ಸಂಗ್ರಹ ಚಿತ್ರ 
ದೇಶ

ದೆಹಲಿ ಜೈಪುರ್ ಗೋಲ್ಡನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ: 20 ಮಂದಿ ಕೊರೋನಾ ರೋಗಿಗಳು ಸಾವು

ದೆಹಲಿಯಲ್ಲಿ ಕೊರೋನಾ ಸೋಂಕಿತರ ಪರಿಸ್ಥಿತಿ ಚಿಂತಾಜನಕವಾಗಿದೆ. ಆಕ್ಸಿಜನ್ ಕೊರತೆ ಹಿನ್ನೆಲೆ ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ 20 ರೋಗಿಗಳು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ನವದೆಹಲಿ: ದೆಹಲಿಯಲ್ಲಿ ಕೊರೋನಾ ಸೋಂಕಿತರ ಪರಿಸ್ಥಿತಿ ಚಿಂತಾಜನಕವಾಗಿದೆ. ಆಕ್ಸಿಜನ್ ಕೊರತೆ ಹಿನ್ನೆಲೆ ದೆಹಲಿಯ ಜೈಪುರ ಗೋಲ್ಡನ್ ಆಸ್ಪತ್ರೆಯಲ್ಲಿ 20 ರೋಗಿಗಳು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. 

ಸರ್ಕಾರ ಆಸ್ಪತ್ರೆಯ 3.5 ಮೆಟ್ರಿಕ್ ಟನ್ ನಷ್ಟು ಆಕ್ಸಿಜನ್ ನೀಡಿತ್ತು. ನಿನ್ನೆ ಸಂಜೆ 5 ಗಂಟೆ ಸುಮಾರಿಗೆ ಆಕ್ಸಿಜನ್ ಆಸ್ಪತ್ರೆ ತಲುಪಬೇಕಿತ್ತು. ಆದರೆ, ಮಧ್ಯರಾತ್ರಿ ಬಂದಿತ್ತು. ಈ ವೇಳೆ ಗಂಭೀರ ಸ್ಥಿತಿಯಲ್ಲಿದ್ದ 20 ಮಂದಿ ರೋಗಿಗಳು ಆಕ್ಸಿಜನ್ ಇಲ್ಲದೆ ಸಾವನ್ನಪ್ಪಿದ್ದಾರೆ ಎಂದು ಜಯಪುರ ಗೋಲ್ಡ್ ಆಸ್ಪತ್ರೆಯ ಎಂಡಿ ಡಾ.ಡಿ.ಕೆ.ಬಲೂಜಾ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಯಲ್ಲಿ ನಿನ್ನೆ ಬೆಳಿಗ್ಗೆ 10.45ರ ಸಮಯದಲ್ಲಿ ಎಲ್ಲಾ ರೋಗಿಗಳಿಗೆ ಅರ್ಧ ಗಂಟೆಯಷ್ಟು ಸಮಯ ನೀಡುವ ಆ್ಯಕ್ಸಿಜನ್ ಮಾತ್ತರ ನಮ್ಮ ಬಳಿ ಇತ್ತು. ಆಸ್ಪತ್ರೆಯಲ್ಲಿ 200 ಮಂದಿ ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕ್ಸಿಜನ್ ಪೂರೈಕೆ ಮಾಡುವ ಕುರಿತು ಯಾರೊಬ್ಬರೂ ಸೂಕ್ತ ಭರವಸೆಗಳನ್ನು ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಸರ್ಕಾರದಿಂದ ಯಾವುದಾದರೂ ನೆರವು ಸಿಕ್ಕಿತೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲಾ ಅಧಿಕಾರಿಗಳು ನಮ್ಮಿಂದ ಸಾಧ್ಯವಾದಷ್ಟು ಶ್ರಮ ಪಡುತ್ತೇವೆಂದು ಹೇಳುತ್ತಿದ್ದಾರಷ್ಟೇ ಎಂದಿದ್ದಾರೆ. 

ಆಸ್ಪತ್ರೆಯಲ್ಲಿ 200 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇದರಲ್ಲಿ ಶೇ.80 ರಷ್ಟು ಮಂದಿ ಆಕ್ಸಿಜನ್ ಬೆಂಬಲದಿಂದ ಇದ್ದಾರೆ. 35 ಮಂದಿ ಸೋಂಕಿತರು ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಮಾಹಿತಿ ಬಲೂಜಾ ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT