ರಾಹುಲ್ ಗಾಂಧಿ 
ದೇಶ

ಚೀನಾ ಜತೆ ಸರ್ಕಾರದ ವ್ಯರ್ಥ ಮಾತುಕತೆ, ರಾಷ್ಟ್ರೀಯ ಭದ್ರತೆಗೆ ಅಪಾಯ: ರಾಹುಲ್ ಗಾಂಧಿ

ಕೇಂದ್ರ ಸರ್ಕಾರ ಚೀನಾದೊಂದಿಗೆ ನಡೆಸಿರುವ ಮಾತುಕತೆ ‘ವ್ಯರ್ಥ’ ಎಂದಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು, ರಾಷ್ಟ್ರೀಯ ಭದ್ರತೆಗೆ ಅಪಾಯ ಎದುರಾಗಿದೆ ಎಂದು ಸೋಮವಾರ ಆರೋಪಿಸಿದ್ದಾರೆ.

ನವದೆಹಲಿ: ಕೇಂದ್ರ ಸರ್ಕಾರ ಚೀನಾದೊಂದಿಗೆ ನಡೆಸಿರುವ ಮಾತುಕತೆ ‘ವ್ಯರ್ಥ’ ಎಂದಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು, ರಾಷ್ಟ್ರೀಯ ಭದ್ರತೆಗೆ ಅಪಾಯ ಎದುರಾಗಿದೆ ಎಂದು ಸೋಮವಾರ ಆರೋಪಿಸಿದ್ದಾರೆ.

ಪೂರ್ವ ಲಡಾಖ್‌ನ ಹಾಟ್‌ ಸ್ಪ್ರಿಂಗ್ಸ್‌, ಗೊಗ್ರಾ ಮತ್ತು ಡೆಪಸಾಂಗ್‌ ಪ್ರದೇಶಗಳಿಂದ ಸೇನೆಯನ್ನು ಹಿಂದಕ್ಕೆ ಕರೆಸಿಕೊಳ್ಳಲು ಚೀನಾ ನಿರಾಕರಿಸಿರುವ ಕುರಿತು ವರದಿಗಳು ಪ್ರಕಟವಾಗಿದ್ದನ್ನು ಉಲ್ಲೇಖಿಸಿ ರಾಹುಲ್ ಗಾಂಧಿ ಟ್ವೀಟ್‌ ಮಾಡಿದ್ದಾರೆ.

‘ಗೊಗ್ರಾ-ಹಾಟ್ ಸ್ಪ್ರಿಂಗ್ಸ್ ಮತ್ತು ಡೆಪ್ಸಾಂಗ್ ಭೂ ಪ್ರದೇಶಗಳಲ್ಲಿ ಚೀನಾ ಆಕ್ರಮಣ ಮುಂದುವರಿದಿದೆ. ಇದು  ಡಿಬಿಒ ವಾಯುನೆಲೆ ಸೇರಿದಂತೆ ಭಾರತದ ರಕ್ಷಣಾ ಕಾರ್ಯತಂತ್ರದ ಹಿತಾಸಕ್ತಿಗೆ ಎದುರಾದ ನೇರ ಅಪಾಯವಾಗಿದೆ‘ ಎಂದು ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ.

ನಿನ್ನೆಯಷ್ಟೇ ಕಾಂಗ್ರೆಸ್, ಪೂರ್ವ ಲಡಾಖ್‌ನ ಇತರ ಪ್ರದೇಶಗಳಲ್ಲಿ ನಡೆದಿರುವ ಸಂಘರ್ಷವನ್ನು ತಡೆಯವಲ್ಲಿ ಚೀನಾದೊಂದಿಗೆ ನಡೆದ ಮಾತುಕತೆಗಳು ಏಕೆ ‘ಫಲಿತಾಂಶ ನೀಡಿಲ್ಲ‘ ಎಂದು ಪ್ರಶ್ನಿಸಿತ್ತು.

ಚೀನಾ ತನ್ನ ಸೈನ್ಯವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿದ ಬಗ್ಗೆ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ, ಕಾಂಗ್ರೆಸ್ ಹಿರಿಯ ವಕ್ತಾರ ಅಜಯ್ ಮಾಕೆನ್ ಅವರು, ಈ ವಿಷಯದ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬರಬೇಕೆಂದು ಒತ್ತಾಯಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT