ರಾಹುಲ್ ಗಾಂಧಿ 
ದೇಶ

ಚೀನಾ ಜತೆ ಸರ್ಕಾರದ ವ್ಯರ್ಥ ಮಾತುಕತೆ, ರಾಷ್ಟ್ರೀಯ ಭದ್ರತೆಗೆ ಅಪಾಯ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರ ಚೀನಾದೊಂದಿಗೆ ನಡೆಸಿರುವ ಮಾತುಕತೆ ‘ವ್ಯರ್ಥ’ ಎಂದಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು, ರಾಷ್ಟ್ರೀಯ ಭದ್ರತೆಗೆ ಅಪಾಯ ಎದುರಾಗಿದೆ ಎಂದು ಸೋಮವಾರ ಆರೋಪಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ಚೀನಾದೊಂದಿಗೆ ನಡೆಸಿರುವ ಮಾತುಕತೆ ‘ವ್ಯರ್ಥ’ ಎಂದಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು, ರಾಷ್ಟ್ರೀಯ ಭದ್ರತೆಗೆ ಅಪಾಯ ಎದುರಾಗಿದೆ ಎಂದು ಸೋಮವಾರ ಆರೋಪಿಸಿದ್ದಾರೆ.

ಪೂರ್ವ ಲಡಾಖ್‌ನ ಹಾಟ್‌ ಸ್ಪ್ರಿಂಗ್ಸ್‌, ಗೊಗ್ರಾ ಮತ್ತು ಡೆಪಸಾಂಗ್‌ ಪ್ರದೇಶಗಳಿಂದ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಲು ಚೀನಾ ನಿರಾಕರಿಸಿರುವ ಕುರಿತು ವರದಿಗಳು ಪ್ರಕಟವಾಗಿದ್ದನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದಾರೆ.

‘ಗೊಗ್ರಾ-ಹಾಟ್ ಸ್ಪ್ರಿಂಗ್ಸ್ ಮತ್ತು ಡೆಪ್ಸಾಂಗ್ ಭೂ ಪ್ರದೇಶಗಳಲ್ಲಿ ಚೀನಾ ಆಕ್ರಮಣ ಮುಂದುವರಿದಿದೆ. ಇದು  ಡಿಬಿಒ ವಾಯುನೆಲೆ ಸೇರಿದಂತೆ ಭಾರತದ ರಕ್ಷಣಾ ಕಾರ್ಯತಂತ್ರದ ಹಿತಾಸಕ್ತಿಗೆ ಎದುರಾದ ನೇರ ಅಪಾಯವಾಗಿದೆ‘ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆಯಷ್ಟೇ ಕಾಂಗ್ರೆಸ್, ಪೂರ್ವ ಲಡಾಖ್‌ನ ಇತರ ಪ್ರದೇಶಗಳಲ್ಲಿ ನಡೆದಿರುವ ಸಂಘರ್ಷವನ್ನು ತಡೆಯವಲ್ಲಿ ಚೀನಾದೊಂದಿಗೆ ನಡೆದ ಮಾತುಕತೆಗಳು ಏಕೆ ‘ಫಲಿತಾಂಶ ನೀಡಿಲ್ಲ‘ ಎಂದು ಪ್ರಶ್ನಿಸಿತ್ತು.

ಚೀನಾ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ ಬಗ್ಗೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ, ಕಾಂಗ್ರೆಸ್ ಹಿರಿಯ ವಕ್ತಾರ ಅಜಯ್ ಮಾಕೆನ್ ಅವರು, ಈ ವಿಷಯದ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬರಬೇಕೆಂದು ಒತ್ತಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT