ಕೋವ್ಯಾಕ್ಸಿನ್ 
ದೇಶ

ದೇಶೀ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆ 'ಡಬಲ್ ರೂಪಾಂತರಿ ಕೊರೋನಾ ವೈರಸ್' ಅನ್ನೂ ಕೂಡ ತಟಸ್ಥಗೊಳಿಸಬಲ್ಲದು: ಐಸಿಎಂಆರ್

ದೇಶೀ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆ ದೇಶದಲ್ಲಿ ಉಲ್ಬಣವಾಗಿರುವ 'ಡಬಲ್ ರೂಪಾಂತರಿ ಕೊರೋನಾ ವೈರಸ್' ಅನ್ನೂ ಕೂಡ ತಟಸ್ಥಗೊಳಿಸಬಲ್ಲದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.

ನವದೆಹಲಿ: ದೇಶೀ ನಿರ್ಮಿತ ಕೋವ್ಯಾಕ್ಸಿನ್ ಲಸಿಕೆ ದೇಶದಲ್ಲಿ ಉಲ್ಬಣವಾಗಿರುವ 'ಡಬಲ್ ರೂಪಾಂತರಿ ಕೊರೋನಾ ವೈರಸ್' ಅನ್ನೂ ಕೂಡ ತಟಸ್ಥಗೊಳಿಸಬಲ್ಲದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಐಸಿಎಂಆರ್, ಸ್ಥಳೀಯವಾಗಿ ಅಭಿವೃದ್ಧಿಪಡಿಸಿರುವ ಕೋವಿಡ್-19 ಲಸಿಕೆ, ಕೊವಾಕ್ಸಿನ್, SARS-CoV-2 ನ ಅನೇಕ ರೂಪಾಂತರಗಳನ್ನು ತಟಸ್ಥಗೊಳಿಸುತ್ತದೆ ಮತ್ತು 'ಡಬಲ್ ರೂಪಾಂತರಿ ವೈರಸ್' ನ ಒತ್ತಡದ ವಿರುದ್ಧ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ  ಎಂದು ಹೇಳಿದೆ.

ಭಾರತ್ ಬಯೋಟೆಕ್‌ ಸಂಸ್ಥೆ ಉತ್ಪಾದಿಸಿರುವ ಕೋವಾಕ್ಸಿನ್ ಭಾರತದಲ್ಲಿ ಮತ್ತು ವಿಶ್ವದಾದ್ಯಂತ ಹಲವಾರು ದೇಶಗಳಲ್ಲಿ ಕೋವಿಡ್-19 ಚಿಕಿತ್ಸೆಗಾಗಿ ತುರ್ತು ಬಳಕೆ ಅನುಮತಿ ಪಡೆಯಲಾಗಿದೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಐಸಿಎಂಆರ್, 'ಐಸಿಎಂಆರ್ ಅಧ್ಯಯನವು ಎಸ್‌ಎಆರ್ಎಸ್-ಕೋವಿ -2 ವೈರಸ್ ನ ಅನೇಕ ರೂಪಾಂತರಗಳ ವಿರುದ್ಧ ಕೋವಾಕ್ಸಿನ್ ಲಸಿಕೆ ತಟಸ್ಥಗೊಳಿಸುತ್ತದೆ ಮತ್ತು ಡಬಲ್ ರೂಪಾಂತರಿತ ವೈರಸ್ ನ ಒತ್ತಡವನ್ನು ತಟಸ್ಥಗೊಳಿಸುತ್ತದೆ.

ಐಸಿಎಂಆರ್-ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ SARS-CoV-2 ವೈರಸ್‌ನ ಅನೇಕ ರೂಪಾಂತರಗಳನ್ನು ಯಶಸ್ವಿಯಾಗಿ ಪ್ರತ್ಯೇಕಿಸಿದೆ. ಈ ಪೈಕಿ B.1.1.7 (ಬ್ರಿಟನ್ ರೂಪಾಂತರಿ ವೈರಸ್), B.1.1.28 (ಬ್ರೆಜಿಲ್ ರೂಪಾಂತರಿ ವೈರಸ್) ಮತ್ತು B.1.351 (ದಕ್ಷಿಣ ಆಫ್ರಿಕಾ ರೂಪಾಂತರಿ  ವೈರಸ್) ವೈರಸ್ ಗಳನ್ನು ಹೆಸರಿಸಲಾಗಿದೆ.

ಐಸಿಎಂಆರ್-ಎನ್ಐವಿ ಯುಕೆ ರೂಪಾಂತರ ಮತ್ತು ಬ್ರೆಜಿಲ್ ರೂಪಾಂತರಿ ವೈರಸ್ ನ ವಿರುದ್ಧ ಕೊವಾಕ್ಸಿನ್ ಲಸಿಕೆ ತಟಸ್ಥಗೊಳಿಸುವ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ಐಸಿಎಂಆರ್-ಎನ್ಐವಿ ಇತ್ತೀಚೆಗೆ ಭಾರತದ ಕೆಲವು ಪ್ರದೇಶಗಳಲ್ಲಿ ಮತ್ತು ಇತರ ಹಲವಾರು ದೇಶಗಳಲ್ಲಿ ಗುರುತಿಸಲಾದ 'ಡಬಲ್ ರೂಪಾಂತರಿ ಕೊರೋನಾ ವೈರಸ್' ಬಿ.1.617 ಎಸ್ಎಆರ್ಎಸ್-ಕೋವಿ -2 ವೈರಸ್ ಅನ್ನು ಪ್ರತ್ಯೇಕಿಸುವಲ್ಲಿ ಯಶಸ್ವಿಯಾಗಿದೆ ಎಂದು ದೇಶದ ಉನ್ನತ ಆರೋಗ್ಯ ಸಂಶೋಧನಾ ಸಂಸ್ಥೆ ತಿಳಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT