ಮೇ, ಜೂನ್ ತಿಂಗಳಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯ 
ದೇಶ

ಮೇ, ಜೂನ್ ತಿಂಗಳಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯ

ಕೊರೋನಾ ವೈರಸ್ ನ 2 ನೇ ಅಲೆ ದೇಶವನ್ನು ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಬಡವರಿಗೆ ಪೌಷ್ಟಿಕ ಆಹಾರ ದೊರೆಯುವಂತೆ ಮಾಡಲು ಮೇ, ಜೂನ್ ತಿಂಗಳಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಸರ್ಕಾರ ವಿತರಣೆ ಮಾಡಲಿದೆ. 

ನವದೆಹಲಿ: ಕೊರೋನಾ ವೈರಸ್ ನ 2 ನೇ ಅಲೆ ದೇಶವನ್ನು ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಬಡವರಿಗೆ ಪೌಷ್ಟಿಕ ಆಹಾರ ದೊರೆಯುವಂತೆ ಮಾಡಲು ಮೇ, ಜೂನ್ ತಿಂಗಳಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಸರ್ಕಾರ ವಿತರಣೆ ಮಾಡಲಿದೆ. 

ಪ್ರಧಾನ್ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ಮೇ, ಜೂನ್ ತಿಂಗಳಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಸರ್ಕಾರ ವಿತರಣೆ ಮಾಡಲಿದೆ ಎಂದು ಸರ್ಕಾರದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ ಪ್ರತಿ ವ್ಯಕ್ತಿಗೆ ಪ್ರತಿ ತಿಂಗಳಿಗೆ 5 ಕೆ.ಜಿಯಷ್ಟು ಆಹಾರ ಧಾನ್ಯಗಳು ಸಿಗಲಿದ್ದು, ಒಟ್ಟು 80 ಕೋಟಿ ಫಲಾನುಭವಿಗಳಿಗೆ 2 ತಿಂಗಳ ಕಾಲ ಉಚಿತ ಧಾನ್ಯಗಳು ಲಭ್ಯವಾಗಲಿದೆ. ಕಳೆದ ವರ್ಷ ಕೊರೋನಾ ಲಾಕ್ ಡೌನ್ ವಿಧಿಸಿದ್ದಾಗ ಪ್ರಧಾನಿ ನರೇಂದ್ರ ಮೋದಿ ಬಡವರಿಗೆ ಧಾನ್ಯಗಳನ್ನು ನೀಡುವ ಯೋಜನೆಯನ್ನು ಘೋಷಿಸಿದ್ದರು. 

ಕೊರೋನಾ ಎರಡನೇ ಅವಧಿಯಲ್ಲಿ ಬಡ ಜನತೆಗೆ ಪೌಷ್ಟಿಕ ಆಹಾರಕ್ಕೆ ಪ್ರಧಾನಿ ಮೋದಿ ಹೆಚ್ಚು ಒತ್ತು ನೀಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಯೋಜನೆಗಾಗಿ ಭಾರತ ಸರ್ಕಾರ 26,000 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಿದೆ ಎಂದು ಆಹಾರ ಹಾಗೂ ನಾಗರಿಕ ಪೂರೈಕೆ ಕಾರ್ಯದರ್ಶಿ ಸುಧಾಂಶು ಪಾಂಡೇ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

Air India Express ಪೈಲಟ್ ನಿಂದ ಸ್ಪೈಸ್ ಜೆಟ್ ಪ್ರಯಾಣಿಕನ ಮೇಲೆ ಹಲ್ಲೆ; ರಕ್ತಸ್ರಾವದಿಂದ ನರಳಿದ ಸಂತ್ರಸ್ತ

Epstein Files ಬಿಡುಗಡೆ: ಟ್ರಂಪ್ ಬಗ್ಗೆ ಹೆಚ್ಚಿನದ್ದಿಲ್ಲ; ಕ್ಲಿಂಟನ್ ಫೋಟೋಗಳು ಬಹಿರಂಗ!

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?

SCROLL FOR NEXT