ಪ್ರಿಯಾಂಕಾ ಗಾಂಧಿ 
ದೇಶ

ಕೊರೋನಾ ಎರಡನೇ ಅಲೆ ನಿಯಂತ್ರಣದಲ್ಲಿ ಯೋಗಿ ಸರ್ಕಾರ ಸಂಪೂರ್ಣ ವಿಫಲ: ಪ್ರಿಯಾಂಕಾ ವಾದ್ರಾ

ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಯೋಗಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ನವದೆಹಲಿ: ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಯೋಗಿ ಆದಿತ್ಯನಾಥ್ ಸರ್ಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದ್ದಾರೆ.

ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅವರು, ಕೊರೋನಾ ನಿರ್ವಹಣೆ ಉತ್ತರ ಪ್ರದೇಶ ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಿಡಿದ ಮತ್ತೊಂದು ಕನ್ನಡಿಯಾಗಿದೆ.

ದುರಂಹಕಾರ ಮತ್ತು ನಿರಂಕುಶಾಧಿಕಾರ ಹಾಗೂ ಅಮಾನವೀಯತೆಯಿಂದ ಜನರ ಜೊತೆ ಸರ್ಕಾರ ವರ್ತಿಸುತ್ತಿದೆ ಎಂದು ದೂರಿದ್ದಾರೆ. ಕೊರೊನಾ ವೈರಸ್ ಪ್ರಕರಣಗಳ ತೀವ್ರ ಏರಿಕೆಯಿಂದಾಗಿ ಪ್ರಿಯಾಂಕಾ ಪ್ರತಿಕ್ರಿಯೆ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ಬುಧವಾರ 33,214 ಹೊಸ ಪ್ರಕರಣಗಳು ಮತ್ತು 187 ಸಾವುಗಳು ದಾಖಲಾಗಿವೆ ಎಂದು ಸರ್ಕಾರ ಹೇಳಿದೆ.

ಯೋಗಿ ಸರ್ಕಾರ ಜನರ ಪರವಾಗಿ ಕೆಲಸ ಮಾಡುವುದನ್ನು ನಿಲ್ಲಿಸಿದೆ, ಜನರಿಗೆ ಅಗತ್ಯವಾದ ನೆರವು ಸೌಲಭ್ಯ ನೀಡುವುದು ಸರ್ಕಾರದ ಮೂಲಭೂತ ಹಕ್ಕಾಗಿದೆ. ಯಾವುದೇ ಸಿದ್ಧತೆ, ಪೂರ್ವಾಲೋಚನೆಯಿಲ್ಲದೇ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತಿರುವುದೇ ಇದಕ್ಕೆಲ್ಲಾ ಕಾರಣ ಎಂದು ದೂರಿದ್ದಾರೆ,

ಪ್ರಪಂಚದಾದ್ಯಂತದ ದೇಶಗಳು ಎರಡನೇ ಅಲೆ ಎದುರಿಸುತ್ತಿವೆ, ನಾವು ಅವರಿಂದ ಏನು ಕಲಿತಿದ್ದೇವೆ? ತಯಾರಿಸಲು ನಾವು ಮೊದಲ ಮತ್ತು ಎರಡನೆಯ ಅಲೆಯ ನಡುವಿನ ಸಮಯವನ್ನು ನಾವು  ಹೇಗೆ ಬಳಸಿದ್ದೇವೆ? ಎಂದು ಪ್ರಿಯಾಂಕಾ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

9 ವರ್ಷಗಳ ಬಳಿಕ ಇಸ್ರೇಲ್ ಗೆ ಪ್ರಧಾನಿ ಮೋದಿ ಭೇಟಿ; ಅದ್ದೂರಿ ರೆಡ್ ಕಾರ್ಪೆಟ್ ಸ್ವಾಗತ

India to Israel: ಪ್ರಧಾನಿ ಮೋದಿ ಪಯಣಿಸಿದ್ದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ: ಮಕ್ಕಳ ಆಯೋಗದಿಂದ ಸ್ವಯಂ ಪ್ರೇರಿತ ದೂರು ದಾಖಲು

SCROLL FOR NEXT