ನಟ ಮನ್ಸೂರ್ ಅಲಿಖಾನ್ 
ದೇಶ

ಕೋವಿಡ್-19 ಲಸಿಕೆ ಕುರಿತು ಹೇಳಿಕೆ: ನಟ ಮನ್ಸೂರ್ ಅಲಿಖಾನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ದಾಖಲು 

ಕೋವಿಡ್ -19 ಲಸಿಕೆ ವಿರುದ್ಧ ಹೇಳಿಕೆ ಹಿನ್ನೆಲೆಯಲ್ಲಿ ತಮಿಳು ನಟ ಮನ್ಸೂರ್ ಅಲಿಖಾನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚೆನ್ನೈ ನಗರ ಪೊಲೀಸ್ ಆಯುಕ್ತರಿಗೆ ದೂರನ್ನು ಸಲ್ಲಿಸಲಾಗಿದೆ.

ಚೆನ್ನೈ: ಕೋವಿಡ್ -19 ಲಸಿಕೆ ವಿರುದ್ಧ ಹೇಳಿಕೆ ಹಿನ್ನೆಲೆಯಲ್ಲಿ ತಮಿಳು ನಟ ಮನ್ಸೂರ್ ಅಲಿಖಾನ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಚೆನ್ನೈ ನಗರ ಪೊಲೀಸ್ ಆಯುಕ್ತರಿಗೆ ದೂರನ್ನು ಸಲ್ಲಿಸಲಾಗಿದೆ.

ಶನಿವಾರ ದೂರನ್ನು ಸ್ವೀಕರಿಸಲಾಗಿದ್ದು,  ದಕ್ಷಿಣ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಿಗೆ ವರ್ಗಾಯಿಸಲಾಗಿದೆ. ಅದು ಅವರ ವ್ಯಾಪ್ತಿಯಲ್ಲಿ ಬರಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶುಕ್ರವಾರ ನಟ ವಿವೇಕ್ ದಾಖಲಾಗಿದ್ದ ಆಸ್ಪತ್ರೆ ಮುಂಭಾಗ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅಲಿಖಾನ್, ಲಸಿಕೆಯ ಅಂಶಗಳ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಹೇಳಿದರಲ್ಲದೇ,  ಜನರನ್ನು ಹಾದಿತಪ್ಪಿಸಲಾಗುತ್ತಿದೆ ಎಂದು  ಆರೋಗ್ಯ ಕಾರ್ಯದರ್ಶಿಯನ್ನು ದೂಷಿಸಿದ್ದರು. 

ಕೋವಿಡ್- 19 ಲಸಿಕೆಯನ್ನು ತೆಗೆದುಕೊಳ್ಳುವಂತೆ ಸರ್ಕಾರ ಒತ್ತಾಯಿಸುತ್ತಿದೆ. ಒಂದು ವೇಳೆ ವಿವೇಕ್ ಲಸಿಕೆ ತೆಗೆದುಕೊಳ್ಳದಿದ್ದರೆ ಬದುಕುತ್ತಿದ್ದರು. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಬೀದಿ ಬೀದಿಗಳಲ್ಲಿ ಓಡಾಡಿದ್ದೇನೆ. ಭಿಕ್ಷುಕರೊಂದಿಗೆ ಆಹಾರ ಹಂಚಿಕೊಂಡಿದ್ದೇನೆ. ನನಗೆ ಸೋಂಕು ತಗುಲಿಲ್ಲ. ಮಾಸ್ಕ್ ನ್ನು ಸರ್ಕಾರ ಕಡ್ಡಾಯಗೊಳಿಸಬಾರದು ಎಂದು ಮನ್ಸೂರ್ ಅಲಿಖಾನ್ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT