ಆಕ್ಸಿಜನ್ ನಿರ್ವಹಣೆಗಾಗಿ ಸಮಿತಿ 
ದೇಶ

ಕೋವಿಡ್-19: ಆಕ್ಸಿಜನ್ ನಿಯೋಜನೆಗಾಗಿ ಸಮಿತಿ ರಚಿಸಿದ ಕೇಂದ್ರ ಸರ್ಕಾರ

ಮಾರಕ ಕೊರೋನಾ ವೈರಸ್ ಸೋಂಕು ಪ್ರಮಾಣ ಹೆಚ್ಚಳವಾಗಿರುವಂತೆಯೇ ಕೇಂದ್ರ ಸರ್ಕಾರ ಆಕ್ಸಿಜನ್ ಸರಬರಾಜು ಮತ್ತು ನಿಯೋಜನೆಗಾಗಿ ಸಮಿತಿ ರಚನೆ ಮಾಡಿದೆ.

ನವದೆಹಲಿ: ಮಾರಕ ಕೊರೋನಾ ವೈರಸ್ ಸೋಂಕು ಪ್ರಮಾಣ ಹೆಚ್ಚಳವಾಗಿರುವಂತೆಯೇ ಕೇಂದ್ರ ಸರ್ಕಾರ ಆಕ್ಸಿಜನ್ ಸರಬರಾಜು ಮತ್ತು ನಿಯೋಜನೆಗಾಗಿ ಸಮಿತಿ ರಚನೆ ಮಾಡಿದೆ.

ಹೌದು.. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಇಂದು ನಡೆದ 11 ರಾಜ್ಯಗಳ ಸಿಎಂಗಳು ಕೋವಿಡ್-19 ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಕೇಂದ್ರಸರ್ಕಾರದಿಂದ ಆಮ್ಲಜನಕ ಹಂಚಿಕೆಯಾದ ಕೂಡಲೇ, ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಅಗತ್ಯವಿರುವಂತೆ  ಆಮ್ಲಜನಕವನ್ನು ತಲುಪಿಸಲು ಈ ಸಮನ್ವಯ ಸಮಿತಿಯು ನೆರವಾಗಲಿದೆ ಎನ್ನಲಾಗಿದೆ. 

ಸಭೆಯಲ್ಲಿ ಆಕ್ಸಿಜನ್ ಟ್ಯಾಂಕರ್‌ಗಳ ಪ್ರಯಾಣದ ಸಮಯ ಮತ್ತು ವಹಿವಾಟು ಸಮಯವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಸಾಧ್ಯವಿರುವ ಎಲ್ಲ ಆಯ್ಕೆಗಳ ಬಗ್ಗೆ ಕಾರ್ಯನಿರ್ವಹಿಸುತ್ತಿದೆ ಎಂದು ಮೋದಿ ಹೇಳಿದ್ದಾರೆ. ಇದಕ್ಕಾಗಿ ರೈಲ್ವೆ ಇಲಾಖೆ ಕೂಡ ಆಕ್ಸಿಜನ್ ಎಕ್ಸ್‌ಪ್ರೆಸ್ ಅನ್ನು ಪ್ರಾರಂಭಿಸಿದ್ದು, ಒಂದು  ಮಾರ್ಗದ ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ಖಾಲಿ ಆಕ್ಸಿಜನ್ ಟ್ಯಾಂಕರ್‌ಗಳನ್ನು ಸಹ ವಾಯುಪಡೆಯಿಂದ ಸಾಗಿಸಲಾಗುತ್ತಿದೆ. ಅಲ್ಲದೆ 23 ಮೊಬೈಲ್ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಜರ್ಮನಿಯಿಂದ ವಿಮಾನದಲ್ಲಿ ಭಾರತಕ್ಕೆ ಸಾಗಿಸಲಾಗುತ್ತಿದೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ. 

ಕೋವಿಡ್-19 ರೋಗಿಗಳಿಗೆ ಪೂರೈಸುವ ಎಎಫ್‌ಎಂಎಸ್ ಆಸ್ಪತ್ರೆಗಳಲ್ಲಿ ಇವುಗಳನ್ನು ನಿಯೋಜಿಸಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದ್ದು, ಆಮ್ಲಜನಕ ಉತ್ಪಾದಿಸುವ ಪ್ಲಾಂಟ್ ಗಳು ಒಂದು ವಾರದೊಳಗೆ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ ಎಂದು ಹೇಳಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತೀವ್ರ ಕುತೂಹಲ ಘಟ್ಟಕ್ಕೆ ತಲುಪಿದ ಪಶ್ಚಿಮ ಏಷ್ಯಾ ಸಂಘರ್ಷ: ಇಂದು ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಇರಾನ್-ಅಮೆರಿಕ ನಡುವೆ ಸಂಧಾನ ಮಾತುಕತೆ-Video

5 ದಶಕಗಳ ಬಳಿಕ ದಾಖಲೆ ನಿರ್ಮಿಸಿದ ಚಂದ್ರಯಾನ: ಯಶಸ್ವಿಯಾಗಿ ಭೂಮಿಗೆ ಮರಳಿದ Artemis II ಗಗನ ಯಾತ್ರಿಗಳು-Video

'ಹಸಿರು ಲ್ಯಾಂಬೊರ್ಗಿನಿ ಕಾರಲ್ಲಿ ಹೋಗಿ, ರಸ್ತೆ ಕಸ ಗುಡಿಸಿ ಬನ್ನಿ': ಸಂಚಾರ ನಿಯಮ ಉಲ್ಲಂಘಿಸಿ ದರ್ಪ ತೋರಿದ ಚಾಲಕನಿಗೆ ಹೈಕೋರ್ಟ್‌ ಶಿಕ್ಷೆ!

ಉಪಚುನಾವಣೆ ಗೆಲ್ಲುವ ಉಮೇದು: ಪ್ರಚಾರದಲ್ಲಿ ನಿರತರಾದ ಸಿಎಂ -ಡಿಸಿಎಂ; ನಿಯಂತ್ರಣ ಕಳೆದುಕೊಂಡ ಆಡಳಿತ ಯಂತ್ರ!

'ನನ್ನ ಹಣೆಬರಹ ಎಲ್ಲಿದೆಯೋ, ಜನ ಎಲ್ಲಿ ಗೆಲ್ಲಿಸ್ತಾರೋ ನೋಡೋಣ: ನಮ್ಮ ಸಂಖ್ಯೆ ನೋಡಿ ಅಪಹಾಸ್ಯ ಮಾಡಿದ್ದಾರೆ, 2028 ರಲ್ಲಿ ಸರ್ಕಾರ ರಚಿಸ್ತಿವಿ'

SCROLL FOR NEXT