಾಗಿದೆ. ಪ್ರತಿದಿನ 25 ಸಾವಿರ ರೋಗಿಗಳು ಬಂದರೆ, ವ್ಯವಸ್ಥೆ ಅದೋಗತ್ತಿಗೆ ಇಳಿಯಲಿದೆ. ಹಾಸಿಗೆಗಳ ಕೊರತೆ ಉಂಟಾಗಲಿದೆ ಎಂದರು.

ದೆಹಲಿ ಮಾರಕ ವೈರಸ್ ನ ನಾಲ್ಕನೇ ಅಲೆಯಲ್ಲಿ ಸಿಲುಕಿದ್ದು,  ಲೆಫ್ಟಿನೆಂಟ್ ಗೌರ್ನರ್ ಜೊತೆಗೆ ಚರ್ಚಿಸಿದ ನಂತರ ಇಂದು ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಆರು ದಿನಗಳ ಕಾಲ ಲಾಕ್ ಡೌನ್ ಜಾರಿಗೊಳಿಸಲಾಗಿದೆ ಎಂದು ಅರವಿಂದ್ ಕೇಜ್ರಿವಾಲ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT