ಮಮತಾ ಬ್ಯಾನರ್ಜಿ 
ದೇಶ

ಕೊರೋನಾ ಹೆಚ್ಚಳ: ಕೈ ಮುಗಿದು ಕೇಳ್ತಿನಿ, ಒಂದೆರಡು ದಿನಗಳಲ್ಲಿ ಚುನಾವಣೆ ಮುಗಿಸಿ; ಆಯೋಗಕ್ಕೆ ಮಮತಾ ಒತ್ತಾಯ 

ಕೋವಿಡ್-19 ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಈ ಹಿಂದೆ ಘೋಷಿಸಿದ್ದಂತೆ ಮೂರು ಹಂತದ ಬದಲಿಗೆ ಒಂದು ಅಥವಾ ಎರಡು ದಿನಗಳಲ್ಲಿ  ಚುನಾವಣೆಯನ್ನು ಮುಗಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಚಾಕುಲಿಯಾ: ಕೋವಿಡ್-19 ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಚುನಾವಣಾ ಆಯೋಗ ಈ ಹಿಂದೆ ಘೋಷಿಸಿದ್ದಂತೆ ಮೂರು ಹಂತದ ಬದಲಿಗೆ ಒಂದು ಅಥವಾ ಎರಡು ದಿನಗಳಲ್ಲಿ  ಚುನಾವಣೆಯನ್ನು ಮುಗಿಸುವಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಉತ್ತರ್ ದಿನಾಜ್ ಪುರದಲ್ಲಿ ಚುನಾವಣಾ ರ‍್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಮಮತಾ ಬ್ಯಾನರ್ಜಿ, ಉಳಿದ ಹಂತದ ಚುನಾವಣೆಗಳನ್ನು ಒಟ್ಟಿಗೆ ಮಾಡದೆ ಬಿಜೆಪಿ ಪರವಾಗಿ ಆಯೋಗ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದ ಅವರು, ಚುನಾವಣಾ ಆಯೋಗ ಸಾರ್ವಜನಿಕರ ಆರೋಗ್ಯಕ್ಕೆ ಆದ್ಯತೆ ನೀಡಬೇಕು ಎಂದರು.

ಕೈ ಮುಗಿದು ಚುನಾವಣಾ ಆಯೋಗದ ಬಳಿ ಮನವಿ ಮಾಡುತ್ತೇನೆ. ಮುಂದಿನ ಮೂರು ಹಂತದ ಚುನಾವಣೆಯನ್ನು ಒಂದೇ ಹಂತದಲ್ಲಿ ಮುಗಿಸಿ, ಇಲ್ಲವೇ ಒಂದೆರಡು ದಿನಗಳಲ್ಲಿ ಪೂರ್ಣಗೊಳಿಸಿ, ಒಂದು ದಿನ ಉಳಿಸಿ, ಬಿಜೆಪಿ ಏನು ಹೇಳುತ್ತದೆಯೋ ಅದರ ಆಧಾರದ ಮೇಲೆ ನಿರ್ಧಾರ ಕೈಗೊಳ್ಳಬೇಡಿ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಚುನಾವಣಾ ದಿನಾಂಕವನ್ನು ಮೊಟುಕಗೊಳಿಸಿ, ಸಾಧ್ಯವಾದಲ್ಲಿ ಒಂದೇ ದಿನ ಮುಗಿಸಿ ಎಂದು ಮಮತಾ ಬ್ಯಾನರ್ಜಿ ಹೇಳಿದರು.

ತಾನು ಹಾಗೂ ಟಿಎಂಸಿಯ ಇತರ ಮುಖಂಡರು ಯಾವುದೇ ಚುನಾವಣಾ ರ‍್ಯಾಲಿಯನ್ನು ಮಾಡುವುದಿಲ್ಲ ಎಂದು  ಹೇಳಿದ ಮಮತಾ, ಲಸಿಕೆ ಬಿಕ್ಕಟ್ಟು ಪರಿಹರಿಸುವ ನಿಟ್ಟಿನಲ್ಲಿ ನರೇಂದ್ರ ಮೋದಿ ಸರ್ಕಾರ ಕಳೆದ ಆರು ತಿಂಗಳಲ್ಲಿ ಯಾವುದೇ ಸೂಕ್ತ ಕ್ರಮ ಕೈಗೊಳ್ಳಲಿಲ್ಲ ಎಂದು ಆರೋಪಿಸಿದರು. ಬಿಜೆಪಿಯವರು ದಂಗೆಕೋರರು, ಬಂಗಾಳವನ್ನು ಗುಜರಾತ್ ಆಗಲು ಅವರಿಗೆ ಅವಕಾಶ ಮಾಡಿಕೊಡಬೇಡಿ ಎಂದು ಜನರಲ್ಲಿ ಅವರು ಮನವಿ ಮಾಡಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT