ಆಕ್ಸಿಜನ್ ಸಿಲಿಂಡರ್ ಸಾಗಿಸುತ್ತಿರುವ ಕಾರ್ಮಿಕರು 
ದೇಶ

ವೈದ್ಯಕೀಯೇತರ ಉದ್ದೇಶಗಳಿಗೆ ಆಕ್ಸಿಜನ್ ಬಳಕೆ ನಿಷೇಧ, ಉತ್ಪಾದನೆ ಗರಿಷ್ಠಗೊಳಿಸಲು ಕಂಪನಿಗಳಿಗೆ ಕೇಂದ್ರ ಸೂಚನೆ

ಹೆಚ್ಚಿನ ಜನರಿಗೆ ಆಮ್ಲಜನಕ ಲಭ್ಯವಾಗುವಂತೆ ಮಾಡುವ ಪ್ರಯತ್ನದ ಭಾಗವಾಗಿ ಕೇಂದ್ರ ಸರ್ಕಾರ ಯಾವುದೇ ವೈದ್ಯಕೀಯೇತರ ಉದ್ದೇಶಕ್ಕಾಗಿ ಲಿಕ್ವಿಡ್ ಆಕ್ಸಿಜನ್ ಬಳಸುವುದನ್ನು..

ನವದೆಹಲಿ: ಹೆಚ್ಚಿನ ಜನರಿಗೆ ಆಮ್ಲಜನಕ ಲಭ್ಯವಾಗುವಂತೆ ಮಾಡುವ ಪ್ರಯತ್ನದ ಭಾಗವಾಗಿ ಕೇಂದ್ರ ಸರ್ಕಾರ ಯಾವುದೇ ವೈದ್ಯಕೀಯೇತರ ಉದ್ದೇಶಕ್ಕಾಗಿ ಲಿಕ್ವಿಡ್ ಆಕ್ಸಿಜನ್ ಬಳಸುವುದನ್ನು ಭಾನುವಾರ ನಿಷೇಧಿಸಿದೆ ಮತ್ತು ಉತ್ಪಾದನೆಯನ್ನು ಗರಿಷ್ಠಗೊಳಿಸುವಂತೆ ಆಕ್ಸಿಜನ್ ಉತ್ಪಾದನಾ ಘಟಕಗಳಿಗೆ ಸೂಚಿಸಿದೆ.

ಕೊರೋನಾ ವೈರಸ್ ಸಾಂಕ್ರಾಮಿಕದ ಹೊಸ ಅಲೆಯಿಂದ ದೇಶ ತತ್ತರಿಸಿದ್ದು, ಅನೇಕ ಭಾಗಗಳಲ್ಲಿ, ವಿಶೇಷವಾಗಿ ದೆಹಲಿಯಲ್ಲಿ ವೈದ್ಯಕೀಯ ಆಮ್ಲಜನಕದ ತೀವ್ರ ಕೊರತೆ ಕಂಡು ಬಂದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರ ಈ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರ ದೇಶದ ವಿವಿಧ ಭಾಗಗಳಲ್ಲಿ ಆಮ್ಲಜನಕ ಉತ್ಪಾದಿಸಲು ಪ್ರಯತ್ನಿಸುತ್ತಿದೆ ಮತ್ತು ಆಕ್ಸಿಜನ್ ಸಾಗಾಣೆಗೆ ವಿಶೇಷ ರೈಲುಗಳನ್ನು ಓಡಿಸುವ ಮೂಲಕ ಹೆಚ್ಚು ಹಾನಿಗೊಳಗಾದ ರಾಜ್ಯಗಳಲ್ಲಿ ಆಮ್ಲಜನಕ ಲಭ್ಯವಾಗುವಂತೆ ಮಾಡುತ್ತಿದೆ.

ಇನ್ನು ಕೇಂದ್ರ ಸರ್ಕಾರ ದೇಶದಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಯುನೈಟೆಡ್ ಸ್ಟೇಟ್ಸ್‌ನಿಂದ ಆಮ್ಲಜನಕ ಮತ್ತು ಆಮ್ಲಜನಕ ಸಾಂದ್ರಕಗಳನ್ನು ಸಾಗಿಸಲು ಸಿಂಗಾಪುರ ಮತ್ತು ಯುಎಇಯಂತಹ ದೇಶಗಳಿಂದ ಕ್ರಯೋಜೆನಿಕ್ ಟ್ಯಾಂಕ್‌ಗಳನ್ನು ಪಡೆಯುತ್ತಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿ ನೀಡಲಾಗಿರುವ ಅಧಿಕಾರವನ್ನು ಚಲಾಯಿಸಿ, "ಯಾವುದೇ ವೈದ್ಯಕೀಯೇತರ ಉದ್ದೇಶಕ್ಕಾಗಿ ದ್ರವ ಆಮ್ಲಜನಕದ ಬಳಕೆಯನ್ನು ಅನುಮತಿಸಲಾಗುವುದಿಲ್ಲ ಮತ್ತು ಎಲ್ಲಾ ಉತ್ಪಾದನಾ ಘಟಕಗಳು ತಮ್ಮ ದ್ರವ ಆಮ್ಲಜನಕದ ಉತ್ಪಾದನೆಯನ್ನು ಗರಿಷ್ಠಗೊಳಿಸಬೇಕು" ಎಂದು ಆಕ್ಸಿಜನ್ ಘಟಕಗಳಿಗೆ ಸೂಚಿಸುವಂತೆ ಕೇಂದ್ರ ಗೃಹ ಕಾರ್ಯದರ್ಶಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಸರ್ಕಾರಗಳಿಗೆ ನಿರ್ದೇಶನ ನೀಡಿದ್ದಾರೆ. 

ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಆಕ್ಸಿಜನ್ ವೈದ್ಯಕೀಯ ಉದ್ದೇಶಗಳಿಗಾಗಿ ಮಾತ್ರ ಸರ್ಕಾರಕ್ಕೆ ಲಭ್ಯವಾಗುವಂತೆ ಮಾಡಿ ಎಂದು ಕೇಂದ್ರ ಆದೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT