ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ 
ದೇಶ

ವಿರಾರ್ ಆಸ್ಪತ್ರೆಯ ಬೆಂಕಿ ದುರಂತ ರಾಷ್ಟ್ರ ಮಟ್ಟದ ಸುದ್ದಿಯಲ್ಲ, ರಾಜ್ಯ ಸರ್ಕಾರವೇ ಹಣಕಾಸು ನೆರವು ನೀಡುತ್ತದೆ: ಮಹಾರಾಷ್ಟ್ರ ಆರೋಗ್ಯ ಸಚಿವ

ಮಹಾರಾಷ್ಟ್ರ ರಾಜ್ಯದ ಪಲ್ಘಾರ್ ಜಿಲ್ಲೆಯ ವಿರಾರ್ ವಿಜಯ ವಲ್ಲಭ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿ 13 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು ಪ್ರಧಾನಿ ಮೋದಿ ಸೇರಿದಂತೆ ಹಲವರು ಅಗಲಿದ ಜೀವಗಳಿಗೆ ಕಂಬನಿ ಮಿಡಿದಿದ್ದಾರೆ.

ಮುಂಬೈ: ಮಹಾರಾಷ್ಟ್ರ ರಾಜ್ಯದ ಪಲ್ಘಾರ್ ಜಿಲ್ಲೆಯ ವಿರಾರ್ ವಿಜಯ ವಲ್ಲಭ ಕೋವಿಡ್-19 ಆಸ್ಪತ್ರೆಯಲ್ಲಿ ಶುಕ್ರವಾರ ನಸುಕಿನ ಜಾವ ಬೆಂಕಿ ಅವಘಡ ಸಂಭವಿಸಿ 13 ಮಂದಿ ರೋಗಿಗಳು ಸಜೀವ ದಹನವಾಗಿದ್ದಾರೆ. ಇದು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು ಪ್ರಧಾನಿ ಮೋದಿ ಸೇರಿದಂತೆ ಹಲವರು ಅಗಲಿದ ಜೀವಗಳಿಗೆ ಕಂಬನಿ ಮಿಡಿದಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ಟೊಪೆ, ವಿರಾರ್ ಆಸ್ಪತ್ರೆ ಬೆಂಕಿ ದುರಂತ ಪ್ರಕರಣ ರಾಷ್ಟ್ರೀಯ ಸುದ್ದಿಯಲ್ಲ. ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಆಕ್ಸಿಜನ್, ರೆಮೆಡಿಸಿವಿರ್ ಕೊರತೆ ಬಗ್ಗೆ ಮಾತನಾಡುತ್ತೇವೆ, ಮಹಾರಾಷ್ಟ್ರಕ್ಕೆ ಸಾಕಷ್ಟು ಪ್ರಮಾಣದಲ್ಲಿ ಲಸಿಕೆ ಬೇಕೆನ್ನುವ ವಿಚಾರವನ್ನು, ವಿರಾರ್ ಆಸ್ಪತ್ರೆಯ ಬೆಂಕಿ ದುರ್ಘಟನೆ ಬಗ್ಗೆ ಕೂಡ ಮಾತನಾಡುತ್ತೇವೆ, ಹಾಗೆಂದು ಇದು ರಾಷ್ಟ್ರಮಟ್ಟದ ಸುದ್ದಿಯಲ್ಲ ಎಂದಿದ್ದಾರೆ.

ದುರ್ಘಟನೆಯಲ್ಲಿ ಮೃತಪಟ್ಟ ರೋಗಿಗಳ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ ಹಣಕಾಸು ನೆರವು ನೀಡುತ್ತದೆ ಎಂದು ಕೂಡ ಸಚಿವ ರಾಜೇಶ್ ಟೊಪೆ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT