ಆಕ್ಸಿಜನ್ ಸಿಲಿಂಡರ್ ಸಾಗಿಸುತ್ತಿರುವ ಕಾರ್ಮಿಕರು 
ದೇಶ

ನಿರಂತರ ಆಕ್ಸಿಜನ್ ಉತ್ಪಾದನೆ, ಪೂರೈಕೆ ವ್ಯವಸ್ಥೆಗಾಗಿ ವಿಪತ್ತು ನಿರ್ವಹಣಾ ಕಾಯ್ದೆ ಜಾರಿ: ಎಂಎಚ್ಎ

ನಿರಂತರ ಮೆಡಿಕಲ್ ಅಕ್ಸಿಜನ್ ಉತ್ಪಾದನೆ, ಪೂರೈಕೆ ಹಾಗೂ ಅಂತರ್ ರಾಜ್ಯ ಗಡಿಗಳಲ್ಲಿ ಸಾಗಟಕ್ಕೆ ತೊಂದರೆಯಾಗದ ರೀತಿಯಲ್ಲಿ ಖಾತ್ರಿಗೊಳಿಸುವಂತೆ ರಾಜ್ಯಗಳಿಗೆ ಗುರುವಾರ ಆದೇಶಿಸಿರುವ ಕೇಂದ್ರ ಸರ್ಕಾರ, ತನ್ನ ಆದೇಶದಲ್ಲಿ ಯಾವುದೇ ರೀತಿಯ ಉಲ್ಲಂಘನೆಯಾದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಹೇಳಿದೆ.

ನವದೆಹಲಿ: ನಿರಂತರ ಮೆಡಿಕಲ್ ಅಕ್ಸಿಜನ್ ಉತ್ಪಾದನೆ, ಪೂರೈಕೆ ಹಾಗೂ ಅಂತರ್ ರಾಜ್ಯ  ಗಡಿಗಳಲ್ಲಿ ಸಾಗಟಕ್ಕೆ  ತೊಂದರೆಯಾಗದ ರೀತಿಯಲ್ಲಿ ಖಾತ್ರಿಗೊಳಿಸುವಂತೆ ರಾಜ್ಯಗಳಿಗೆ ಗುರುವಾರ ಆದೇಶಿಸಿರುವ ಕೇಂದ್ರ ಸರ್ಕಾರ, ತನ್ನ ಆದೇಶದಲ್ಲಿ ಯಾವುದೇ ರೀತಿಯ ಉಲ್ಲಂಘನೆಯಾದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಹೇಳಿದೆ.

ಕೊರೋನಾವೈರಸ್ ಪ್ರಕರಣಗಳ ದಿಢೀರ್ ಏರಿಕೆ ನಡುವೆ ಕೆಲವೊಂದು ರಾಜ್ಯಗಳು ಇತರ ರಾಜ್ಯಗಳಿಗೆ ಮೆಡಿಕಲ್ ಆಕ್ಸಿಜನ್ ನ್ನು ಪೂರೈಕೆಯನ್ನು ನಿರ್ಬಂಧಿಸಿವೆ  ಎಂಬ ವರದಿಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಕಠಿಣ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಅಡಿಯಲ್ಲಿ ಈ ನಿರ್ದೇಶನ ಹೊರಡಿಸಿದ್ದಾರೆ.

ಸೂಕ್ತ ರೀತಿಯಲ್ಲಿ ಮೆಡಿಕಲ್ ಆಕ್ಸಿಜನ್ ಲಭ್ಯತೆ ಹಾಗೂ ತಡೆ ಇಲ್ಲದಂತೆ ಪೂರೈಸುವುದು ಕೋವಿಡ್-19 ನಿರ್ವಹಣೆಯಲ್ಲಿ ಪ್ರಮುಖವಾಗಿದೆ. ಕೋವಿಡ್-19 ಪ್ರಕರಣಗಳ ಹೆಚ್ಚಳದೊಂದಿಗೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಅಗತ್ಯಕ್ಕೆ ತಕ್ಕಂತೆ  ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಬೇಕಾಗಿದೆ ಎಂದು ಭಲ್ಲಾ ಹೇಳಿದ್ದಾರೆ.

ಕೋವಿಡ್-19 ರೋಗಿಗಳ ನಿರ್ವಹಣೆಗಾಗಿ ದೇಶಾದ್ಯಂತ ಅಡ್ಡಿಯಾಗದಂತೆ  ಮೆಡಿಕಲ್ ಆಕ್ಸಿಜನ್ ಪೂರೈಕೆಯನ್ನು 
ಪೂರೈಸಬೇಕಾಗಿದೆ. ಇದಕ್ಕಾಗಿ ವಿಪತ್ತು ನಿರ್ವಹಣಾ ಕಾಯ್ದೆ ಜಾರಿ ಮಾಡಲಾಗಿದ್ದು, ತಮ್ಮ ಪ್ರದೇಶ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳುವಂತೆ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಮುಖ್ಯಮಂತ್ರಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶಿಸಿರುವುದಾಗಿ ಗೃಹ ಕಾರ್ಯದರ್ಶಿ ತಿಳಿಸಿದ್ದಾರೆ. 

ರಾಜ್ಯಗಳ ನಡುವೆ ಮೆಡಿಕಲ್ ಆಕ್ಸಿಜನ್ ಪೂರೈಕೆಯನ್ನು ನಿರ್ಬಂಧಿಸದಂತೆ ಆದೇಶದಲ್ಲಿ ಹೇಳಲಾಗಿದೆ. ಅಂತರ - ರಾಜ್ಯಗಳ ನಡುವೆ ಆಕ್ಸಿಜನ್ ಸಾಗಿಸುವ ವಾಹನಗಳಿಗೆ ಉಚಿತವಾಗಿ ಅವಕಾಶ ಕಲ್ಪಿಸುವಂತೆ ಸಾರಿಗೆ ಇಲಾಖೆಗೆ ಸೂಚಿಸಲಾಗಿದೆ. ಯಾವುದೇ ಸಮಯದ ನಿರ್ಬಂಧವಿಲ್ಲದೆ, ನಗರಗಳಿಗೆ ಆಕ್ಸಿಜನ್ ಪೂರೈಸುವ ವಾಹನಗಳು ಮುಕ್ತವಾಗಿ ಸಂಚರಿಸಲು ಅವಕಾಶ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ಆದೇಶ ಉಲ್ಲಂಘನೆಯಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಡಿಸಿಪಿಗಳನ್ನು ವೈಯಕ್ತಿಕವಾಗಿ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video