ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ 
ದೇಶ

ಜಾರ್ಖಂಡ್ ನಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ಸಿಎಂ ಹೇಮಂತ್ ಸೊರೆನ್

ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ರಾಜ್ಯದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ಮಂಗಳವಾರ ಘೋಷಿಸಿದ್ದಾರೆ.

ರಾಂಚಿ: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ರಾಜ್ಯದಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ಮಂಗಳವಾರ ಘೋಷಿಸಿದ್ದಾರೆ.

ರಾಜ್ಯ ಸರ್ಕಾರದ ಮೂಲಗಳ ಪ್ರಕಾರ, ಏಪ್ರಿಲ್ 22 ರಂದು ಬೆಳಗ್ಗೆ 6 ರಿಂದ ಏಪ್ರಿಲ್ 29 ರಂದು ಸಂಜೆ 6 ಗಂಟೆಯ ರವರೆಗೆ ಲಾಕ್ ಡೌನ್ ಜಾರಿಯಾಗಲಿದೆ. ಪರಿಸ್ಥಿತಿಯನ್ನು ಗಮನಿಸಿದ ನಂತರ ಲಾಕ್ ಡೌನ್ ಮತ್ತಷ್ಟು ದಿನ ವಿಸ್ತರಿಸುವ ಸಾಧ್ಯತೆ ಇದೆ.

ಆದಾಗ್ಯೂ, ಲಾಕ್‌ಡೌನ್ ಸಮಯದಲ್ಲಿ ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ. 
ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಚೇರಿಗಳು ಸೇರಿದಂತೆ ಇತರೆ ಎಲ್ಲಾ ಖಾಸಗಿ ಕಚೇರಿಗಳನ್ನು ಸಹ ಬಂದ್ ಮಾಡಲಾಗುತ್ತಿದೆ.

"ಕರೋನಾ ವೈರಸ್ ಚೈನ್ ಬ್ರೇಕ್ ಮಾಡಲು ಏಪ್ರಿಲ್ 22 ರಿಂದ ಏಪ್ರಿಲ್ 29 ರವರೆಗೆ 'ಸ್ವಾಸ್ಥ್ಯ ಸುರಕ್ಷಾ ಸಪ್ತಾಹ'ವನ್ನು ಆಚರಿಸಲು ನಾವು ನಿರ್ಧರಿಸಿದ್ದೇವೆ. ಅದರ ಅಡಿಯಲ್ಲಿ ಅಗತ್ಯ ವಸ್ತುಗಳ ಮಾರಾಟ ಮಾಡುವುದನ್ನು ಹೊರತುಪಡಿಸಿ ಇತರೆ ಎಲ್ಲಾ ಅಂಗಡಿಗಳು ಮತ್ತು ವ್ಯಾಪಾರ ಸಂಸ್ಥೆಗಳು ಬಂದ್ ಮಾಡಲಾಗುವುದು ಎಂದು ಸಿಎಂ ಸೊರೆನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT