ಚುನಾವಣಾ ರ್ಯಾಲಿಗಳು 
ದೇಶ

ಬಂಗಾಳ ಚುನಾವಣೆ: ಕೋವಿಡ್ ಸುರಕ್ಷತಾ ಮಾನದಂಡ ಉಲ್ಲಂಘನೆ ಬಳಿಕ ರೋಡ್ ಶೋ, ದೊಡ್ಡ ರ್ಯಾಲಿಗಳಿಗೆ ಇಸಿ ನಿಷೇಧ!

ರಾಜಕೀಯ ಪಕ್ಷಗಳು ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಕೋವಿಡ್ -19 ಮಾನದಂಡಗಳ ತೀವ್ರ ಉಲ್ಲಂಘನೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಎಲ್ಲಾ ರೋಡ್ ಶೋ, ಮೆರವಣಿಗೆ ಮತ್ತು ಬೈಕ್ ರ್ಯಾಲಿಗಳನ್ನು ಚುನಾವಣಾ ಆಯೋಗ ನಿಷೇಧಿಸಿದೆ.

ಕೋಲ್ಕತಾ: ರಾಜಕೀಯ ಪಕ್ಷಗಳು ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಕೋವಿಡ್ -19 ಮಾನದಂಡಗಳ ತೀವ್ರ ಉಲ್ಲಂಘನೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಎಲ್ಲಾ ರೋಡ್ ಶೋ, ಮೆರವಣಿಗೆ ಮತ್ತು ಬೈಕ್ ರ್ಯಾಲಿಗಳನ್ನು ಚುನಾವಣಾ ಆಯೋಗ ನಿಷೇಧಿಸಿದೆ.

500 ಜನರ ಮಿತಿಯನ್ನು ಮೀರಿದ ಯಾವುದೇ ಸಾರ್ವಜನಿಕ ಸಭೆಗಳನ್ನು ಅನುಮತಿಸಲಾಗುವುದಿಲ್ಲ ಎಂದು ಚುನಾವಣಾ ಸಮಿತಿ ಹೇಳಿದೆ. ಮತದಾನ ಸಮಿತಿಯು ತನ್ನ ನಡೆಯನ್ನು ವಿವರಿಸುತ್ತಾ, "ಆಯೋಗವು ಚುನಾವಣಾ ಸಭೆಗಳು ಮತ್ತು ಅಭಿಯಾನಗಳ ಹಲವಾರು ನಿದರ್ಶನಗಳನ್ನು ಗಮನಿಸಿದೆ. ಇದರಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಸೇರಿದಂತೆ ಹಲವಾರು ಮಾರ್ಗಸೂಚಿಗಳನ್ನು ಕಡೆಗಣಿಸಲಾಗಿದೆ. ಹೀಗಾಗಿ ಇದೀಗ ರೋಡ್ ಶೋ, ಬೃಹತ್ ರ್ಯಾಲಿಗಳಿಗೆ ನಿಷೇದ ಹೇರಿದೆ.

ಬಂಗಾಳ ಚುನಾವಣೆಯಲ್ಲಿ ಕೋವಿಡ್ ಸುರಕ್ಷತಾ ಮಾನದಂಡಗಳನ್ನು ಜಾರಿಗೊಳಿಸುವ ಬಗ್ಗೆ ಕೋಲ್ಕತಾ ಹೈಕೋರ್ಟ್ ಚುನಾವಣಾ ಸಮಿತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕೆಲವೇ ಗಂಟೆಗಳ ನಂತರ ಚುನಾವಣಾ ಆಯೋಗ ಈ ಆದೇಶ ಹೊರಡಿಸಿದೆ.

ಕೋವಿಡ್ ಮಾನದಂಡಗಳ ಅನುಷ್ಠಾನ ಕುರಿತಂತೆ ಸಲ್ಲಿಕೆಯಾಗಿದ್ದ ಮೂರು ಪಿಐಎಲ್ ಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಟಿಬಿಎನ್ ರಾಧಾಕೃಷ್ಣನ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಹೀಗೆ ಹೇಳಿತು. "ಚುನಾವಣಾ ಆಯೋಗವು ಕಾರ್ಯನಿರ್ವಹಿಸುವ ಅಧಿಕಾರ ಹೊಂದಿದೆ ಆದರೆ ಈ ಕೋವಿಡ್ ಕಾಲದಲ್ಲಿ ಮತದಾನದ ಬಗ್ಗೆ ಏನು ಮಾಡುತ್ತಿದೆ? ಇಸಿ ಕೇವಲ ಸುತ್ತೋಲೆಗಳನ್ನು ಹೊರಡಿಸಿದೆ ಹೊರತು ಅದರ ಮೇಲ್ವಿಚಾರಣೆ ನಡೆಸುತ್ತಿಲ್ಲ. ಇದರಿಂದ ಕೋವಿಡ್ ಉಲ್ಪಣವಾಗುತ್ತದೆ ಎಂದು ಎಚ್ಚರಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರೋರಾತ್ರಿ ಶೋಧ; ಇತಿಹಾಸದಲ್ಲಿಯೇ ಮೊದಲ ಬಾರಿಗೆ 30 ಮೊಬೈಲ್ ಫೋನ್‌ಗಳು ವಶ!

ಹುಣಸೆ, ಹಲಸು, ನೇರಳೆ ಹಣ್ಣುಗಳಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಿ: ಕೇಂದ್ರಕ್ಕೆ ಎಚ್‌ಡಿ ದೇವೇಗೌಡ ಒತ್ತಾಯ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ ನಾಗೇಂದ್ರಗೆ ಸೇರಿದ ₹8.07 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು!

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್: ಎಲ್ಲರೂ ಸೇರಿರೋದ್ರಲ್ಲಿ ತಪ್ಪೇನಿದೆ; ಡಿ.ಕೆ. ಶಿವಕುಮಾರ್

SCROLL FOR NEXT