ಕೋವಿಡ್ ಸೋಂಕಿಗೆ ಬಲಿಯಾದ ಆಶಿಶ್ ಯೆಚೂರಿ ಮತ್ತು ಕಾಂಗ್ರೆಸ್ ನಾಯಕ ಡಾ ಎ ಕೆ ವಾಲಿಯಾ 
ದೇಶ

ಕೋವಿಡ್ ಸೋಂಕಿಗೆ ಮತ್ತಷ್ಟು ಬಲಿ: ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಪುತ್ರ ಮತ್ತು ದೆಹಲಿ ಮಾಜಿ ಸಚಿವ ನಿಧನ 

ದೇಶದಲ್ಲಿ ಕೊರೋನಾ ವೈರಸ್ ಸೋಂಕು ತಾಂಡವವಾಡುತ್ತಿದೆ, ಅದರಲ್ಲೂ ದೆಹಲಿ, ಮುಂಬೈ, ಬೆಂಗಳೂರಿನಂತಹ ಮಹಾನಗರಗಳಲ್ಲಿ ಸೋಂಕಿನ ತೀವ್ರತೆ ದಟ್ಟವಾಗಿದೆ. ಕೊರೋನಾ ಎರಡನೇ ಅಲೆ ದೇಶದಲ್ಲಿ ಎದ್ದ ಮೇಲೆ ಹಲವರು ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.ಅವರಲ್ಲಿ ಗಣ್ಯರು ಕೂಡ ಸೇರಿದ್ದಾರೆ.

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಸೋಂಕು ತಾಂಡವವಾಡುತ್ತಿದೆ, ಅದರಲ್ಲೂ ದೆಹಲಿ, ಮುಂಬೈ, ಬೆಂಗಳೂರಿನಂತಹ ಮಹಾನಗರಗಳಲ್ಲಿ ಸೋಂಕಿನ ತೀವ್ರತೆ ದಟ್ಟವಾಗಿದೆ. ಕೊರೋನಾ ಎರಡನೇ ಅಲೆ ದೇಶದಲ್ಲಿ ಎದ್ದ ಮೇಲೆ ಹಲವರು ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಲ್ಲಿ ಗಣ್ಯರು ಕೂಡ ಸೇರಿದ್ದಾರೆ.

ಸಿಪಿಎಂ ನಾಯಕ ಸೀತಾರಾಮ್ ಯೆಚೂರಿಯವರ ಪುತ್ರ ಆಶಿಶ್ ಯೆಚೂರಿ ಕೋವಿಡ್-19 ಸೋಂಕಿಗೆ ನಿಧನರಾಗಿದ್ದಾರೆ. ಇಂದು ಬೆಳಗ್ಗೆ ನನ್ನ ಹಿರಿಯ ಪುತ್ರ ಆಶಿಶ್ ಯೆಚೂರಿ ಕೋವಿಡ್ ಗೆ ನಿಧನರಾಗಿದ್ದಾರೆ ಎಂದು ತಿಳಿಸಲು ದುಃಖವಾಗುತ್ತಿದೆ. ಈ ಕಷ್ಟದ ಸಂದರ್ಭದಲ್ಲಿ ನನ್ನ ಮಗನಿಗೆ ಚಿಕಿತ್ಸೆ ನೀಡಿದ ವೈದ್ಯರು, ದಾದಿಯರು, ಕೊರೋನಾ ಮುಂಚೂಣಿ ಸೇವಕರು, ಶುಚಿತ್ವ ಕೆಲಸಗಾರರು ಮತ್ತು ನಮಗೆ ಧೈರ್ಯ, ಸಾಂತ್ವನ ಹೇಳಿದ ಎಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದು ಸೀತಾರಾಮ್ ಯೆಚೂರಿ ತಿಳಿಸಿದ್ದಾರೆ.

ಕಾಂಗ್ರೆಸ್ ನ ಹಿರಿಯ ನಾಯಕ, ದೆಹಲಿ ಸರ್ಕಾರದ ಮಾಜಿ ಸಚಿವ ಡಾ. ಎ.ಕೆ. ವಾಲಿಯಾ ಕೋವಿಡ್ ಸೋಂಕಿಗೆ ನಿಧನರಾಗಿದ್ದಾರೆ. 

ಕೋವಿಡ್ ಸೋಂಕಿಗೆ ಒಳಗಾಗಿ ಡಾ. ವಾಲಿಯಾ ದೆಹಲಿಯ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ 72 ವರ್ಷ ವಯಸ್ಸಾಗಿತ್ತು.

ಡಾ ಅಶೋಕ್ ಕುಮಾರ್ ವಾಲಿಯಾ ದೆಹಲಿಯ ಲಕ್ಷ್ಮಿ ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ. ಅದಕ್ಕೂ ಮುನ್ನ ಮೊದಲ ಮೂರು ಬಾರಿ ಗೀತಾ ಕಾಲೊನಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿದ್ದರು. ದೆಹಲಿ ಮೂಲದವರಾದ ಡಾ ವಾಲಿಯಾ ಇಂದೋರ್ ನ ಎಂಜಿಎಂ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿಯನ್ನು ಪಡೆದಿದ್ದರು. ವೃತ್ತಿಯಲ್ಲಿ ಮೂಲತಃ ಅವರು ವೈದ್ಯ. ಹಿಂದಿನ ಶೀಲಾ ದೀಕ್ಷಿತ್ ಸರ್ಕಾರದಲ್ಲಿ ಆರೋಗ್ಯ, ನಗರಾಭಿವೃದ್ಧಿ ಇತ್ಯಾದಿ ಖಾತೆಗಳನ್ನು ವಹಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT