ಪ್ರಧಾನಿ ನರೇಂದ್ರ ಮೋದಿ 
ದೇಶ

ಹವಾಮಾನ ವೈಫರೀತ್ಯ ಸಮಸ್ಯೆ ಎದುರಿಸಲು ಸೂಕ್ತ ಕ್ರಮ ಅಗತ್ಯ- ಪ್ರಧಾನಿ ಮೋದಿ

ಹವಾಮಾನ ವೈಫರೀತ್ಯ ಸಮಸ್ಯೆ ಎದುರಿಸಲು ಹೆಚ್ಚಿನ ವೇಗ ಹಾಗೂ ದೊಡ್ಡ ಪ್ರಮಾಣದ ಸೂಕ್ತ ಕ್ರಮ ಅಗತ್ಯ ಎಂದು ಗುರುವಾರ ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಸಮಸ್ಯೆಯನ್ನು ಬಗೆಹರಿಸಲು ಭಾರತ ತನ್ನ ಪಾತ್ರವನ್ನು ನಿರ್ವಹಿಸುತ್ತಿದೆ ಎಂದಿದ್ದಾರೆ.

ನವದೆಹಲಿ: ಹವಾಮಾನ ವೈಫರೀತ್ಯ ಸಮಸ್ಯೆ ಎದುರಿಸಲು ಹೆಚ್ಚಿನ ವೇಗ ಹಾಗೂ ದೊಡ್ಡ ಪ್ರಮಾಣದ ಸೂಕ್ತ ಕ್ರಮ ಅಗತ್ಯ ಎಂದು ಗುರುವಾರ ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಈ ಸಮಸ್ಯೆಯನ್ನು ಬಗೆಹರಿಸಲು ಭಾರತ ತನ್ನ ಪಾತ್ರವನ್ನು ನಿರ್ವಹಿಸುತ್ತಿದೆ ಎಂದಿದ್ದಾರೆ.

ಅಮೆರಿಕ ಆಯೋಜಿಸಿದ್ದ 40 ಜಾಗತಿಕ ನಾಯಕರ ವರ್ಚುಯಲ್ ಶೃಂಗಸಭೆಯಲ್ಲಿ ಮಾತನಾಡಿದ ಅವರು,  ಸುಸ್ಥಿರ ಜೀವನ ಶೈಲಿ ಮತ್ತು ಮೂಲಗಳಿಗೆ ಹಿಂತಿರುಗಿ ಮಾರ್ಗದರ್ಶಿ ತತ್ವ ಕೋವಿಡ್ ನಂತರ ಯುಗದ ಆರ್ಥಿಕ ಕಾರ್ಯತಂತ್ರಕ್ಕೆ ಪ್ರಮುಖ ಆಧಾರಸ್ತಂಭವಾಗಬೇಕು ಎಂದರು.

ಜೋ- ಬೈಡೆನ್ ಜೊತೆಗೂಡಿ ಭಾರತ-ಯುಎಸ್ ಹವಾಮಾನ ಮತ್ತು ಶುದ್ಧ ಇಂಧನ ಅಜೆಂಡಾ 2030 ಸಹಭಾಗಿತ್ವವನ್ನು'  ಪ್ರಾರಂಭಿಸುತ್ತಿರುವುದಾಗಿ ಹೇಳಿದ ಪ್ರಧಾನಿ,  ನಾವಿಬ್ಬರು ಒಟ್ಟಾಗಿ ಹೂಡಿಕೆ, ಶುದ್ಧ ತಂತ್ರಜ್ಞಾನ ಹಾಗೂ ಹಸಿರು ಸಹಭಾಗಿತ್ವಕ್ಕೆ ಸಹಕಾರ ನೀಡುವುದಾಗಿ ತಿಳಿಸಿದರು. 

ಸಜ್ಜುಗೊಳಿಸಲು, ಶುದ್ಧ ತಂತ್ರಜ್ಞಾನಗಳನ್ನು ಪ್ರದರ್ಶಿಸಲು ಮತ್ತು ಹಸಿರು ಸಹಯೋಗವನ್ನು ಸಕ್ರಿಯಗೊಳಿಸಲು ಸಹಾಯ ಮಾಡುತ್ತೇವೆ" ಎಂದು ಅವರು ಶೃಂಗಸಭೆಯಲ್ಲಿ ಹೇಳಿದರು.

ಅಭಿವೃದ್ಧಿ ಸವಾಲುಗಳ ಹೊರತಾಗಿಯೂ ಶುದ್ಧ ಇಂಧನ, ಇಂಧನ ದಕ್ಷತೆ, ಕ್ಷೇತ್ರದಲ್ಲಿ ಭಾರತ ಅನೇಕ ಕ್ರಮಗಳನ್ನು ಕೈಗೊಂಡಿದೆ. ಮಾನವೀಯತೆಯಿಂದ ಹವಾಮಾನ ವೈಫರೀತ್ಯ ಎದುರಿಸಲು ಸೂಕ್ತ ಅಕ್ರಮ ಅಗತ್ಯವಾಗಿದೆ. ಇಂತಹ ಹೆಚ್ಚಿನ ವೇಗದ,  ದೊಡ್ಡ ಪ್ರಮಾಣದ ಕ್ರಮ ಅಗತ್ಯವಾಗಿದೆ. ನಮ್ಮ ಪಾತ್ರವನ್ನು ನಾವು ಮಾಡುತ್ತಿದ್ದೇವೆ ಎಂದು ಪ್ರಧಾನಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT