ಅಪಘಾತವಾದ ದೃಶ್ಯ 
ದೇಶ

ಕ್ರಾಸಿಂಗ್ ನಲ್ಲಿ ವಾಹನಗಳ ಮೇಲೆ ಹರಿದ ರೈಲು: ಉತ್ತರ ಪ್ರದೇಶದ ಶಹಜಹಾನಪುರದಲ್ಲಿ 5 ಮಂದಿ ಸಾವು, ಓರ್ವನಿಗೆ ಗಾಯ 

ಮ್ಯಾನಲ್ ಲೆವೆಲ್ ಕ್ರಾಸಿಂಗ್ ನಲ್ಲಿ ರೈಲು ವಾಹನಗಳ ಮೇಲೆ ಹರಿದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನಪುರದಲ್ಲಿ ನಡೆದಿದೆ.

ಶಹಜಹಾನಪುರ (ಉತ್ತರ ಪ್ರದೇಶ): ಮ್ಯಾನಲ್ ಲೆವೆಲ್ ಕ್ರಾಸಿಂಗ್ ನಲ್ಲಿ ರೈಲು ವಾಹನಗಳ ಮೇಲೆ ಹರಿದ ಪರಿಣಾಮ ಐವರು ಸ್ಥಳದಲ್ಲಿಯೇ ಮೃತಪಟ್ಟು ಓರ್ವ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಶಹಜಹಾನಪುರದಲ್ಲಿ ನಡೆದಿದೆ.

ದುರ್ಘಟನೆ ನಡೆಯುವ ಸಂದರ್ಭದಲ್ಲಿ ರೈಲ್ವೆ ಹಳಿ ಸಮೀಪ ಮ್ಯಾನಲ್ ಲೆವೆಲ್ ಕ್ರಾಸಿಂಗ್ ನಲ್ಲಿ ಗೇಟು ಮುಚ್ಚದ ಕಾರಣ ಈ ಅವಘಡ ಸಂಭವಿಸಿದೆ.

ಲಕ್ನೊ-ಚಂಡೀಘಡ ಸೂಪರ್ ಫಾಸ್ಟ್ ಲೊಕೊಮೊಟಿವ್ ರೈಲು ವಾಹನಗಳಿಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ, ಇದೀಗ ಎರಡೂ ಕಡೆ ರೈಲು ಸಂಚಾರಕ್ಕೆ ವ್ಯತ್ಯಯವುಂಟಾಗಿದೆ.

ಮೀರನ್ ಪುರ್ ಕತ್ರ ರೈಲ್ವೆ ನಿಲ್ದಾಣವನ್ನು ಇಂದು ಬೆಳಗ್ಗೆ ರೈಲು ದಾಟಿದ ಮೇಲೆ ಈ ದುರ್ಘಟನೆ ನಡೆದಿದ್ದು ರೈಲು ಎರಡು ಟ್ರಕ್, ಕಾರು ಮತ್ತು ಬೈಕ್ ಮೇಲೆ ಹರಿದಿದೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

ಮೃತಪಟ್ಟವರಲ್ಲಿ ಮೂವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು ಗಂಭೀರವಾಗಿ ಗಾಯಗೊಂಡ ಮತ್ತೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

ಸ್ಥಳದಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯ ಮುಂದುವರಿದಿದೆ ಎಂದು ರೈಲ್ವೆ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. ರೈಲ್ವೆ ಎಂಜಿನಿಯರ್ ಗಳ ತಂಡವೊಂದು ಸ್ಥಳಕ್ಕೆ ಧಾವಿಸಿದ್ದು ದುರಸ್ತಿ ಕಾರ್ಯ ನಡೆಯುತ್ತಿದೆ. ಹಾನಿಗೀಡಾಗಿರುವ ಹಳಿಯ ಕೆಲಸ ನಡೆಯುತ್ತಿದೆ. ಮುಂದಿನ ಮೂರ್ನಾಲ್ಕು ಗಂಟೆಗಳಲ್ಲಿ ಸಂಚಾರ ಸಹಜ ಸ್ಥಿತಿಗೆ ಬರಲಿದೆ ಎಂದು ಜಿಲ್ಲಾಧಿಕಾರಿ ಇಂದ್ರ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಪರಿಹಾರ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತಪಟ್ಟವರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದು ಪ್ರತಿಯೊಬ್ಬರಿಗೂ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ ಎಂದು ಲಕ್ನೊದಲ್ಲಿರುವ ಅಧಿಕೃತ ವಕ್ತಾರರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನನ್ನನ್ನು ಜೈಲಿಗೆ ಕಳುಹಿಸೋ ಪ್ರಯತ್ನ ಮಾಡ್ತಾ ಇದ್ದೀಯಾ ಕುಮಾರಣ್ಣ, ಒಳ್ಳೆದಾಗ್ಲಿ, ನಾನು ಎಲ್ಲದಕ್ಕೂ ರೆಡಿ ಇದ್ದೇನೆ': HDK ವಿರುದ್ಧ CM ಡಿ.ಕೆ ಶಿವಕುಮಾರ್ ವಾಗ್ದಾಳಿ; Video

'ಅಪಾರ್ಟ್ ಮೆಂಟ್ ಹಸ್ತಾಂತರ ವೇಳೆ ಅದರ ಸಂಪೂರ್ಣ ಹಕ್ಕು ಮಾಲೀಕರಿಗೆ ಸಿಗಬೇಕು; ಮಾಲೀಕತ್ವ ರಕ್ಷಣೆಗೆ ಮಸೂದೆ ಜಾರಿ': CM ಡಿ.ಕೆ ಶಿವಕುಮಾರ್; Video

SIR ಡ್ಯೂಟಿ ನಿರ್ವಹಿಸುತ್ತಿರುವ BLO ಗಳಿಗೆ ಗುಡ್ ನ್ಯೂಸ್: ಚುನಾವಣಾ ಆಯೋಗದಿಂದ 6 ಸಾವಿರ ರೂ. ಗೌರವಧನ ಘೋಷಣೆ!

'ನ್ಯಾಯ ಎಲ್ಲಿದೆ?': RCB ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿಗಳಿಗೆ ಕ್ಲೀನ್ ಚಿಟ್; ಆರ್ ಅಶೋಕ ಟೀಕೆ

NDAಯತ್ತ ಶರದ್ ಪವಾರ್ ಚಿತ್ತ? "ಆಪರೇಷನ್ ಘಡಿ"ಗೆ ಫಡ್ನವೀಸ್ ಮಾಸ್ಟರ್ ಪ್ಲಾನ್!