ಪ್ರಧಾನಿ ನರೇಂದ್ರ ಮೋದಿ 
ದೇಶ

ರಾಷ್ಟ್ರೀಯ ಸ್ವಾಮಿತ್ವ ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚಾರಣೆ ಪ್ರಯುಕ್ತ ಇಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಸ್ವಾಮಿತ್ವ ಯೋಜನೆ ಇ-ಪ್ರಾಪರ್ಟಿ ಕಾರ್ಡ್ ವಿತರಿಸುವ ವಿಸ್ತರಣಾ ಯೋಜನೆಗೆ ಚಾಲನೆ ನೀಡಿದರು.

ನವದೆಹಲಿ: ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚಾರಣೆ ಪ್ರಯುಕ್ತ ಇಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಸ್ವಾಮಿತ್ವ ಯೋಜನೆ ಇ-ಪ್ರಾಪರ್ಟಿ ಕಾರ್ಡ್ ವಿತರಿಸುವ ವಿಸ್ತರಣಾ ಯೋಜನೆಗೆ ಚಾಲನೆ ನೀಡಿದರು.

ಗ್ರಾಮೀಣಾ ಜನತೆಗೆ ಕೇಂದ್ರ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ದೊರಕಿದ್ದು, ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಸ್ವಾಮಿತ್ವ ಯೋಜನೆ ಇ-ಪ್ರಾಪರ್ಟಿ ಕಾರ್ಡ್ ವಿತರಿಸುವ ವಿಸ್ತರಣಾ ಯೋಜನೆಗೆ ಚಾಲನೆ ನೀಡಿದ್ದಾರೆ. ಸುಮಾರು 4.09 ಲಕ್ಷ ಮಂದಿಗೆ ಸಂಬಂಧಿಸಿದ ಆಸ್ತಿ ಮಾಲೀಕತ್ವದ ಇ-ಪ್ರಾಪರ್ಟಿ ಕಾರ್ಡ್  ನೀಡುವ ಯೋಜನೆ ಇದಾಗಿದ್ದು, ಈ ಯೋಜನೆಯ ಮೂಲಕ ಬ್ಯಾಂಕಿನಿಂದ ಸಾಲ ಪಡೆಯುವುದು ಗ್ರಾಮಸ್ಥರಿಗೆ ಈಗ ಸರಳವಾಗಲಿದೆ. 

ಮಹಾರಾಷ್ಟ್ರ, ಕರ್ನಾಟಕ, ಹರಿಯಾಣ, ಉತ್ತರ ಪ್ರದೇಶ, ಉತ್ತರಾಖಂಡ್, ಮಧ್ಯಪ್ರದೇಶ ಮತ್ತು ಪಂಜಾಬ್ ಮತ್ತು ರಾಜಸ್ಥಾನದ ಆಯ್ದ ಹಳ್ಳಿಗಳಲ್ಲಿ 2020-21ನೇ ಅವಧಿಯಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದ್ದು, ಇದನ್ನು ದೇಶಾದ್ಯಂತ ವಿಸ್ತರಿಸಲಾಗುತ್ತಿದೆ. 

ಈ ಹಿಂದೆ ಸ್ವಾಮಿತ್ವ [ಹಳ್ಳಿಗಳ ಸಮೀಕ್ಷೆ ಮತ್ತು ಗ್ರಾಮ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದೊಂದಿಗೆ ಮ್ಯಾಪಿಂಗ್ ಮಾಡುವ] ಯೋಜನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, 2020 ರ ಏಪ್ರಿಲ್ 24 ರಂದು ಉದ್ಘಾಟನೆ ಮಾಡಿದ್ದರು. ಗ್ರಾಮೀಣ ಭಾರತದಲ್ಲಿ ಸ್ವಾವಲಂಬನೆ ಮತ್ತು ಸಾಮಾಜಿಕ –  ಆರ್ಥಿಕ ಸಬಲೀಕರಣ ಉದ್ದೇಶದಿಂದ ಈ ಕೇಂದ್ರೀಯ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಗ್ರಾಮೀಣ ಪ್ರದೇಶದಲ್ಲಿ ಆಧುನಿಕ ತಂತ್ರಜ್ಞಾನದ ಸಾಧನಗಳನ್ನು ಬಳಸಿ ಮ್ಯಾಪಿಂಗ್ ಮಾಡಿ ಮತ್ತು ಸಮೀಕ್ಷೆ ಕೈಗೊಳ್ಳುವ ಮೂಲಕ ಗ್ರಾಮೀಣ ಭಾರತದಲ್ಲಿ ಪರಿವರ್ತನೆ ತರುವ ಉದ್ದೇಶವನ್ನು ಈ ಯೋಜನೆ  ಒಳಗೊಂಡಿದೆ. ಗ್ರಾಮೀಣ ಜನತೆ ಸಾಲ ಮತ್ತು ಇತರೆ ಹಣಕಾಸಿನ ಸವಲತ್ತುಗಳನ್ನು ಪಡೆಯಲು ಗ್ರಾಮಸ್ಥರು ಆಸ್ತಿಯನ್ನು ಆರ್ಥಿಕ ಶಕ್ತಿಯಾಗಿ ಬಳಸಲು ಇದು ದಾರಿ ಮಾಡಿಕೊಡುತ್ತದೆ. 2021-2025 ರ ಅವಧಿಯಲ್ಲಿ ದೇಶದ ಸುಮಾರು 6.62 ಲಕ್ಷ ಹಳ್ಳಿಗಳಲ್ಲಿ ಈ ಯೋಜನೆ ಜಾರಿಯಾಗಲಿದೆ.

ಅಂತೆಯೇ 2020-2021 ರ ಸಾಲಿನಲ್ಲಿ ಮಹಾರಾಷ್ಟ್ರ, ಕರ್ನಾಟಕ, ಹರಿಯಾಣ, ಉತ್ತರ ಪ್ರದೇಶ, ಉತ್ತರಾಖಂಡ, ಮಧ್ಯಪ್ರದೇಶ ರಾಜ್ಯಗಳಲ್ಲಿ ಮತ್ತು ಪಂಜಾಬ್ ಹಾಗೂ ರಾಜಸ್ಥಾನ ರಾಜ್ಯಗಳ ಕೆಲ ಆಯ್ದ ಹಳ್ಳಿಗಳಲ್ಲಿ ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತರಲಾಗಿತ್ತು ಎಂದು ಕೇಂದ್ರ ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

SCROLL FOR NEXT