ಸಾಂದರ್ಭಿಕ ಚಿತ್ರ 
ದೇಶ

ಖಾಸಗಿ ಮಾರುಕಟ್ಟೆಗೆ ಕೋವಿಡ್-19 ಲಸಿಕೆ: ಪ್ರತೀ ಡೋಸ್ ಗೆ 1000 ರೂ ದರ ನಿಗದಿ ಸಾಧ್ಯತೆ!

ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ದಿಢೀರ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಲಸಿಕೆ ವಿತರಣೆಯ ವೇಗವನ್ನು ಹೆಚ್ಚಿಸುವ ಸಂಬಂಧ ಕ್ರಮಗಳ ಕುರಿತು ಆಲೋಚಿಸುತ್ತಿರುವ ಕೇಂದ್ರ ಸರ್ಕಾರ ಖಾಸಗಿ ಮಾರುಕಟ್ಟೆಗೆ ಕೋವಿಡ್ ಲಸಿಕೆ ಬಿಡುಗಡೆ ಮಾಡಲು ಗಂಭೀರ ಚಿಂತನೆಯಲ್ಲಿ  ತೊಡಗಿದೆ.

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ವೈರಸ್ ಸೋಂಕು ದಿಢೀರ್ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಲಸಿಕೆ ವಿತರಣೆಯ ವೇಗವನ್ನು ಹೆಚ್ಚಿಸುವ ಸಂಬಂಧ ಕ್ರಮಗಳ ಕುರಿತು ಆಲೋಚಿಸುತ್ತಿರುವ ಕೇಂದ್ರ ಸರ್ಕಾರ ಖಾಸಗಿ ಮಾರುಕಟ್ಟೆಗೆ ಕೋವಿಡ್ ಲಸಿಕೆ ಬಿಡುಗಡೆ ಮಾಡಲು ಗಂಭೀರ ಚಿಂತನೆಯಲ್ಲಿ  ತೊಡಗಿದೆ.

ಹೌದು.. ದೇಶಾದ್ಯಂತ ಕೋವಿಡ್ ಸೋಂಕಿತರ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಖಾಸಗಿ ವಲಯದಲ್ಲೂ ಕೋವಿಡ್ ಲಸಿಕೆ ದೊರೆಯುವಂತೆ ಮಾಡುವ ಮೂಲಕ ಕೇಂದ್ರ ಸರ್ಕಾರ ಲಸಿಕೆ ವಿತರಣಾ ವೇಗವನ್ನು ಹೆಚ್ಚಳ ಮಾಡಲು ಯೋಜಿಸಿದೆ. ಅದರಂತೆ ಖಾಸಗಿ ಮಾರುಕಟ್ಟೆಯ ಕೋವಿಡ್ ಲಸಿಕೆಗಳಿಗೆ ದರ ನಿಗದಿ  ಮಾಡಲು ಮುಂದಾಗಿದ್ದು, ಪ್ರತೀ ಡೋಸ್ ಗೆ 900 ರೂಯಿಂದ 1 ಸಾವಿರ ರೂ ದರ ನಿಗದಿ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಇದು ಗರಿಷ್ಠ ಚಿಲ್ಲರೆ ದರವಾಗಿರಲಿದೆ ಎಂದು ಹೇಳಲಾಗಿದೆ.

ಅಂತೆಯೇ ಲಸಿಕೆ ತಯಾರಕರು ಪ್ರತೀ ಡೋಸ್ ಗೆ ಸುಮಾರು 650 ರೂ ದರ ನಿಗದಿ ಮಾಡುವ ಸಾಧ್ಯತೆ ಇದೆ ಎಂದೂ ಹೇಳಲಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ಮೇ 1ರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ಲಸಿಕೆ ಹಾಕಿಸಿಕೊಳ್ಳಬಹುದು ಎಂದು ಆದೇಶ ಹೊರಡಿಸಿದ್ದು, ಅದರಂತೆ ಲಸಿಕೆಗೆ ಬೇಡಿಕೆ  ಹೆಚ್ಚಾಗುವ ಸಾಧ್ಯತೆ ಇದೆ. ಪ್ರಸ್ತುತ ದೇಶದಲ್ಲಿ ಸೋಂಕು ಪ್ರಕರಣಗಳು ಹೆಚ್ಚುತ್ತಿರುವುದರಿಂದಲೂ ಕೋವಿಡ್ ಲಸಿಕೆಗಳನ್ನು ಹಾಕಿಸಿಕೊಳ್ಳುವವರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದೆ. ಇದೇ ಕಾರಣಕ್ಕೆ ಲಸಿಕೆ ತಯಾರಕರು ಲಸಿಕೆ ಉತ್ಪಾದನೆಯನ್ನು ಹೆಚ್ಚಳ ಮಾಡಲು ನಿರ್ಧರಿಸಿದ್ದಾರೆ. 

ಅದರಂತೆ ಜೂನ್ ತಿಂಗಳ ಹೊತ್ತಿಗೆ ದೇಶದಲ್ಲಿನ ಲಸಿಕೆ ಲಭ್ಯತೆ ಹೆಚ್ಚಳವಾಗುವ ಸಾಧ್ಯತೆ ಇದೆ. ಜೂನ್ ವೇಳೆಗೆ ಭಾರತದಲ್ಲಿ ಕೋವಿಡ್ ಲಸಿಕೆ ಪೂರೈಕೆ 200 ಮಿಲಿಯನ್ ಡೋಸ್ ವರೆಗೆ ಹೆಚ್ಚಾಗುವ ನಿರೀಕ್ಷೆಯಿದ್ದು, ಇದು ಪ್ರಸ್ತುತ 70 ಮಿಲಿಯನ್‌ ಡೋಸ್ ಲಸಿಕೆ ಉತ್ಪಾದನೆ ಮಾಡಲಾಗುತ್ತಿದೆ. ಎಸ್‌ಐಐ  ಮತ್ತು ಭಾರತ್ ಬಯೋಟೆಕ್ ಉತ್ಪಾದನೆ ಹೆಚ್ಚಳ ಮಾಡಲಿವೆ. ಅಂತೆಯೇ ರಷ್ಟಾದ ಸ್ಪುಟ್ನಿಕ್ ವಿ ಲಸಿಕೆಯನ್ನು ಹೆಚ್ಚಿನ ಪ್ರಮಾಣದಲ್ಲಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ. ಆಮದನ್ನು ಗಣನೆಗೆ ತೆಗೆದುಕೊಳ್ಳುತ್ತದೆ.

ಇನ್ನು ನಿನ್ನೆ ಸಂಜೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಅವರು ನಡೆಸಿದ ಸಭೆಯಲ್ಲೂ ಲಸಿಕೆ ವಿತರಣಾ ವೇಗವನ್ನು ಹೆಚ್ಚಿಸುವ ಸಂಬಂಧ ಗಂಭೀರ ಚರ್ಚೆ ನಡೆಸಲಾಗಿದೆ. ಅಲ್ಲದೆ ಲಸಿಕೆ ಉತ್ಪಾದಕರಿಗೂ ಲಸಿಕೆ ತಯಾರಿಕಾ ಪ್ರಮಾಣ ಹೆಚ್ಚಿಸುವಂತೆ ಸೂಚನೆ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT